Astrology: ನೀವು ಕೈಗೊಂಡ ಕಾರ್ಯ ಸಫಲವಾಗಲಿಲ್ಲ ಎಂಬ ಹತಾಶಭಾವ ಈ ರಾಶಿಯವರದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 02 ಜುಲೈ​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ನೀವು ಕೈಗೊಂಡ ಕಾರ್ಯ ಸಫಲವಾಗಲಿಲ್ಲ ಎಂಬ ಹತಾಶಭಾವ ಈ ರಾಶಿಯವರದು
ನೀವು ಕೈಗೊಂಡ ಕಾರ್ಯ ಸಫಲವಾಗಲಿಲ್ಲ ಎಂಬ ಹತಾಶಭಾವ ಈ ರಾಶಿಯವರದು
Follow us
|

Updated on: Jul 02, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜುಲೈ. 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸುಕರ್ಮಾ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 15:51 ರಿಂದ 17:28ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 ರಿಂದ ಬೆಳಿಗ್ಗೆ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:37 ರಿಂದ 14:14ರ ವರೆಗೆ.

ಮೇಷ ರಾಶಿ: ಇಂದು ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಸಾಲವನ್ನು ಸರ್ಕಾರ ತೀರಿಸುತ್ತದೆ ಎಂಬ ಭಾವದಿಂದ ಎಷ್ಟಾದರೂ ಸಾಲವನ್ನು ಮಾಡಬೇಡಿ. ನಿಮಗೇ ಕಷ್ಟವಾಗುವುದು. ಉದ್ಯೋಗದ ಸ್ಥಳದಲ್ಲಿ ಆಗುವ ಕಲಹದಲ್ಲಿ ಯಾರ ಪರವಾಗಿ ಇರಬೇಕು ಎನ್ನುವ ಗೊಂದಲ ಕಾಣಿಸಿ ತಟಸ್ಥರಾಗಬಹುದು. ಶತ್ರುವನ್ನು ಮಿತ್ರನನ್ನು ಮಾಡಿಕೊಳ್ಳುವ ತಂತ್ರವನ್ನು ಹೂಡುವಿರಿ. ಕೆಲವು ಅಭ್ಯಾಸವು ಚಟವಾಗಿ ಪರಿವರ್ತನೆ ಆಗಬಹುದು. ಬಿಡಸಲಾಗದ ಸಮಸ್ಯೆಗಳು ನಿಮ್ಮನ್ನು ಇಬ್ಬಂದಿ ಮಾಡಬಹುದು. ಆಪ್ತರ ಸಲಹೆಯನ್ನು ಪಡೆಯಿರಿ. ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಪ್ರಯಾಣವನ್ನು ಮಾಡುವಿರಿ.

ವೃಷಭ ರಾಶಿ: ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಕಾನೂನಿಗೆ ವಿರುದ್ಧವಾದ ಕೆಲಸದಿಂದ ಹಣವನ್ನು ಪಡೆಯಲು ಹೋಗಬಹುದು. ಅದು ನಿಮ್ಮ ವೃತ್ತಿಜೀವನದ ಮೇಲೂ ಪರಿಣಾಮವನ್ನು ಉಂಟುಮಾಡಬಹುದು. ಕಲೆದುಕೊಂಡಿದ್ದನ್ನು ಪಡೆಯುವ ತನಕ ಸಮಾಧಾನ‌ಸಿಗದು. ಬೇರೆಯವರಲ್ಲಿ ನಿಮ್ಮ ಬಗ್ಗೆ ಇರುವ ಭವನೆಗಳು ಗೊತ್ತಾಗಬಹುದು. ನೀರಿನ ಪ್ರದೇಶಗಳಲ್ಲಿ ಹೋಗುವಾಗ ಜಾಗರೂಕತೆ ಮುಖ್ಯ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಹೂಡಿಕೆಯಲ್ಲಿ ಲಾಭವು ಕಾಣಿಸುವುದು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ: ಇಂದು ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಕಲಹವಾಗಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ಒಂದೇ ವಿಚಾರವನ್ನು ಮತ್ತೆ ಮತ್ತೆ ಹೇಳಿದೆ ಎನ್ನಿಸಿದರೂ ಹಿರಿಯರ ಮಾತುಗಳನ್ನು ಅವರ ಮೇಲಿನ‌ ಗೌರವದಿಂದ ಕೇಳಬೇಕಾಗಬಹುದು. ಹಳೆಯ ಖಾಯಿಲೆಯು ಮತ್ತೆ ಬರಬಹುದು. ಅವಕಾಶಗಳನ್ನು ಬಿಟ್ಟಕೊಟ್ಟ ಇದ್ದಲ್ಲಿಯೇ ಇರಬೇಡಿ. ಸಮಯವನ್ನು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳಿ. ನಿಮ್ಮನ್ನು ಬೆಂಬಲಿಸುವವರಿಗೆ ನಿಮ್ಮ ಬೆಂಬಲವನ್ನು ನೀಡುವಿರಿ. ಆತಂಕದ ಸಂದರ್ಭಗಳು ಬರಬಹುದು. ತಾಳ್ಮೆಯಿಂದ ಸರಿಮಾಡಿಕೊಳ್ಳಿ. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ.

ಕಟಕ ರಾಶಿ: ಇಂದು ನೀವು ದುಶ್ಚಟದಿಂದ ದೂರವಿರಲು ದಾರಿ ಹುಡುಕುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಇರುತ್ತದೆ. ಸ್ನೇಹಿತರಿಗೋಸ್ಕರ ಸಮಯವನ್ನು ಕೊಡಬೇಕಾಗಿಬರಬಹುದು. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ. ಹಿಂದೆ ಪಟ್ಟ ಕಷ್ಟದಿಂದ ನಿಮಗೆ ಇಂದು ಸುಖ, ನೆಮ್ಮದಿಗಳು ಸಿಗಲಿವೆ. ನಿಮ್ಮ ಆಲೋಚನೆಗಳನ್ನು ಬೇರೆಯವರ ಮೇಲೆ ಹೇರಬೇಡಿ. ಕಾರ್ಯಕ್ರಮದ‌ ಕಾರಣ ದೂರ ಓಡಾಟ ಬರಬಹುದು. ಕೋಪವನ್ನು ಆದಷ್ಟು ಬುದ್ಧಿಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ. ಮಕ್ಕಳಿಗೆ ನಿಮ್ಮಿಂದ ಪ್ರೊತ್ಸಾಹ ಬೇಕು. ಶಿಕ್ಷಿತರಾದಕಾರಣ ಇದನ್ನು ಹಿಡಿತದಲ್ಲಿ ಇಟ್ಟಿಕೊಳ್ಳಬೇಕಾಗುವುದು. ಯಾವುದನ್ನೂ ಆಗದು ಎಂಬ ಮಾತು ನಿಮ್ಮಿಂದ ಬರುವುದು ಬೇಡ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ