Horoscope: ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 25 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು
ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು
Follow us
|

Updated on: Jun 25, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್. 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ 15:50 ರಿಂದ 17:27ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:21 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 14:13ರ ವರೆಗೆ.

ಮೇಷ ರಾಶಿ :ಇಂದು ನಿಮಗೆ ಗೊತ್ತಿಲ್ಲದೇ ಸುಕೃತವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ಸೇರಿಸುವುದು. ಕೆಲವೇ ಕೆಲವು ಮಿತ್ರರ ಬಳಗವನ್ನು ಹೊಂದಿರುವಿರಿ. ನಿಮಗೆ ಎಂದು ಯಾರ ಬಳಿಯೂ ಏನನ್ನೂ ಹೇಳಬೇಕು ಎಂದು ಅನ್ನಿಸದಿರಬಹುದು. ನಿಮ್ಮ ಬಗ್ಗೆ ಹಗುರವಾದ ಮಾತುಗಳು ಬರಬಹುದು. ಖಾಸಗಿ ಉದ್ಯೋಗದಲ್ಲಿ ಇದ್ದವರಿಗೆ ಮುಖ್ಯವಾದ ಅಧಿಕಾರ ಸಿಗಲಿದೆ. ವೈಯಕ್ತಿಕ ಜೀವನವನ್ನು ಕೆಲವರು ಅನುಸರಿಸಲು ಇಷಗಟಪಡಬಹುದು. ನೀವಂದಕೊಂಡಿದ್ದೇ ಸತ್ಯ ಎಂಬುದನ್ನು ಬಿಟ್ಟು ಸಂತೋಷದದಿಂದ‌ ಮಾತನಾಡಿ. ನಗುಮುಖವು ನಿಮ್ಮನ್ನು ಮತ್ತಷ್ಡು ಆಪ್ತವಾಗಿಸೀತು. ಪ್ರಾಮಾಣಿಕವಾದ‌ ಪ್ರಯತ್ನವು ಇರಲಿ. ಸುಲಭವಾದ ಕಾರ್ಯವನ್ನು ಮೊದಲು ಮಾಡಿ ಮುಗಿಸಿ. ಫಲವೂ ಉತ್ತಮವಾದುದೇ ಸಿಗುವುದು. ಹೆಚ್ಚಿನ ನೀರಿಕ್ಷೆಯನ್ನು ಮಾಡಿ ಕೊರಗಬೇಡಿ ಆನಂತರದ‌ ಜೀವನದಲ್ಲಿ. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ.

ವೃಷಭ ರಾಶಿ :ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಅತಿಯಾದ ಪ್ರಯಾಣದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಕುಟುಂಬದ ವಿರೋಧದ ನಡುವೆಯೂ ನೀವು ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ನಂಬಿಕೆಯನ್ನು ಕಳೆದುಕೊಳ್ಳುವುದು ಸುಲಭ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಬಂಧುಗಳ ನಡುವೆ ಭಿನ್ನಾಭಿಪ್ರಾಯವು ಬರಲಿದೆ. ಬರುವ ಹಣದ ನಿರೀಕ್ಷೆಯಲ್ಲಿ ಇರುವುದು ಬೇಡ. ನಿಮ್ಮವರ ಆರೋಗ್ಯದ ಬಗ್ಗೆ ಗಮನಕೊಡುವಿರಿ. ರಾಜಕೀಯಕ್ಕೆ ಪ್ರವೇಶಿಸಬೇಕು ಎನ್ನುವ ಹಂಬಲ ಪೂರ್ಣವಾಗದೇ ಇರಬಹುದು. ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ.

ಮಿಥುನ ರಾಶಿ :ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸದ ಕಡೆ ಗಮನವಿಡಿ. ಅದೇ ಉತ್ತರವಾಗಲಿದೆ. ನಿಮ್ಮ ಎಂದಿನ‌ ನಿಚ್ಚಲ ಮನಸ್ಸಿನಿಂದ ವಿಚಲಿತರಾಗಬೇಡಿ. ನಿಮಗೆ ಯಾರಿಂದಲಾದರೂ ಕೆಲಸವಾಗಬೇಕಿದ್ದರೆ ಪ್ರೀತಿಯಿಂದ ಹೇಳಿ, ಅನಾಯಾಸವಾಗಿ ಆಗುವುದು. ನೀವಿಂದು ನಡವಳಿಕೆಯಿಂದ ಎಲ್ಲರ ಮನಗೆಲ್ಲುವಿರಿ. ವ್ಯಪಾರಕ್ಕೆ ವಿದೇಶದ ನಂಟು ಸಿಗುವ ಸಾಧ್ಯತೆ ಇದೆ. ನೀವಿಂದು ನಿಮ್ಮ ಗುರುಗಳನ್ನು ಕಾಣಬೇಕೆನಿಸಿ ಅವರನ್ನು ಭೇಟಿಯಾಗಲು ಇಚ್ಛಿಸುವಿರಿ. ಕೆಲಸಗಳನ್ನು ನಿರಾಸಕ್ತಿಯಿಂದ ಮಾಡಬೇಡಿ. ಪಾಲುದಾರಿಕೆ ನಿಮಗೆ ಸರಿಯಾಗದು. ಸಮಾಜದ ಬಗ್ಗೆ ಚಿಂತಕರಾಗಿದ್ದರೆ ಅತಿಥಿಯಾಗಿ ನೀವು ಇರುವಿರಿ. ಒತ್ತಾಯಕ್ಕೆ ನೀವು ಕಾರ್ಯವನ್ನು ಮಾಡಬೇಕಾಗುವುದು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ.

ಕರ್ಕ ರಾಶಿ :ಇಂದು ನೀವು ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವಿರಿ. ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ‌ಹರೊಯವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಸಾಧ್ಯವಾದಷ್ಟು ಇಂದು ಮೌನವಾಗಿ ಇರುವುದಕ್ಕೆ ಪ್ರಯತ್ನಿಸಿ. ಉದ್ಯೋಗದ ನಿಮಿತ್ತ ಹೊರ ಪ್ರದೇಶಕ್ಕೆ ನಡೆಯಬೇಕಾಗಬಹುದು. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಚೇತರಿಕೆ ಕಂಡರೂ ಇನ್ನಷ್ಟು ಸಂಪಾದಿಸುವ ಆಸೆ ಇರಲಿದೆ. ಯಾರದೋ ಕಾರ್ಯವನ್ನು ನಿಮ್ಮದೆಂದು ಬಿಂಬಿಸುವುದು ಬೇಡ. ಸರ್ಕಾರದಿಂದ ಲಾಭವನ್ನು ಪಡೆಯದೇ ಸ್ವಂತವಾಗಿ ಉದ್ಯೋಗವನ್ನು ನಡೆಸುತ್ತೇನೆಂಬ ನಿರ್ಧಾರ ಮಾಡಲಿದ್ದೀರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ, ಹಣವನ್ನು ಖಾಲಿ ಮಾಡುವಿರಿ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!