AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದಿನ ರಾಶಿಭವಿಷ್ಯ, ಈ ರಾಶಿಯವರು ದುಡುಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 1) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಇಂದಿನ ರಾಶಿಭವಿಷ್ಯ, ಈ ರಾಶಿಯವರು ದುಡುಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ
ಇಂದಿನ ರಾಶಿಭವಿಷ್ಯ Image Credit source: Getty Images
TV9 Web
| Edited By: |

Updated on: Jul 01, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಭ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:59 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:50 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:08 ರಿಂದ 07:45 ರ ವರೆಗೆ.

ಸಿಂಹ: ಅದೃಷ್ಟವನ್ನು ನೀವು ಹುಡುಕಿಕೊಂಡು ಹೋಗಬೇಡಿ. ನಿಮ್ಮ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ನಿಮಗೆ ಹೆಚ್ಚಿನ ಆದಾಯದ ಅವಶ್ಯಕತೆ ಇರಲಿದೆ. ಅದಕ್ಕಾಗಿ ನೀವು ಏನನ್ನಾದರೂ ಆದಾಯದ ಮೂಲವನ್ನು ಪಡೆದುಕೊಳ್ಳಬೇಕಾಗುವುದು. ಹೊಸತನ್ನು ಯೋಚಿಸಿ ಅದನ್ನು ಕ್ರಿಯಾರೂಪಕ್ಕೆ ತೆಗೆದುಕೊಂಡು ಬನ್ನಿ. ಉದ್ಯೋಗದ ಸ್ಥಳದಲ್ಲಿ ನೀವು ಬಹಳ ಶಿಸ್ತಿನಿಂದ ಕೆಲಸವನ್ನು ಮಾಡುವಿರಿ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಲು ಸಮಯವನ್ನು ಕೊಡುವಿರಿ. ಸಂಗಾತಿಯು ನಿಮ್ಮನ್ನು ಪ್ರೀತಿಯಿಂದ ನೋಡಿಕೊಳ್ಳುವಳು.

ಕನ್ಯಾ: ಆಗಿಹೋದ ವಿಷಯವನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುವಿರಿ. ಪ್ರಯಾಣವು ಇಂದು ಕಷ್ಟಕರವಾಗಬಹುದು. ಅನೇಕ ವಿಷಯಗಳತ್ತ ನಿಮ್ಮ ಗಮನವಿರಲಿದ್ದು ಯಾವುದುನ್ನೂ ಸರಿಯಾಗಿ‌ ಪೂರ್ಣ ಮಾಡುವುದಿಲ್ಲ. ದೂರದ ಮಿತ್ರರು ನಿಮಗೆ ಅಗತ್ಯವಿರುವ ಸಹಕಾರವನ್ನು ನೀಡಬಹುದು. ಹೆಚ್ಚು ಪರಿಶ್ರಮದಿಂದ ಕೆಲಸವನ್ನು ಮಾಡುವಿರಿ. ಯಾರ ಸಹಕಾರವನ್ನೂ ಬಯಸದೇ ನಿಮ್ಮ ಜವಾಬ್ದಾರಿಯಲ್ಲಿ ನೀವು ಇರುವಿರಿ. ಸಮಯವನ್ನು ವ್ಯರ್ಥ ಮಾಡಿ ಸಂಕಟಪಡುವಿರಿ. ದಾನ‌ ಮಾಡುವ ಮನಸ್ಸು ನಿಮಗೆ ಇರದು. ಅವಕಾಶವನ್ನು ಬಿಟ್ಟಕೊಂಡು ದುಃಖಿಸುವಿರಿ. ಮಕ್ಕಳಿಂದ ಅಲ್ಪ ಸಂತೋಷವು ಸಿಗಬಹುದು.

ತುಲಾ: ಸಂಗಾತಿಯ ವಿಚಾರವಾಗಿ ನೀವು ಹೆಚ್ಚು ಚಿಂತಯಲ್ಲಿ ಇರುವಿರಿ. ಸಾಧ್ಯವಾದಷ್ಟು ಮಾತನ್ನು ಕಡಿಮೆ ಮಾಡಿ, ಕೃತಿಯಲ್ಲಿ ನಿಮ್ಮ ಕೆಲಸವಿರಲಿ. ಇಂದು ಹೆಚ್ಚಿನ ಸಮಯವನ್ನು ನೀವು ಖರೀದಿಗೆಂದು ತೆಗೆದಿಡುವಿರಿ. ನಿಮಗೆ ಅಂಟಿದ ಅಪವಾದವು ನಿರಾಧಾರ ಎಂದು ಸಾಬೀತಾಗಬಹುದು. ಸಮಯಸ್ಫೂರ್ತಿಯಿಂದ ತೊಂದರೆಯ ಸನ್ನಿವೇಶವನ್ನು ದಾಟುವಿರಿ. ಸುಮ್ಮನೇ ಅನುಮಾನದಿಂದ ಸ್ನೇಹವನ್ನು ಹಾಳುಮಾಡಿಕೊಳ್ಳಬಹುದು. ಸಿಗಬೇಕಾದ ಸಮಯಕ್ಕೆ ಗೌರವವು ಸಿಗಲಿದೆ. ದುಡುಕಿ ನಿರ್ಧಾರವನ್ನು ತೆಗೆದುಕೊಳ್ಳುವುದು ಬೇಡ.

ವೃಶ್ಚಿಕ: ಧಾರ್ಮಿಕ ಕಾರ್ಯಕ್ರಮಗಳನ್ನು ಇಂದು ಅನಿವಾರ್ಯವಾಗಿ ಮಾಡುವಿರಿ. ನಿಮ್ಮ ಯೋಜನೆಯನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸಂಕೋಚದ ಸ್ವಭಾವವು ನಿಮ್ಮ ಅನೇಕ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತದೆ. ಸಂಬಂಧಗಳನ್ನು ನೀವು ಇಂದು ಬಿಡಲು ಪ್ರಯತ್ನಿಸುವಿರಿ. ವಾಹನ ಸಂಚಾರಕ್ಕೆ ನಿಮಗೆ ತೊಂದರೆಯಾಗಬಹುದು. ನಿಮ್ಮ ಪ್ರಯಾಣದ ಯೋಜನೆಯನ್ನು ಬದಲಿಸಿಕೊಳ್ಳುವುದು ಉತ್ತಮ. ಹಣದ ಕೊರತೆಯನ್ನು ನೀವು ಸ್ವಲ್ಪಮಟ್ಟಿಗೆ ನೀಗಿಸಿಕೊಳ್ಳುವಿರಿ. ಶುಭ ಸುದ್ದಿಯು ನಿಮಗೆ ಸ್ವಲ್ಪ ಸಂತೋಷವನ್ನು ತರಬಹುದು. ಮಕ್ಕಳ‌ ಜೊತೆ ಇರುವಿರಿ.

-ಲೋಹಿತಶರ್ಮಾ

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?