AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಾಗಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಾಗಿರಿ
ಇಂದಿನ ರಾಶಿಭವಿಷ್ಯ (ಜೂನ್ 12)Image Credit source: istock
Rakesh Nayak Manchi
|

Updated on: Jun 12, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 12 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಆಯುಷ್ಮಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.

ಸಿಂಹ: ನಿಮ್ಮ ಅಸಭ್ಯ ಮಾತುಗಳು ವ್ಯಕ್ತಿತ್ವವನ್ನು ತೋರಿಸಲಿವೆ. ಸಮಸ್ಯೆಗಳನ್ನು ಬಹಳ ಉತ್ಸಾಹದಿಂದ ಎದುರಿಸುವಿರಿ. ಉದ್ಯೋಗದಲ್ಲಿ ನಿಮಗೆ ಉಂಟಾದ ಗೊಂದಲವನ್ನು ಮೇಲಧಿಕಾರಿಗಳಿಗೆ ತಿಳಿಸಿ. ಪರಿಹಾರವನ್ನು ಕಂಡುಕೊಳ್ಳಿ. ತಿಳಿಸದೇ ಇರಬೇಡಿ. ನೀವು ಇತರರನ್ನು ಟೀಕಿಸುವುದನ್ನು ನಿಲ್ಲಿಸಿದರೆ, ಸಂಬಂಧಗಳಿಂದ ಉತ್ತಮ ಪ್ರಯೋಜನವನ್ನು ಪಡೆಯುತ್ತೀರಿ. ಎಲ್ಲವೂ ಸಾಮಾನ್ಯವಾಗಿದ್ದರೂ ಮನಸ್ಸು ನಿರಾಸಕ್ತಿಯಿಂದ ಬಳಲುತ್ತದೆ. ನಿಮ್ಮ ಕಡಿಮೆಯಾಗುವ ಭಯವು ಕಾಡಬಹುದು. ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳುವಿರಿ. ತಂದೆಯ ಮಾತು ನಿಮಗೆ ಸರಿ ಕಾಣಿಸದೇ ಇರುವುದು.

ಕನ್ಯಾ: ಚಿಂತೆಗಳಿಂದ ಸುತ್ತುವರಿದ ಮನಸ್ಸನ್ನು ದೇವರಲ್ಲಿ ನೆಲೆಗೊಳಿಸಿ ಸಮಾಧಾನಪಟ್ಟುಕೊಳ್ಳಿ. ದೃಢವಾದ ನಿರ್ಧಾರವು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ಕೆಲಸದ ಸ್ಥಳದಲ್ಲಿ ಅನೂಹ್ಯ ಸನ್ನಿವೇಶಗಳು ಅಡ್ಡಿಯಾಗಬಹುದು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ನಿಷ್ಕಾಳಜಿಯಿಂದ ಇರಬಾರದು. ಧಾರ್ಮಿಕ ನಾಯಕರಿಗೆ ಹೆಚ್ಚು ಲಾಭ ಹಾಗೂ ಯಶಸ್ಸು ಸಿಗಬಹುದು. ಪುಣ್ಯಸ್ಥಳಕ್ಕೆ ನೀವು ಹೋಗಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮನಸ್ಸು ವ್ಯಾಕುಲತೆಯಿಂದ ಇರಲಿದೆ. ಇಂದು ಆಧ್ಯಾತ್ಮಿಕ ಭಾವನೆಗಳು ನಿಮ್ಮ ಮನಸ್ಸಿನ ಮೇಲೆ ಗಾಢವಾದ ಪರಿಣಾಮವನ್ನು ಬೀರಬಹುದು.

ತುಲಾ: ನಿಮ್ಮ ಮೇಲೆ ನೀವು ನಂಬಿಕೆಯಿಡಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದಿಂದ ಮಾಡಬೇಕಿದ್ದ ಕೆಲಸವು ಅಪೂರ್ಣವಾಗಲಿದೆ. ಯೋಜಿತ ಕೆಲಸಗಳು ಫಲಪ್ರದವಾಗಲಿವೆ. ನೈತಿಕ ಮತ್ತು ಅನೈತಿಕತೆಯ ಬಗ್ಗೆ ಯೋಚಿಸುವ ಮನಸ್ಸು ಭೌತಿಕ ಪರಿಸರದೊಂದಿಗೆ ಹೆಜ್ಜೆ ಹಾಕಲು ಸಾಧ್ಯವಾಗುವುದಿಲ್ಲ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರದಿಂದಿರಿ. ಹೊಸ ವ್ಯಾಪಾರ ಸಂಬಂಧಗಳು ತೀವ್ರಗೊಳ್ಳಬಹುದು. ಇಂದು ಹಿರಿಯರ ಬೆಂಬಲ ನಿಮಗೆ ಸಿಗಲಿದೆ. ಕೆಲಸದ ವಾತಾವರಣವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಕೆಲವು ಘಟನೆಗಳು ಇಂದು ಆರ್ಥಿಕ ಮತ್ತು ಕೌಟುಂಬಿಕ ಕಾಳಜಿಗಳ ಮನಸ್ಸಿನ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ನೀವು ಚಾತುರ್ಯದಿಂದ ಸಂಬಂಧದ ಪ್ರಯೋಜನವನ್ನು ಪಡೆದುಕೊಳ್ಳುವಿರಿ. ಕೆಲಸದ ಸ್ಥಳದಲ್ಲಿ ನಿಮ್ಮ ವಾಕ್ಚಾತುರ್ಯದಿಂದ ಲಾಭವನ್ನು ನೀವು ಪಡೆದುಕೊಳ್ಳುವಿರಿ. ಮನಸ್ತಾಪವನ್ನು ತಣಿಸಲು ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವಿರಿ. ಅನನುಕೂಲದ ಸ್ಥಿತಿಯಲ್ಲಿಯೂ ಲಾಭವನ್ನು ಪಡೆಯವ ಕಲೆಯನ್ನು ನೀವು ತಿಳಿದಿರುವಿರಿ. ಕೆಲಸಗಳ ನಡೆವೆಯೂ ನೀವು ನಿಮ್ಮ ಸಂಗಾತಿಯ ಕುರಿತು ಆಲೋಚನೆ ಮಾಡುವಿರಿ.

-ಲೋಹಿತಶರ್ಮಾ ಇಡುವಾಣಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್