AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 2) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 12:20 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 2 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಕಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 10:54 ರಿಂದ 12:30ರ ವರೆಗೆ, ಯಮಘಂಡ ಕಾಲ 03:44 ರಿಂದ 05:20ರ ವರೆಗೆ, ಗುಳಿಕ ಕಾಲ 07:20 ರಿಂದ 09:17ರ ವರೆಗೆ.

ಸಿಂಹ: ವಿವಾಹದ ಸುಖವನ್ನು ಅನುಭವಿಸುತ್ತ ಇರುವಿರಿ. ದಾಂಪತ್ಯದಲ್ಲಿ ಸಣ್ಣ ಕಲಹವೂ ಆಗಿ ಒಂದಾಗುವಿರಿ. ಮಕ್ಕಳು ಬೇಕೆನ್ನಿಸಬಹುದು. ವೈದ್ಯರ ಸಲಹೆಯನ್ನು ಪಡೆಯಿರಿ. ತಂದೆಯರ ಸೇವೆಯನ್ನು ಮಾಡುವಿರಿ. ನೂತನ ವಸ್ತುಗಳ ಖರೀದಿಯನ್ನು ನೀವು ಮಾಡಲಿದ್ದೀರಿ. ನಿಮ್ಮ ವರ್ತನೆಯನ್ನು ಅನುಕರಿಸಬಹುದು. ನಿಮ್ಮನ್ನು ಗುರುತಿಸಬೇಕು ಎನ್ನುವ ಹಂಬಲ ಇರಲಿದೆ. ನಿಮ್ಮ ಗುಣಗಳ‌ ದುರುಪಯೋಗವೂ ಆಗಲಿದೆ. ಪ್ರೀತಿಯಿಂದ ಹೇಳಿ ಆಗಬೇಕಾದುದನ್ನು ಮಾಡಿಸಿಕೊಳ್ಳಿ. ಮಕ್ಕಳಲ್ಲಿ ಸಂತೋಷವನ್ನು ನೀವು ಕಾಣುವಿರಿ.

ಕನ್ಯಾ: ಸರಳ ಜೀವನವು ನಿಮಗೆ ಇಷ್ಟವಾಗಬಹುದು. ಸಂಪಾದನೆಗೆ ಹಲವು ಮಾರ್ಗಗಳು ಕಂಡರೂ ನಿಮಗೆ ಅದು ಇಷ್ಟವಾಗದೇ ಇದ್ದೀತು. ಪಾಲುದಾರಿಕೆಯಲ್ಲಿ ಸದ್ಯ ಉದ್ಯೋಗವನ್ನು ಪ್ರಾರಂಭಿಸಿ. ನಿಮ್ಮ ಒಬ್ಬರ ಶ್ರಮವು ವ್ಯರ್ಥವಾಗಬಹುದು. ಸ್ನೇಹ ಬಳಗವು ದೊಡ್ಡದಾಗಬಹುದು. ನಿರ್ಮಾಣದ ಕೆಲಸವು ಬಹಳ ನಿಧಾನವಾಗಬಹುದು. ಇದರಿಂದ ನಿಮ್ಮಲ್ಲಿ ಆತಂಕ ಹೆಚ್ಚಬಹುದು. ಯಾರೋ ಮಾಡಿದ ತಪ್ಪಿಗೆ ಬೈಗುಳವನ್ನು ತಿನ್ನಬೇಕಾದೀತು. ಅಚಾತುರ್ಯದಿಂದ ಉದ್ಯೋಗದಲ್ಲಿ ನಷ್ಟವಾಗಬಹುದು. ಆಧಿಕಾರಿಗಳನ್ನೂ ಆಪ್ತರನ್ನೂ ನೀವು ಭೇಟಿಯಾಗಲಿದ್ದೀರಿ.

ತುಲಾ: ಎಲ್ಲವೂ ನಿಮ್ಮ ದೃಷ್ಟಿಯಿಂದ ಅಳೆಯುವುದು ಸರಿಯಲ್ಲ. ಕಛೇರಿಯ ಕೆಲಸಗಳು ನಿಮಗೆ ಅತಿಯಾಗಬಹುದು. ಮೇಲಧಿಕಾರಿಗಳಿಗೆ ವಾಸ್ತವವನ್ನು ತಿಳಿಸಿ. ನಿಮ್ಮ ವರ್ತನೆಯಲ್ಲಿ ಬದಲಾವಣೆ ಕಾಣಬಹುದು. ನಿಮ್ಮ ಸಮಯವು ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಸಾಧ್ಯತೆಗಳು ಬಹಳ ಇರಲಿವೆ. ಮುಂದಾಲೋಚನೆಯಿಲ್ಲದೇ ಏನನ್ನೂ ಮಾಡಲು ಹೋಗಬೇಡಿ. ಏಕಾಗ್ರತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನಟನೆಗೆ ಅವಕಾಶಗಳು ಸಿಗಬಹುದು.

ವೃಶ್ಚಿಕ: ಸುಮ್ಮನೇ ಯಾರ ಮೇಲಾದರೂ ಸಂದೇಹಪಡುತ್ತಾ ಇರುವುದು ಬೇಡ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಬೇಕಾದಲ್ಲಿಗೆ ಹೇಳಿ.‌ ವ್ಯವಹಾರವು ಅಷ್ಟಾಗಿ ಲಾಭವನ್ನು ತಂದುಕೊಡದು. ಶಿಸ್ತನ್ನು ರೂಢಿಸಿಕೊಳ್ಳುವುದು ಒಂದೇ ಬಾರಿಗೆ ಕಷ್ಟವಾದೀತು. ಧಾರ್ಮಿಕವಿಚಾರದಲ್ಲಿ ನೀವು ನಂಬಿಕೆಯನ್ನು ಕಳೆದುಕೊಳ್ಳುವುದು ಸರಿಯಲ್ಲ. ಕಾರಣಾಂತರಗಳಿಂದ ನೀವು ಹೋಗುವ ಪ್ರಯಾಣವು ಸ್ಥಗಿತಗೊಳ್ಳಬಹುದು. ಆಕಸ್ಮಿಕ ಸುದ್ದಿಯು ನಿಮ್ಮನ್ನು ವಿಚಲಿತ ಗೊಳಿಸೀತು.‌ ಆಡಳಿತಾತ್ಮಕ ವಿಚಾರದಲ್ಲಿ ನೀವು ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ. ಬೃಹತ್ ವಾಹನದಿಂದ ನೀವು ದೂರವಿರಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!