AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಸ್ವಭಾವಕ್ಕೆ ಹೊಂದಿಕೆಯಾಗುವ ಸಂಗಾತಿ ಸಿಗುಲಿದ್ದಾರೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 8) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಸ್ವಭಾವಕ್ಕೆ ಹೊಂದಿಕೆಯಾಗುವ ಸಂಗಾತಿ ಸಿಗುಲಿದ್ದಾರೆ
ಇಂದಿನ ರಾಶಿಭವಿಷ್ಯ, ಜೂನ್ 9Image Credit source: freepik
Rakesh Nayak Manchi
Rakesh Nayak Manchi|

Updated on:Jun 09, 2023 | 10:50 PM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 9 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಐಂದ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಯಮಘಂಡ ಕಾಲ‌ ಮಧ್ಯಾಹ್ನ 03:45 ರಿಂದ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ.

ಸಿಂಹ: ನಿಮಗೆ ನಿಮ್ಮ ಸಾಮರ್ಥ್ಯ ಗೊತ್ತಿದ್ದರೂ ಹಿಂದೆಟು ಹಾಕಬಹುದು. ಸ್ನೇಹಿತರ ಕಾರಣದಿಂದ ಮನೆಯಲ್ಲಿ ಕಲಹಗಳು ಉಂಟಾಗಬಹುದು. ಒತ್ತಡಕ್ಕೆ ಸಿಲುಕಿ ಕೆಟ್ಟ ಮಾರ್ಗವನ್ನು ಅನಿವಾರ್ಯವಾಗಿ ಹಿಡಿಯಬೇಕಾದೀತು. ಕುಟುಂಬ ಜೀವನದಲ್ಲಿ ಜಾಗರೂಕರಾಗಿರಿ, ಕೋಪವನ್ನು ನಿಮ್ಮ ಹತೋಟಿಯಲ್ಲಿ ಇಟ್ಟುಕೊಂಡಷ್ಟು ಉತ್ತಮವಾಗಲಿದೆ. ಹಣವೂ ನಿಮ್ಮ ಸ್ಥಾನಮಾನಕ್ಕೆ ಯೋಗ್ಯವಾಗಿ ವ್ಯವಸ್ಥೆಯನ್ನು ಮಡುವುದೆ. ನೂತನ‌ ಆಭರಣವನ್ನು ಖರೀದಿಸುವಿರಿ.

ಕನ್ಯಾ: ನಿಮ್ಮ ಸ್ವಭಾವಕ್ಕೆ ಹೊಂದಿಕೆಯಾಗುವ ಸಂಗಾತಿಯು ಸಿಗುವರು. ನಿಮ್ಮ ಸಮಯಕ್ಕೆ ಯೋಗ್ಯವಾದ ವಸ್ತುವೊಂದು ಬರಲಿದೆ. ಯಾರ ಸಾಮರ್ಥ್ಯವನ್ನೂ ನೀವು ಕೆಳದರ್ಜೆಯಲ್ಲಿ ಕಾಣಲು ಬಯಸುವಿರಿ. ಅಧಿಕೃತ ಮಾಹಿತಿಯ ಕೊರತೆಯಿಂದ ನಿಮಗೆ ಸಿಗಬೇಕಾದ ಸ್ಥಾನದಿಂದ‌ ನೀವು ವಂಚಿತರಾದಿರಿ. ಸುಮ್ಮನೇ ಕುಳಿತು ನಕಾರಾತ್ಮಕ ಚಿಂತನೆಗಳನ್ನು ಮಾಡಿಕೊಳ್ಳುವವರಿದ್ದೀರಿ. ಸಮೀಪದ‌ ದೇವಾಲಯ ದರ್ಶನವು‌ ಮನಸ್ಸಿಗೆ ಯಾವುದೇ ಕಾರಗಣಕ್ಕಾಗಿ ಧನಾತ್ಮಕ ಚಿಂತನೆಯನ್ನು ಮಾಡಿಳ್ಳಿ. ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ‌ಮಾಡಿ.

ತುಲಾ: ನಿಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸಹೋದ್ಯೋಗಿಗಳ ಸಹಾಯ ಪಡೆಯುವಿರಿ. ಉದ್ಯೋಗದಲ್ಲಿ ಸಿಗುವ ಬಡ್ತಿಗೆ ನೀವು ಕಾಯುತ್ತಿರುವಿರಿ. ಲಾಭ ಹಾಗೂ ನಷ್ಟವನ್ನು ಸರಿಗೂಡಿಸಿಕೊಂಡು ನೋಡುವುದು ಉತ್ತಮ. ಕ್ರೀಡೆಯಲ್ಲಿ ಇಂದು ಹೆಚ್ಚು ಆಸಕ್ತಿ ಬರಬಹುದು. ಮನೋರಂಜನೆಗೆ ಇಂದು ಸಮಯವನ್ನು ಕೊಡುವಿರಿ. ಸಾಮರ್ಥ್ಯಕ್ಕೆ ಯೋಗ್ಯವಾದ ಉದ್ಯೋಗವನ್ನು ಮಾಡಲು ಸುತ್ತಾಟ ನಡೆಸಬೇಕಾದೀತು. ಯಾರದೋ ಸಿಟ್ಟನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ನಿಮ್ಮ‌ ನಿಜಸ್ವರೂಪ ಗೊತ್ತಾಗಬಹುದು.

ವೃಶ್ಚಿಕ: ನಿಮ್ಮ ಯೋಜನೆಯನ್ನು ಮುಂದುವರಿಸಲು ನಿಮಗೆ ಆತಂಕವು ಬರಬಹುದು. ಕಾರ್ಯದ‌ ನಿಮಿತ್ತ ಬೇರೆ ಕಡೆಗೆ ಪ್ರಯಾಣವನ್ನು ಮಾಡಬೇಕಾಗಿಬರಬಹುದು. ನೀವೇ ಇಂದು ಸಂಗಾತಿಯನ್ನು ಆರಿಸಿಕೊಳ್ಳಲು ಮುಂದಾಗುವಿರಿ. ಮನೆಯಲ್ಲಿ ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ಲೆಕ್ಕಪರಿಶೋಧಕರು ಒತ್ತಡದಿಂದ ಹೊರಬಂದಿರುವರು. ನಿಮ್ಮನ್ನು ಇಷ್ಟಪಡುವವರು ನಿಮಗೆ ಉಡುಗೊರೆಯನ್ನು ಕೊಟ್ಟಾರು. ನಿಮ್ಮ ಆಲೋಚನೆಗಳಿಂದ‌ ನಕಾರಾತ್ಮಕತೆಯು ಉಂಟಾಗಬಹುದು. ಸಮಯವನ್ನು ನೋಡಿಕೊಂಡು ನೀವು ಮುಂದುವರಿಯುವುದು ಯೋಗ್ಯವಿದೆ.

-ಲೋಹಿತಶರ್ಮಾ ಇಡುವಾಣಿ

Published On - 12:30 am, Fri, 9 June 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್