Horoscope: ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನ ಕಾಯುತ್ತಿರಬಹುದು-ಎಚ್ಚರ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 07 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಏಪ್ರಿಲ್ 07) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:12ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 02:07 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03: 40 ರಿಂದ ಬೆಳಗ್ಗೆ 05:12ರ ವರೆಗೆ.
ಧನು ರಾಶಿ : ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ವಿದ್ಯಾರ್ಥಿಗಳು ಶ್ರಮವಹಿಸಿ ಓದಬೇಕಾಗಿದೆ. ಮಾತುಗಳನ್ನು ಎಚ್ಚರದಿಂದ ಆಡಿ. ಮಾತು ಕಂಟಕಗಳನ್ನು ತಂದೀತು. ನಿಮ್ಮ ಜೀವನಶೈಲಿಯನ್ನು ಆಕರ್ಷಕವಾಗಿಸಲು ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಪೋಷಕರ ಜೊತೆ ಕೆಲವು ವಿಷಯದ ಬಗ್ಗೆ ನೀವು ಕಲಹದ ಸಾಧ್ಯತೆ ಇದೆ. ಮಕ್ಕಳಿಗಾಗಿ ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ವಿರೋಧಿಗಳನ್ನು ತತ್ಸಾರ ಮಾಡುವ ಅವಶ್ಯಕತೆ ಇಲ್ಲ. ಮಾತು ನಿಯಂತ್ರಣ ತಪ್ಪಬಹುದು. ಕೆಲಸದ ಸ್ಥಳದಲ್ಲಿ ವಾತಾವರಣವು ನಿಮಗೆ ಅನುಕೂಲಕರವಾಗಿಲ್ಲದಿದ್ದರೆ, ನಿಮ್ಮ ಮನಃಸ್ಥಿತಿಯು ಹದಗೆಡುತ್ತದೆ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು. ನೀವು ಯೋಜಿಸಿದ ನಿಮ್ಮ ಕೆಲಸವೂ ಪೂರ್ಣಗೊಳ್ಳುವುದಿಲ್ಲ. ವಿವಾದಗಳು ತಪ್ಪಿಸಲು ಪ್ರಯತ್ನಿಸಿ.
ಮಕರ ರಾಶಿ : ಇಂದಿನ ದಿನವನ್ನು ಕಳೆಯಲು ಸ್ನೇಹಿತರು ಸಹಾಯ ಮಾಡುವರು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ಸಂಗಾತಿಗೆ ಇಷ್ಟವಾಗುವ ಕೆಲಸವನ್ನು ಮಾಡಿ, ಆಕೆಯ ಸಿಹಿಯಪ್ಪುಗೆಯ ಅನುಭವವನ್ನು ಪಡಯುವಿರಿ. ಅನಾರೋಗ್ಯವು ಹೆಚ್ಚಾಗಬಹುದು, ಕಾಳಜಿಯನ್ನು ಮಾಡಿ. ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಪ್ರಯತ್ನಿಸಿ. ನೀವು ಕೆಲವು ಸಣ್ಣ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಸರಿಯಾದ ಸಮಯಕ್ಕಾಗಿ ಕಾಯಿರಿ. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಒಳ್ಳೆಯ ಮತ್ತು ಮಧುರವಾದ ಮಾತುಗಳನ್ನು ಹೇಳುವ ಮೂಲಕ ನಿಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೀರಿ.
ಕುಂಭ ರಾಶಿ : ನಿಮ್ಮ ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವ ನೀವು ದಿನದ ಹೆಚ್ಚಿನ ಸಮಯವನ್ನು ಅವರ ಜೊತೆ ಕಳೆಯುವಿರಿ. ನಿಮಗೆ ವೃತ್ತಿಸಂಬಂಧ ಸಮಸ್ಯೆಗಳು ಯಾರದೋ ಮೂಲಕ ಎದುರಾಗಬಹುದು. ನಿಮ್ಮ ಚಾಣಾಕ್ಷ ಬುದ್ಧಿಯಿಂದ ಅದನ್ನು ಪರಿಹರಿಸಿಕೊಳ್ಳುವಿರಿ. ಬಾಕಿ ಉಳಿಸಕೊಂಡ ಕೆಲಸವನ್ನು ಶೀಘ್ರವಾಗಿ ಮುಗಿಸುವಿರಿ. ಕುಟುಂಬದ ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೀರಿ. ಪ್ರಮುಖ ಕೆಲಸಗಳಲ್ಲಿ ವಿಳಂಬ ಮಾಡಬೇಡಿ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ನೀವು ಮಕ್ಕಳಿಂದ ಬೆಂಬಲವನ್ನು ಪಡೆಯುತ್ತೀರಿ. ನೀವು ಕಠಿಣ ಪರಿಶ್ರಮದಿಂದ ನಿಮ್ಮ ಯೋಜನೆಯನ್ನು ಪೂರ್ಣಗೊಳಿಸುತ್ತೀರಿ. ಅದರಿಂದ ನೀವು ಪ್ರಯೋಜನಗಳನ್ನು ಪಡೆಯಬಹುದು.
ಮೀನ ರಾಶಿ : ಇಂದು ಮನೆಯಲ್ಲಿ ನಿಮಗೆ ನಿರಾಸೆಯ ಅನುಭವವಾಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ಆಪ್ತರ ಭೇಟಿ ಹಾಗೂ ಮಾರ್ಗದರ್ಶನದ ಸುತ್ತಾಟದಲ್ಲಿ ಇಂದು ಮುಕ್ತಾಯಗೊಳ್ಳಲಿದೆ. ಪ್ರಶಂಸೆಗಳು ನಿಮ್ಮನ್ನು ಅರಸಿ ಬರಲಿವೆ. ಆರೋಗ್ಯದ ಬಗ್ಗೆ ನಿಗವಿರಲಿ. ನಿಮ್ಮ ಕೆಲಸದ ಸ್ಥಳದಲ್ಲಿ ನಿಮ್ಮನ್ನು ಹೆಚ್ಚು ಗಮನಿಸುತ್ತ ಇರಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ತಮ್ಮ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುವುದು. ನಿಮ್ಮ ಕೆಲಸಕ್ಕಿಂತ ಇತರರ ಕೆಲಸಗಳ ಮೇಲೆ ಹೆಚ್ಚು ಗಮನವಿರುವುದು. ನಿಮ್ಮ ಮೇಲೆ ದುಷ್ಪರಿಣಾಮ ಬೀರಬಹುದು. ಉದ್ಯಮಿಗಳಿಗೆ ಸಮಯ ಉತ್ತಮವಾಗಿಲ್ಲ. ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ. ಹಳೆಯ ಸಾಲವು ನಿಮಗೆ ಒತ್ತಡವನ್ನು ಉಂಟುಮಾಡಬಹುದು. ಕಚೇರಿಯಲ್ಲಿ ಸಮಸ್ಯೆಗಳಿರಬಹುದು.
-ಲೋಹಿತ ಹೆಬ್ಬಾರ್-8762924271 (what’s app only)




