Horoscope Today July 3, 2024: ಬುಧವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ

2024 ಜುಲೈ 3 ದಿನ ಭವಿಷ್ಯ: ಬುಧವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today July 3, 2024: ಬುಧವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 02, 2024 | 10:23 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜುಲೈ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:37 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:46 ರಿಂದ ಬೆಳಿಗ್ಗೆ09:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:00 ರಿಂದ 12:37ರ ವರೆಗೆ.

ಮೇಷ ರಾಶಿ : ಇಂದು ನೀವು ಮಾಡಿದ ಉಪಕಾರವು ನಿಮಗೆ ಮರಳಿಬರಬಹುದು. ದೀರ್ಘಕಾಲದಿಂದ ಮಾಡುತ್ತಿದ್ದ ಕೆಲಸಗಳು ಮುಕ್ತಾಯವಾಗುವುವು. ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೆ ಹೆಚ್ಚು ತೊಂದರೆಯಾದೀತು‌. ಭೂಮಿಗೆ ಸಂಬಂಧಿಸಿದ ವಿಚಾರವು‌ ನ್ಯಾಯಾಲಯದ ಮೆಟ್ಟಿಲೇರಿ ಬಗೆಹರಿಯದು. ಸಕಾರಾತ್ಮಕೆ ಬರಲು ದೇವಾಲಯ ಅಥವಾ ಪ್ರಭಾವೀ ವ್ಯಕ್ತಿಗಳ ಮಾತು ಸಹವಾಸವನ್ನು ಮಾಡಿ. ನಿಮ್ಮ ಅತಿಯಾದ ಕಲ್ಪನೆ ಭಗ್ನವಾದೀತು. ಇದರಿಂದ ದುಃಖಿಸುವಿರಿ. ಸುಪ್ತವಾದ ಪ್ರತಿಭೆಯು ಅನಾವರಣಕ್ಕೆ ಸ್ಥಳ ಹುಡುಕುವುದು. ಚಿಂತಿಸದೇ ಅನ್ಯ ಮಾರ್ಗವನ್ನು ಹಿಡಿಯಿರಿ. ನಿಮ್ಮ ತೊಂದರೆಗಳು ಇನ್ನೊಬ್ಬರ ಮೇಲೆ ಪರಿಣಾಮ ಬೀರುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು.

ವೃಷಭ ರಾಶಿ : ಸ್ವಯಂ‌ಕೃತ ಅಪರಾಧಕ್ಕೆ ಬೇರೆಯವರನ್ನು ಬೊಟ್ಟುಮಾಡಿ ತೋರಿಸುವುದು ಬೇಡ. ಹಣವನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದರೂ ನಿಮ್ಮ ಕೈ ಮೀರಿ ಹೋಗುವ ಸಂದರ್ಭವೇ ಇರುವುದು. ಪ್ರಯಾಣವನ್ನು ಅತಿಯಾಗಿ ಮಾಡಬೇಡಿ.‌ ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು. ಹಿರಿಯರ ಮಾತನನ್ನು ಅಹಂಕಾರದಿಂದ ಮುರಿಯಬೇಡಿ. ಬಿಸಿ ರಕ್ತವು ಆರಿದ ಮೇಲೆ ಪಶ್ಚಾತ್ತಾಪ ಪಡಬೇಕಾದೀತು. ಯಾರದೋ ವಸ್ತುಗಳನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನ ಫಲಿಸದು. ಮಾನಸಿಕ‌ ಆಲಸ್ಯ ಇಂದು ಸರಿಯಾದ ಕೆಲಸ ಸಿಗಲಿದ್ದು, ಅದನ್ನು ಅನಿವಾರ್ಯವಾಗಿ ಮಾಡುವಿರಿ. ಸಂಗಾತಿಯನ್ನು ತಮಾಷೆ ಮಾಡಲು ಹೋಗಿ ವೈಮನಸ್ಸು ಉಂಟಾಗಬಹದು. ನಿದ್ರೆಯಲ್ಲಿ ಆಗಾಗ ಎಚ್ಚರಿಕೆ ಆಗಬಹುದು. ವಾತಶಮನಕ್ಕೆ ವೈದ್ಯರನ್ನು ಭೇಟಿಯಾಗಿ. ಮಕ್ಕಳಲ್ಲಿ ಸ್ಪರ್ಧಾಮನೋಭಾವವನ್ನು ಹೆಚ್ಚಿಸುವಿರಿ.

ಮಿಥುನ ರಾಶಿ : ನಿಮ್ಮ ಉದ್ಯೋಗದ ಚಿಂತೆಯಿಂದ ಯಾವ ಪ್ರಯೋಜನವೂ ಆಗದು. ಚಿಂತನೆಯಿಂದ ಮಾತ್ರ ಬಂದಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಬಗೆ ಅರಿಯದಾದೀತು. ಸಂಪತ್ತಿನ ಜೊತೆಗೆ ಶತ್ರುಗಳೂ ಬರುವರು. ನಿಮ್ಮವರ ಮೇಲೆ ಕಾಳಜಿ ಹೆಚ್ಚಿರುವುದು. ಅಧಿಕಾರದ ಪಡೆಯಲು ವಾಮಮಾರ್ಗವನ್ನು ಬಳಸಬಹುದು. ಬೇರೆಯವರ ಮೇಲೆ ಪ್ರಭಾವ ಬೀರುವ ಸಂದರ್ಭಬರಬಹುದು. ಹಣಕಾಸಿನ ಹೂಡಿಕೆಯು ಕಾನೂನುಬದ್ಧವಾಗಿರಲಿ. ರಾಜಕೀಯ ವ್ಯಕ್ತಿಗಳಾಗಿದ್ದರೆ ಒಂದು ಸಕಾರಾತ್ಮಕ ಸಂಚಲನವನ್ನು ತರುವಿರಿ. ಅಪರಿಚರ ಒಡನಾಟ ಕಡಿಮೆ ಮಾಡಿ. ಕುಟುಂಬವನ್ನು ನಡೆಸುವ ಜವಾಬ್ದಾರಿ ಸಿಗಬಹುದು. ಇಂದು ನೀವು ಅನವಶ್ಯಕ ವಸ್ತುಗಳನ್ನು ಇಷ್ಟಪಡುವಿರಿ. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ.

ಕಟಕ ರಾಶಿ : ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಸಹವಾಸದಿಂದ ಸ್ಥಾನವು ಪ್ರಾಪ್ತಿಯಾಗಲಿದೆ. ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವಿರಿ. ವಾಹನದಿಂದ‌ ಬಿದ್ದು ಪೆಟ್ಟು ಮಾಡಿಕೊಳ್ಳಬೇಡಿ. ನಿಮ್ಮ ನಡೆಯನ್ನು ತಿಳಿಯಲು ಜನರು ಕಷ್ಟಪಡುವರು. ನಿಮ್ಮ ಮಾತಿನಲ್ಲಿ ಸ್ಪಷ್ಟತೆ ಇರಲಿ. ಯೋಜನೆಗಳನ್ನು ಸರಿಯಾಗಿ ಬಿತ್ತರಿಸಿ. ಕೆಲಸವನ್ನು ಒಂಟಿಯಾಗಿ ಮಾಡಲು ಹಿಂಜರಿಯುವಿರಿ. ನಿಮಗೆ ಎಲ್ಲವೂ ಬಂಧನದಂತೆ ಅನ್ನಿಸುವುದು. ಎಲ್ಲರನ್ನೂ ಸುಮ್ಮನೇ ಅನುಮಾನದ ದೃಷ್ಟಿಯಿಂದ ನೋಡಬೇಡಿ. ಉದ್ಯೋಗದಲ್ಲಿ ಒಪ್ಪಂದವನ್ನು ಸರಿಯಾಗಿ ಮಾಡಿಕೊಳ್ಳಿ. ಮೋಸವಾಗುವ ಸಾಧ್ಯತೆ ಇದೆ. ಕಷ್ಟದಿಂದ ಸಂಪಾದಿಸಿದ್ದನ್ನು ಕಳೆದುಕೊಳ್ಳುವಿರಿ. ಪ್ರೀತಿಸುವ ವಸ್ತುವೊಂದು ಇಂದು ಹಾಳಾಗಿ ಹೋಗಲಿದೆ. ಕೈಗೆ ಸಿಗದ ಹಣ್ಣು ಹುಳಿ ಎನ್ನುವುದು ಸಹಜವೇ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ.

ಸಿಂಹ ರಾಶಿ : ಇಂದು ಅಸರಂಭಿಸಿದ ಕಾರ್ಯವನ್ನು ಮುಗಿಸುವ ಮನೋಭಾವದಲ್ಲಿ ಇರುವಿರಿ. ಆದರೆ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ಏಕಮುಖವಾದ ನಿರ್ಧಾರವನ್ನು ತೆಗದುಕೊಂಡು ನೀವು ಒಬ್ಬೊಟಿಯಾಗಬೇಕಾದೀತು. ಎಲ್ಲರ ಜೊತೆ ಚರ್ಚಿಸಿ ಅವರನ್ನು ತೆಗೆದುಕೊಂಡು ಹೋಗಿ. ಸಿಟ್ಟಿನಿಂದ ಏನನ್ನೂ ಸಾಧಿಸಲಾಗದು ಎಂಬ ಸತ್ಯವು ತಿಳಿಯಬಹುದು. ಕೋಪದಲ್ಲಿ ಮೂಗು ಕತ್ತರಿಸಿದರೆ ಮರಳಿ ಬರುವುದೆ? ಗಣ್ಯರು ನಿಮ್ಮನ್ನು ಭೇಟಿಯಾದಾರು. ನೀವು ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅವರಿಂದ ಸಹಾವಾಗಬಹುದು. ಇಂದು ನೀವು ಗೌರವವನ್ನು ಕೇಳಿ ಪಡೆದುಕೊಳ್ಳಲಿದ್ದೀರಿ. ನಿಮ್ಮವರು ಇದನ್ನು ಅಪಹಾಸ್ಯ ಮಾಡುವರು. ಪ್ರಯಾಣದಿಂದ ಆಯಾಸವಾಗಲಿದೆ. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು. ಪಿತ್ತರೋಗಕ್ಕೆ ವೈದ್ಯರ ಸಲಹೆಯನ್ನು ಕೇಳಿ.

ಕನ್ಯಾ ರಾಶಿ : ಇಂದು ನಿಮ್ಮ ಕಾರ್ಯಕ್ಷೇತ್ರವನ್ನು ಉತ್ತಮ ಮಾಡಿಕೊಳ್ಳುವುದು ಹೊಣೆಗಾರಿಕೆ ಆಗುವುದು. ನಿಮ್ಮ ಯೋಗ್ಯತೆಗೆ ಉನ್ನತಸ್ಥಾನದ ಪ್ರಸ್ತಾಪವೂ ಆಗಬಹುದು. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ಇಂದು ನಿಮ್ಮ ಲೆಕ್ಕಾಚಾರಗಳು ಬುಡಮೇಲಾದೀತು. ಪ್ರಯಾಣ ಮಾಡುವ ಸಂದರ್ಭ ಬರಬಹುದು. ಯಾರದ್ದಾದರೂ ವಿಚಾರಕ್ಕೆ ಮೂಗು ತೂರಿಸಬೇಡಿ. ಜನ್ಮಾಂತರದ ಪುಣ್ಯವು ನಿಮ್ಮನ್ನು ಕಾಪಾಡಲಿದೆ. ಬಂಗಾರದ ಖರೀದಿಯನ್ನು ಮಾಡಲಿದ್ದೀರಿ. ದಾಂಪತ್ಯದಲ್ಲಿ ಮೌನವೇ ಹೆಚ್ಚಿರುವುದು. ಹಣ ಉಳಿತಾಯದ ಬಗ್ಗೆ ಸಂಗಾತಿಯು ಗಮನಸುವರು. ತಲೆನೋವು ಕಾಡೀತು ಇಂದು. ವಿದ್ಯಾರ್ಥಿಗಳು ಒಂದು ಹಂತದ ಓದನ್ನು ಮುಗಿಸಿ ಉದ್ಯೋಗಕ್ಕೆ ತೆರಳುವ ಆಲೋಚನೆ ಮಾಡುವರು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು.

ತುಲಾ ರಾಶಿ : ಇಂದು ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಅತಿಯಾದ ಭಯವು ಕಾಡಬಹುದು. ನಿಮ್ಮಿಂದ ನಿಮ್ಮ ತಂದೆ, ತಾಯಿಯರು ಬೇಸರಪಟ್ಟುಕೊಳ್ಳುವರು. ವಿವಾಹಯೋಗವನ್ನು ನಿರ್ಲಕ್ಷಿಸುವುದು ಬೇಡ. ಮಕ್ಕಳು ನಿಮಗೆ ಖುಷಿಯನ್ನು ತಂದುಕೊಟ್ಟಾರು. ಬಂಧುಗಳ ವಿಯೋಗವಾಗಬಹುದು. ಸಾಲದ ಚಿಂತೆ ಬಹಳ ಕಾಡಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಗೊಂದಲಗಳು ಉಂಡಾಗಬಹುದು. ಸ್ವಂತ ವಾಹನವನ್ನು ಚಲಾಯಿಸುವಾಗ ಅನ್ಯ ಯೋಚನೆಯಲ್ಲಿ ಮಗ್ನರಾಗಿ ಅಪಘಾತವಾಗಬಹುದು. ಶ್ರಮ ವಹಿಸಿ ಕೆಲಸ ಮಾಡುವವರಿಗೆ ಹೆಚ್ಚಿನ ಜವಾಬ್ದಾರಿಗಳು ಸಿಗಬಹುದು. ಹೆಚ್ಚಿನ ಹೂಡಿಕೆಯಲ್ಲಿ ನಿಮಗೆ ಮನಸ್ಸಾಗುವುದು. ವಿದ್ಯಾರ್ಥಿಗಳು ಬಹಳ ಸೋಮಸರಿಗಳಾಗುವರು. ಸಂಗಾತಿಯ ಜೊತೆ ನಿಮಗಾದ ಸುಖ ಹಾಗೂ ದುಃಖವನ್ನು ಹಂಚಿಕೊಳ್ಳುವಿರಿ. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ.

ವೃಶ್ಚಿಕ ರಾಶಿ : ಇಂದು ನಿಮ್ಮ‌ ಮನಸ್ಸನ್ನು ಕಲಕಲೆಂದು ಕೆಲವರು ತಯಾರಿ ಮಾಡಬಹುದು. ನಿಮ್ಮ ಪ್ರಮಾಣಿಕ ಪ್ರಯತ್ನವನ್ನು ವಂಚನೆ ಇಲ್ಲದೇ ಮಾಡಿ. ಆರ್ಥಿಕವಾಗಿ ಇಂದು ಸಬಲರಾಗುವಿರಿ.‌ ಕೆಲಸದಲ್ಲಿ ವಿಘ್ನವು ಬರುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗುವ ನಿಮ್ಮ‌ಕನಸು ನನಸಾಗಬಹುದು. ಹಿತಶತ್ರುಗಳು ನಿಮಗೆ ಯಶಸ್ಸು ಬಾರದಂತೆ ನೋಡಿಕೊಳ್ಳುವರು. ಸತ್ಯವನ್ನು ಮುಚ್ಚಿಡುವ ಪ್ರಯತ್ನವು ನಿಮ್ಮಿಂದ ನಡೆಯಲಿದೆ. ಅದು ಕುಟುಂಬಕ್ಕೆ ಗೊತ್ತಾಗಲಿದೆ. ಸಲಹೆಯನ್ನು ಕೇಳಿದರಷ್ಟೇ ನೀಡುವುದು ಉತ್ತಮ. ನೇರ ಮಾತುಗಳಿಂದ ನಿಮ್ಮವರಿಗೆ ಬೇಸರವಾಗಬಹುದು. ಅತಿಯಾದ ಮಾತೂ ಕೇಳುಗರಿಗೆ ಕಿರಿಕಿರಿ ತರಿಸುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಸ್ಪಷ್ಟತೆ ಇಲ್ಲದೇ ಮಾಡಬೇಡಿ. ಮೋಸ ಹೋಗುವಿರಿ. ಸ್ವಲ್ಪ ವಿಳಂಬ ಮಾಡಿ. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಯಾರನ್ನೋ ಹಿಮ್ಮೆಟ್ಟುವ ಇಚ್ಛೆಯಿಂದ ಕೆಲಸ ಮಾಡುವಿರಿ.

ಧನು ರಾಶಿ : ಇಂದು ಯಾವ ಕಾರ್ಯವನ್ನು ಮಾಡುವಾಗಲೂ ಉದ್ವೇಗಪಡುವ ಅಗತ್ಯ ಇರದು. ಒಂದೊಮ್ಮೆ ಅಂತಹ ಸಂದರ್ಭವನ್ನು ನಿರ್ಲಕ್ಷಿಸುವುದು ಉತ್ತಮ. ನಿಮ್ಮನ್ನು ಕಂಡು ಹೊಟ್ಟಕಿಚ್ಚು ಪಡುವ ಜನರಿರುತ್ತಾರೆ ನಿಮ್ಮ ಸುತ್ತ. ಅವರನ್ನು ನಗಣ್ಯ ಮಾಡಬೇಡಿ. ಅವರನ್ನೇ ದೂರವಿಡಿ ಅಥವಾ ಅವರಿಂದ ನೀವೇ ದೂರವಾಗಿ. ಚರಾಸ್ತಿಯ ವಿಚಾರವಾಗಿ ಮಾತುಗಳು ಮನೆಯಲ್ಲಿ ಬರಬಹುದು. ತಂದೆಯ ಮಾತಿಗೆ ಗೌರವವನ್ನು ಕೊಡದೇ ಅಹಂಕಾರ ತೋರಿಸಬೇಡಿ. ತುರ್ತು ಅವಶ್ಯಕತೆಗಳಿಗೆ ಹಣವನ್ನು ವ್ಯಯಮಾಡಿ. ರಮಣೀಯ ಸ್ಥಳಗಳಿಗೆ ಹೋಗಬೇಕೆನಿಸುವುದು. ಆಲಸ್ಯದಿಂದ ವಿಶ್ರಾಂತಿ ಪಡೆಯುವಿರಿ. ಯಂತ್ರೋಪಕರಣಗಳ ಮಾರಾಟ ಮಾಡುವವರಿಗೆ ಅಲ್ಪ ಲಾಭವಾಗಬಹುದು. ಸಂಗಾತಿಯ ಜೊತೆ ಮುನಿಸು ಕಡಿಮೆ ಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು.

ಮಕರ ರಾಶಿ : ಇಂದು ನಿಮ್ಮ ಸಂಗಾತಿಯು ನಿಮಗೆ ಪ್ರಿಯವಾದುದನ್ನೇ ಮಾಡುವರು. ಸರ್ಕಾರಿ ಕೆಲಸಗಳು ನಿಧಾನವಾಗಿ ಮುಂದುವರಿಯುವುದು. ಮಾತಿನಿಂದ ಮಾತ್ರ ಎಲ್ಲವೂ ಸರಿಯಾಗುವುದು ಎನ್ನುವ ಭ್ರಮೆಯಿಂದ ಹೊರಬನ್ನಿ. ಗೃಹನಿರ್ಮಾಣದ ಕಾರ್ಯವು ಹಣಕಾಸಿನ ಅಭಾವದಿಂದ ಸ್ಥಗಿತಗೊಳ್ಳಬಹುದು. ಕಾನೂನಾತ್ಕಮಕವಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗದು. ಉನ್ನತಸ್ಥಾನಕ್ಕೆ ಹೋಗಬೇಕೆನ್ನುವ ಬಯಕೆ ಇರಲಿದೆ. ನಿಮಗೆ ಯೋಗ್ಯ ಮಾರ್ಗದರ್ಶನದ ಕೊರತೆ ಇದ್ದು ಇದರಿಂದ ಅವಕಾಶವನ್ನು ಕಳೆದುಕೊಳ್ಳುವಿರಿ. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಮಾತಿನ ಮೇಲೆ ಹಿಡಿತವನ್ನು ಇಟ್ಟು, ಆಲೋಚಿಸಿ ಮಾತನಾಡಿ. ಯಾವುದೇ ನಿರ್ಧಾರಗಳನ್ನು ಆ ಕ್ಷಣದಲ್ಲಿಯೇ ತೆಗೆದುಕೊಂಡು ಆಮೇಲೆ ಚಿಂತೆಗೆ ಒಳಗಾಗುವಂತೆ ಮಾಡಿಕೊಳ್ಳಬೇಡಿ. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನಿಮ್ಮ ಗುಟ್ಟನ್ನು ಬಿಟ್ಟಕೊಡುವುದು ಬೇಡ.

ಕುಂಭ ರಾಶಿ : ಇಂದಿನ ನಿಮ್ಮ ಹೂಡಿಕೆ ನಿಮಗೆ ಬಹು ಉಪಕಾರಿ. ಬೇರೆಯ ದಿನಕ್ಕೆ ಹೋಲಿಸಿದರೆ ಇಂದಿನ ಆರ್ಥಿಕ ಸುಧಾರಣೆಯು ತಕ್ಕಮಟ್ಟಿಗೆ ಇರಲಿದೆ. ಯಾರೊಂದಿಗೂ ಸಂಪೂರ್ಣ ನಿಜವನ್ನು ಹೇಳಿಬಿಡಬೇಡಿ. ನಿಮ್ಮ‌ ಶಿಸ್ತಿನ ಕೆಲಸದಿಂದ ಕೆಲವರಿಗೆ ಬೇಸರವಾಗಬಹುದು.‌ ದೂರ ಬಂಧುಗಳ ಪರಿಚಯವಾಗಲಿದೆ. ಒತ್ತಡಗಳಿದ್ದರೂ ನೀವು ನಿಮ್ಮ ಕೆಲಸ ಮಾಡಿ ಮುಗಿಸುವಿರಿ. ಪ್ರೀತಿಯ ಮಾತುಗಳಿಂದ ಆಗುವ ಕಾರ್ಯವನ್ನು ಬೈದು ಮಾಡಿಸಲಾಗದು. ವಾಹನ ಚಾಲನೆಯಲ್ಲಿ ತೊಂದರೆಯಾದೀತು. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಇದ್ದು ಯಥಾಶಕ್ತಿ ಸಂಪತ್ತನ್ನು ಕೊಡುವಿರಿ. ಸಹೋದರರಿಂದ ಸಂಪತ್ತು ಸಿಗಲಿದೆ. ದಾಂಪತ್ಯದಲ್ಲಿ ಕಲಹವಿದ್ದರೂ ನೆಮ್ಮದಿ ಇರಲಿದೆ. ಕಳೆದುಕೊಂಡ ವಸ್ತುವನ್ನು ಪಡೆಯಲಿದ್ದೀರಿ. ಆಪ್ತರೆಂದು ಮಾತಿನಲ್ಲಿ ಹಿಡಿತವಿಲ್ಲದೇ ಏನನ್ನಾದರೂ ಹೇಳುವಿರಿ. ಅಪಹಾಸ್ಯ ಮಾಡಿಯಾರು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು.

ಮೀನ ರಾಶಿ : ಇಂದು ಬೆಲೆಯುಳ್ಳ ಯಾವುದಾದರೂ ವಸ್ತುವೊಂದು ಕಣ್ಮರೆಯಾದೀತು. ಆಲೋಚಿಸದೇ ಯಾವುದೇ ಸಾಹಸ ಕಾರ್ಯದ ಕಡೆ ಮುನ್ನುಗ್ಗಬೇಡಿ. ಉದ್ಯೋಗದ ನಿಮಿತ್ತ ದೂರ ಪ್ರಯಾಣವು ಅನಿವಾರ್ಯವಾಗುವುದು. ಸಂತಾನದ ಶುಭ ವಾರ್ತೆಯಿಂದ ಇಂದು ಸಂತಸ. ಯೋಜಿತ ಕಾರ್ಯಗಳನ್ನು ಒಂದೊಂದಾಗಿಯೇ ಮಾಡಲು ತೊಡಗಬಹುದು. ವ್ಯವಹಾರದ ಒತ್ತಡದ ನಡುವೆಯೂ ಏಕಾಂತವನ್ನು ಬಯಸಿ ಒಬ್ಬರೇ ಎಲ್ಲಿಗಾದರೂ ಹೋಗುವಿರಿ. ನೂತನ ವಾಹನವನ್ನು ಖರೀದಿಸಲು ಚುರುಕಾಗುವಿರಿ. ಇಂದು ನಿಮ್ಮ ಕೆಲಸವು ನಿಮಗೆ ತೃಪ್ತಿ ಕೊಡುವುದು. ಗಳಿಸಿದ್ದನ್ನು ಕಳೆದುಕೊಳ್ಳುವಾಗ ಯೋಚಿಸಿ. ಅವಶ್ಯಕತೆ ಇದ್ದರೆ‌ ಮಾತ್ರ ಮುಂದುವರಿಯುವುದು ಉತ್ತಮ. ಭವಿಷ್ಯದ ನಾಳೆಯ ಕುರಿತು ಅತಿಯಾದ ಯೋಚನೆ ಬೇಕಾಗಿಲ್ಲ.‌ ಖುಷಿಯಿಂದ ಸ್ವೀಕರಿಸಿ ಎಲ್ಲವನ್ನೂ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕ ಫಲವು ಪ್ರಾಪ್ತವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ