AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹ, ಶತ್ರುಗಳ ಕಾಟ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 05 ಜುಲೈ​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ. ನಿಮಗೆ ಶುಭ ಅಥವಾ ಅಶುಭನಾ? ಸ್ತ್ರೀಯರಿಂದ ಸಹಕಾರವು ಸಿಗಬಹುದು. ಆತ್ಮೀಯತೆಯು ಬದಲಾಗಬಹುದು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ನಿಮ್ಮ ಕೆಲಸವು ನಿಮಗೆ ತೃಪ್ತಿಕರವಾಗಿ ಇರಲಿದೆ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ.

Astrology: ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹ, ಶತ್ರುಗಳ ಕಾಟ
ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹ, ಶತ್ರುಗಳ ಕಾಟ
ಗಂಗಾಧರ​ ಬ. ಸಾಬೋಜಿ
|

Updated on: Jul 05, 2024 | 12:02 AM

Share

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 11:00ರಿಂದ 12:37ರ ವರೆಗೆ, ಯಮಘಂಡ ಕಾಲ 15:51 ರಿಂದ 17:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:47 ರಿಂದ 09:24ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ನಿರೀಕ್ಷೆಯಂತೆ ಬರಬೇಕಾದ ಹಣವು ಬರಬಹುದು. ಆಯ್ಕೆ ವಿಚಾರದಲ್ಲಿ ನೀವು ಸೋಲಬಹುದು. ಸಿಹಿ ನೆನಪು ಕಾಡಲಿದೆ. ಸಂಗಾತಿಯ ಜೊತೆ ವಾಸ್ತವದ ಬಗ್ಗೆ ಆಲೋಚಿಸಿ. ಹೂಡಿಕೆಯಲ್ಲಿ ನಂಬಿಕೆ ಹೆಚ್ಚಾಗುವುದು. ನಿಮ್ಮವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಪತ್ನಿಯ ಜೊತೆ ದೂರದ ಊರಿಗೆ ಪ್ರಯಾಣವನ್ನು ಮಾಡುವಿರಿ. ಭೂಮಿಯ ವ್ಯವಹಾರಕ್ಕೆ ಸದ್ಯ ಕೈ ಹಾಕುವುದು ಬೇಡ. ತಪ್ಪನ್ನು ಒಪ್ಪಿಕೊಳ್ಳುವ ಮನೋಭಾವವಿರದು. ಮಕ್ಕಳು ನಿಮ್ಮಿಂದ ಹಣವು ಖಾಲಿಯಾಗುವಂತೆ ಮಾಡಿಯಾರು. ಅವರು ಬೇಸರಗೊಳ್ಳದಂತೆ ನೋಡಿಕೊಳ್ಳಿ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು. ಇಂದು ಭೂಮಿ ಅಥವಾ ಚರಾಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ: ಇಂದು ನಿಮ್ಮ ಮುಂದೆ ಸಾಲದ ವಿಚಾರ ಬಂದರೆ ಮೌನವಹಿಸುವಿರಿ. ಶತ್ರುಗಳ ಕಾಟವಿರಬಹುದು. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು. ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹಗಳು ಆಗಬಹುದು. ಅದು ಆಗದಂತೆ ನೋಡಿಕೊಳ್ಳುವುದು ಉತ್ತಮ. ಮಕ್ಕಳ ಬಗೆಗಿನ ಕಾಳಜಿ ಹೆಚ್ಚಾಗುವುದು. ಬರಬೇಕಾದ ಸಂಪತ್ತು ಕೈಗೆ ಸಿಗದೇ ಸಾಲವನ್ನು ಮಾಡಬೇಕಾದೀತು. ಕುಟುಂಬದಲ್ಲಿ ನಿರ್ವಹಣೆಯು ಸರಿಯಾಗಿ ಆಗುತ್ತಿಲ್ಲ ಎಂದು ದಾಂಪತ್ಯದಲ್ಲಿ ಕಲಹವು ಉಂಟಾಗಬಹುದು. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ಕೈಲಾಗದ್ದನ್ನು ಮಾಡುವ ಉತ್ಸಾಹ ಬೇಡ. ಆಸೆಯಿಂದ ಕಳೆದುಕೊಳ್ಳುವುದು ಹೆಚ್ಚಾಗಬಹುದು. ಬೇಡ ವಿಚಾರವನ್ನು ತಲೆಯಿಂದ ಹೊರಹಾಕಿ.

ಮಿಥುನ ರಾಶಿ: ಇಂದು ಹಳೆಯ ಪ್ರಣಯವು ಆರಂಭದ ಸೂಚನೆ ಸಿಗುವುದು. ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ನೀವು ಸೋಲಬಹುದು. ನಿಮ್ಮ ಆಲೋಚನೆಗಳನ್ನು ಬೇರೆಯವರ ಮೇಲೆ ಹೇರಬೇಡಿ. ಅನ್ಯರ ತಪ್ಪುಗಳನ್ನು ಮನ್ನಿಸುವ ಗುಣವನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಆಕಸ್ಮಿಕವಾದ‌ ಕೆಲವು ಘಟನೆಗಳು ನಿಮ್ಮನ್ನು ಚಿಂತೆಯಲ್ಲಿ ಇರುವಂತೆ ಮಾಡುವುದು. ಏಕಾಂತವು ನಿಮಗೆ ಬಲವನ್ನು ಕೊಡುವುದು. ಯುಕ್ತಿಯಿಂದ ನಿಮ್ಮ‌ ಕಾರ್ಯವನ್ನು ಸಾಧಿಸಿಕೊಳ್ಳಿ. ಎಲ್ಲಿಯೂ ಕಲಹವಾಗದೇ ಕೆಲಸವು ಮುಕ್ತಾಯವಾಗುವುದು. ವಿಶೇಷ ಸಂದರ್ಭದಲ್ಲಿ ಭಾಗವಹಿಸಲಿದ್ದೀರಿ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ಸಹೋದರರ ಭಾವಕ್ಕೆ ಅಡ್ಡಿಯಾಗದಂತೆ ವರ್ತಿಸುವಿರಿ. ಕೆಲವನ್ನು ಅನುಭವಿಸುವುದು ಅನಿವಾರ್ಯ.

ಕಟಕ ರಾಶಿ: ಇಂದು ನೀವು ವಹಿಸಿಕೊಂಡ ಕಾರ್ಯವನ್ನು ಬಿಡದೇ ಮುನ್ನಡೆಸುವಿರಿ. ಗೊತ್ತಿದ್ದೂ ಉದ್ವೇಗದಲ್ಲಿ ಸಿಕ್ಕಿಕೊಳ್ಳಬೇಡಿ. ಹಿರಿಯರ ಜೊತೆ ಮಾತನಾಡುವಾಗ ಹಿಡಿತವಿರಲಿ. ನೀವಾಡುವ ಅನವಶ್ಯಕ ಹಾಗೂ ನಿಷ್ಪ್ರಯೋಜಕ‌ ಮಾತಿನಿಂದ ನಿಮ್ಮನ್ನು ಅಳೆಯಬಹುದು. ಅಪವಾದದಿಂದ ನೀವು ಚುರುಕಾಗುವಿರಿ. ಯಾರದೋ ಮಾತಿಗೆ ಮಣಿದು ನಿಮ್ಮ ಗುರಿಯನ್ನು ಬದಲಿಸಿಕೊಳ್ಳುವುದು ಸರಿಯಲ್ಲ. ನೀವು ಬಹಳ ವೇಗವಾಗಿ ನಡೆಯುವಿರಿ ಹಾಗೂ ವೇಗವಾಗಿ ಮಾತನಾಡುವಿರಿ. ಸ್ತ್ರೀಯರಿಂದ ಸಹಕಾರವು ಸಿಗಬಹುದು. ಆತ್ಮೀಯತೆಯು ಬದಲಾಗಬಹುದು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ನಿಮ್ಮ ಕೆಲಸವು ನಿಮಗೆ ತೃಪ್ತಿಕರವಾಗಿ ಇರಲಿದೆ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ಎಲ್ಲವನ್ನೂ ಬೇರೆಯವರ ದೃಷ್ಟಿಯಲ್ಲಿ ನೋಡುವುದು ಸರಿಯಾಗದು.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ