AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saturn transit in Pisces: ಮೀನ ರಾಶಿಗೆ ಶನಿ ಗ್ರಹದ ಪ್ರವೇಶ ವೃಶ್ಚಿಕ ರಾಶಿ ಮೇಲೆ ಏನು ಪ್ರಭಾವ?

ನಿಮ್ಮ ರಾಶಿಗೆ ಪರಾಕ್ರಮ- ಯಶಸ್ಸು- ಸೋದರ ಸ್ಥಾನ ಹಾಗೂ ಸುಖ- ಮಾತೃ ಸ್ಥಾನದ ಅಧಿಪತಿಯಾದ ಶನಿಯು ಐದನೇ ಮನೆಯಲ್ಲಿ ಸಂಚಾರ ಮಾಡುತ್ತದೆ. ಈ ಅವಧಿಯಲ್ಲಿ ಮುಂಚಿನಂತೆ ಧೈರ್ಯವಾಗಿ ಮುನ್ನುಗ್ಗಿ, ಕೆಲಸಗಳನ್ನು ಮಾಡುವುದಕ್ಕಾಗಲೀ ಅಥವಾ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕಾಗಲೀ ಸಾಧ್ಯವಾಗುವುದಿಲ್ಲ. ಪದೇಪದೇ ಆಸ್ಪತ್ರೆಗೆ ಹೋಗಬೇಕಾದ, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಬೇಕಾದ ಸನ್ನಿವೇಶ ಎದುರಾಗುತ್ತದೆ. ಮೀನ ರಾಶಿಗೆ ಶನಿ ಗ್ರಹದ ಪ್ರವೇಶದಿಂದ ವೃಶ್ಚಿಕ ರಾಶಿಯಲ್ಲಿ ಈ ಬದಲಾವಣೆ ಆಗುತ್ತದೆ.

Saturn transit in Pisces: ಮೀನ ರಾಶಿಗೆ ಶನಿ ಗ್ರಹದ ಪ್ರವೇಶ ವೃಶ್ಚಿಕ ರಾಶಿ ಮೇಲೆ ಏನು ಪ್ರಭಾವ?
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
| Edited By: |

Updated on: Feb 28, 2025 | 4:43 PM

Share

2025ನೇ ಮಾರ್ಚ್ ತಿಂಗಳ 29ನೇ ತಾರೀಕು ಶನಿ ಗ್ರಹವು ಕುಂಭ ರಾಶಿಯಿಂದ ಮೀನಕ್ಕೆ ಪ್ರವೇಶಿಸುತ್ತದೆ. ಅದೇ ರಾಶಿಯಲ್ಲಿ ಜೂನ್ 3, 2027ರ ತನಕ ಇರುತ್ತದೆ. ಈ ಸಂಚಾರದೊಂದಿಗೆ ವೃಶ್ಚಿಕ ರಾಶಿಯವರಿಗೆ ಪಂಚಮ ಶನಿಯ ಪ್ರಭಾವ ಶುರುವಾಗುತ್ತದೆ. ನಿಮಗೆ ಆಗುವ ಸಮಸ್ಯೆಯ ಮೂಲ ಏನು ಎಂಬುದನ್ನು ಕಂಡುಕೊಳ್ಳುವುದಕ್ಕೇ ಸಾಧ್ಯವಾಗುವುದಿಲ್ಲ. ಗಾಬರಿ- ಆತುರದಲ್ಲಿ ನೀವೇ ಸಮಸ್ಯೆಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತೀರಿ. ಅಂದ ಹಾಗೆ ಈ ವರ್ಷದ ವಿಶೇಷ ಏನೆಂದರೆ ನಾಲ್ಕು ಪ್ರಮುಖ, ದೀರ್ಘಾವಧಿಗೆ ಒಂದೇ ರಾಶಿಯಲ್ಲಿ ಇರುವಂಥ ಗ್ರಹಗಳು ಸಂಚಾರ ಬದಲಿಸಿ, ತಮ್ಮ ಪರಿಕ್ರಮಣಕ್ಕೆ ತಕ್ಕಂತೆ ಮುಂದಿನ ರಾಶಿಗೆ ಪ್ರವೇಶಿಸುತ್ತವೆ. ಮಾರ್ಚ್ ನಲ್ಲಿ ಶನಿ ಗ್ರಹವಾದರೆ, ಮೇ ತಿಂಗಳಲ್ಲಿ ಗುರು, ರಾಹು- ಕೇತುಗಳು ಸಂಚಾರದಲ್ಲಿ ಬದಲಾವಣೆಯಿದೆ.

ಇನ್ನು ಶನಿ ಗ್ರಹಕ್ಕೆ ಮಕರ ಹಾಗೂ ಕುಂಭ ರಾಶಿಗಳು ಸ್ವಕ್ಷೇತ್ರವಾಗುತ್ತವೆ. ತುಲಾ ರಾಶಿಯು ಉಚ್ಚ ಕ್ಷೇತ್ರ ಮತ್ತು ಮೇಷ ರಾಶಿಯು ನೀಚ ಕ್ಷೇತ್ರವಾಗುತ್ತದೆ. ಮೀನ ರಾಶಿಯ ಅಂತಿಮ ಡಿಗ್ರಿಗಳಿಗೆ ತಲುಪುತ್ತಿದ್ದಂತೆಯೇ ಮೇಷ ರಾಶಿಯ ನೀಚಸ್ಥ ಫಲವನ್ನು ಶನಿ ಗ್ರಹ ನೀಡಲು ಆರಂಭಿಸುತ್ತದೆ.

ಹನ್ನೆರಡು ರಾಶಿಗಳ ಮೇಲೂ ಈ ಶನಿ ಸಂಚಾರದ ಫಲ ಇರಲಿದ್ದು, ವೃಶ್ಚಿಕ ರಾಶಿಯ ಮೇಲೆ ಏನು ಪ್ರಭಾವ ಆಗಲಿದೆ ಎಂಬ ವಿವರ ಇಲ್ಲಿದೆ.

ನಿಮ್ಮ ರಾಶಿಗೆ ಪರಾಕ್ರಮ- ಯಶಸ್ಸು- ಸೋದರ ಸ್ಥಾನ ಹಾಗೂ ಸುಖ- ಮಾತೃ ಸ್ಥಾನದ ಅಧಿಪತಿಯಾದ ಶನಿಯು ಐದನೇ ಮನೆಯಲ್ಲಿ ಸಂಚಾರ ಮಾಡುತ್ತದೆ. ಈ ಅವಧಿಯಲ್ಲಿ ಮುಂಚಿನಂತೆ ಧೈರ್ಯವಾಗಿ ಮುನ್ನುಗ್ಗಿ, ಕೆಲಸಗಳನ್ನು ಮಾಡುವುದಕ್ಕಾಗಲೀ ಅಥವಾ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕಾಗಲೀ ಸಾಧ್ಯವಾಗುವುದಿಲ್ಲ. ಪದೇಪದೇ ಆಸ್ಪತ್ರೆಗೆ ಹೋಗಬೇಕಾದ, ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಬೇಕಾದ ಸನ್ನಿವೇಶ ಎದುರಾಗುತ್ತದೆ. ಈ ಹಿಂದೆ ಯಾವಾಗಲೋ ಮಾಡಿದ್ದ ಕಾರ್ಯದಲ್ಲಿ ಆದ ಲೋಪ- ದೋಷಗಳು ಈಗ ಕಾಡುವುದಕ್ಕೆ ಆರಂಭಿಸುತ್ತವೆ. ಉದ್ದೇಶಪೂರ್ವಕವಾಗಿ ನೀವು ಆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿಸಿದ್ದೀರಿ ಎಂಬ ಆರೋಪ ಕೇಳಿಬರಲಿದೆ.

ಇನ್ನು ಮಕ್ಕಳ ಶಿಕ್ಷಣ, ಉದ್ಯೋಗ, ವಿವಾಹ ಇಂಥ ವಿಚಾರಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ. ಅದೇ ರೀತಿ ಕೆಲವರಿಗೆ ಮಕ್ಕಳ ಜೊತೆಗೆ ಅಭಿಪ್ರಾಯ ಭೇದ, ಮನಸ್ತಾಪ ಕಾಣಿಸಿಕೊಳ್ಳಬಹುದು. ಆರಂಭದಲ್ಲಿಯೇ ಹೇಳಿದಂತೆ ನಿಮಗೆ ಸಮಸ್ಯೆಯ ಮೂಲ ಯಾವುದು ಎಂಬುದು ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗುವುದಿಲ್ಲ. ಮನಸ್ಸಿಗೆ ಬೇಸರದಿಂದ ಯಾವುದೇ ಕಾರ್ಯದಲ್ಲೂ ಏಕಾಗ್ರತೆಯಿಂದ ತೊಡಗಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣ ಆಗಲಿದೆ.

ಮನೆ- ವಾಹನ ದುರಸ್ತಿಗೆ ವಿಪರೀತ ಖರ್ಚು ಬರಲಿದೆ. ಸೆಕೆಂಡ್ ಹ್ಯಾಂಡ್ ವಾಹನವನ್ನೋ ಅಥವಾ ಹಳೇ ಮನೆ ಖರೀದಿಸಿ, ಅದರ ದುರಸ್ತಿಯನ್ನೋ ಕೈಗೆತ್ತಿಕೊಂಡರೆ ಗಾಬರಿ ಆಗುವ ಮಟ್ಟಕ್ಕೆ ಖರ್ಚು- ವೆಚ್ಚಗಳು ಕಾಣಿಸಿಕೊಳ್ಳುತ್ತವೆ. ಈ ಅವಧಿಯಲ್ಲಿ ಗರ್ಭಿಣಿಯರು ತುಂಬ ಜಾಗ್ರತೆಯಿಂದ ಇರಬೇಕು. ಇನ್ನು ಸಂತಾನಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ನಾನಾ ಬಗೆಯಲ್ಲಿ ಅಡೆತಡೆಗಳು ಎದುರಾಗುತ್ತವೆ. ಐವಿಎಫ್ ಮೂಲಕ ಮಕ್ಕಳಿಗಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಂದರೆ ಸೂಕ್ತ ವೈದ್ಯೋಪಚಾರ, ವೈದ್ಯರ ಸಲಹೆಗಳನ್ನು ಒಂಚೂರು ತಪ್ಪಿಸದಂತೆ ಪಾಲನೆ ಮಾಡುವ ಕಡೆಗೆ ಗಮನವನ್ನು ನೀಡಿ.

ಬೇರೆಯವರ ವಸ್ತು, ವಾಹನ, ಒಡವೆ ಮೊದಲಾದವುಗಳನ್ನು ತಾತ್ಕಾಲಿಕವಾಗಿ ತೆಗೆದುಕೊಂಡು, ವಾಪಸ್ ಕೊಟ್ಟುಬಿಡೋಣ ಎಂದು ಆಲೋಚನೆ ಕೂಡ ಮಾಡಬೇಡಿ. ಇದಕ್ಕೆ ದೊಡ್ಡ ಬೆಲೆ ಕೊಡಬೇಕಾದೀತು. ಅತಿಯಾದ ಆತ್ಮವಿಶ್ವಾಸ, ಅತಿಯಾದ ಅನುಮಾನ ಎರಡೂ ನಿಮಗೆ ಸಮಸ್ಯೆಗಳನ್ನು ತರುತ್ತವೆ.

ಪರಿಹಾರ:

ಶನಿ ಗ್ರಹದ ಶಾಂತಿ- ಹೋಮ ಮಾಡಿಸಿಕೊಳ್ಳುವುದು ಉತ್ತಮ. ಒಂದು ವೇಳೆ ಇದಕ್ಕೆ ಹೆಚ್ಚಿನ ಖರ್ಚಾಗುತ್ತದೆ, ತಮ್ಮಿಂದ ಮಾಡುವುದಕ್ಕೆ ಸಾಧ್ಯವಿಲ್ಲ ಅಂತ ಅನ್ನುವವರು ಶನೈಶ್ಚರ ದೇವಸ್ಥಾನದಲ್ಲಿ ಶನಿ ದರ್ಶನ, ಅಭಿಷೇಕ, ದೀಪ ಹಚ್ಚುವುದನ್ನು ಮಾಡಬಹುದು ಅಥವಾ ನೀಲಿ ಬಟ್ಟೆಯಲ್ಲಿ ಮೂರು-ನಾಲ್ಕು ಹಿಡಿ ಕರಿ ಎಳ್ಳನ್ನು ಕಟ್ಟಿ, ವೀಳ್ಯದೆಲೆ, ಅಡಿಕೆ, ಬಾಳೇಹಣ್ಣು ಹಾಗೂ ದಕ್ಷಿಣೆ ಸಹಿತ ದಾನ ಮಾಡಬಹುದು. ಇನ್ನು ಯಾರಿಗೆ ಸಾಧ್ಯವೋ ಅವರು ದಶರಥ ಕೃತ ಶನಿ ಸ್ತೋತ್ರದ ಶ್ರವಣ (ಕೇಳಿಸಿಕೊಳ್ಳುವುದು) ಅಥವಾ ಪಾರಾಯಣ ಮಾಡಬಹುದು.

-ಸ್ವಾತಿ ಎನ್.ಕೆ.

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ