Horoscope: ಹುಟ್ಟಿನಿಂದ ಬಂದ ಸ್ವಭಾವವನ್ನು ಬದಲಿಸಲಾಗದು, ವಿಚಾರಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 18 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ಹುಟ್ಟಿನಿಂದ ಬಂದ ಸ್ವಭಾವವನ್ನು ಬದಲಿಸಲಾಗದು, ವಿಚಾರಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ
ಹುಟ್ಟಿನಿಂದ ಬಂದ ಸ್ವಭಾವವನ್ನು ಬದಲಿಸಲಾಗದು, ವಿಚಾರಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ
Follow us
|

Updated on: Jun 18, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್. 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 15:48 ರಿಂದ 17:25ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:20 ರಿಂದ ಬೆಳಿಗ್ಗೆ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 14:11ರ ವರೆಗೆ.

ಮೇಷ ರಾಶಿ: ಇಂದು ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆದರೆ ನಿಮ್ಮ ಆರೋಗ್ಯವನ್ನೂ ನೀವು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ತಿಳಿವಳಿಕೆ ಇಲ್ಲದ ಕೆಲಸದಲ್ಲಿ ಜಾಗರೂಕತೆಯಿಂದ ಹೆಜ್ಜೆ ಇಡಿ. ವಾಹನವನ್ನು ಖರೀದಿಸುವಾಗ ಅವಶ್ಯಕತೆಯ ಬಗ್ಗೆ ಅರಿವಿರಲಿ. ನಂಬಿದವರಿಗೆ ಭರವಸೆಯ ಮಾತನ್ನಾದರೂ ಕೊಡಿ. ಕೂಲಂಕಷ ಅಧ್ಯಯನ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ.

ವೃಷಭ ರಾಶಿ: ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು. ಕಳೆದುಕೊಂಡದ್ದನ್ನು ಪಡೆಯುವ ಹಠವಿರುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಕೆಟ್ಟ ಕನಸು ನಿಮ್ಮ ಚಿಂತಿತರನ್ನಾಗಿ ಮಾಡುವುದು. ನೀವಿಂದು ಕಷ್ಟದ ಕೆಲಸವನ್ನು ಸುಲಭವಾಗಿ ಮಾಡುವ ವಿಧಾನವನ್ನು ಹುಡುಕುವಿರಿ.ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಹುಡುಗಾಟ ಬುದ್ಧಿಯನ್ನು ಕಡಿಮೆ ಮಾಡುವುದು ಒಳ್ಳೆಯದು. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ.

ಮಿಥುನ ರಾಶಿ: ಇಂದು ನಿಮ್ಮ ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳದ ಅನ್ವೇಷಣೆ ಮಾಡುವಿರಿ. ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಐತಿಹಾಸಿಕ ದೇವಾಲಯವನ್ನು ನೋಡುವ ಹಂಬಲವಿರುವುದು. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಲಿಸೆ. ಅತಿಯಾದರೆ ಅಮೃತವೂ ವಿಷ. ಅಹಂಕಾರದಿಂದ ಮುಗ್ಗರಿಸಿ ಬೀಳುವಿರಿ. ನೀವು ನಿಮ್ಮ ಬಗ್ಗೆ ಮಾಡಿಕೊಳ್ಳುವ ಸಮರ್ಥನೆಯು ಅಹಂಕಾರವೆನಿಸುವುದು. ಮಂದಗತಿಯಲ್ಲಿ ಸಾಗುವ ಜೀವನ ಎಂದು ಮೂದಲಿಸದೇ ಖುಷಿಯಿಂದ ಮುನ್ನಡೆಯಿರಿ.‌ ಸಂತೋಷವು ಸಿಗಲಿದೆ. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು.‌ ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.

ಕರ್ಕ ರಾಶಿ: ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು. ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆ. ಹುಟ್ಟಿನಿಂದ ಬಂದ ಸ್ವಭಾವವನ್ನು ತಿದ್ದಲಾಗದು. ಮನೆಯಲ್ಲಿ ನಿಮ್ಮ ಸ್ವಭಾವವನ್ನು ತಿದ್ದಲು ಪ್ರಯತ್ನಿಸುವರು. ಮಕ್ಕಳು ನಿಮ್ಮನ್ನು ಅತಿಯಾಗಿ ಹಚ್ಚಿಕೊಳ್ಳುವರು. ತುರ್ತು ನಿರ್ಧಾರವನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಅತಿ ಪರಿಚಯವು ನಿಮಗೆ ಮುಳುವಾಗಬಹುದು. ಅನಾರೋಗ್ಯವು ನಿಮಗೆ ಅಭ್ಯಾಸವಾಗಿದ್ದರೂ ಗುಣಪಡಿಸಿಕೊಳ್ಳುವುದು ಉತ್ತಮ. ಓದುವ ಸಮಯವನ್ನು ಓದಲೆಂದೇ ಮೀಸಲಿಡಿ. ಅವಕಾಶಗಳಿಗೆ ಕಾಯಬೇಡಿ. ಮಾಡಬೇಕು ಎಂದು ಅನ್ನಿಸಿದ್ದನ್ನು ಮಾಡಿ‌ಮುಗಿಸಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದೆ ಸಾಗಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್