
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ.
ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು ಕೊಂಚ ಕಠಿಣವಾಗಿರುತ್ತವೆ.
ನಿಮ್ಮ ರಾಶ್ಯಾಧಿಪತಿ ಶನಿಯೇ ಆಗಿರುವುದರಿಂದ, ಕೆಲಸದಲ್ಲಿ ಶಿಸ್ತು ಮತ್ತು ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಹಳೆಯ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ.
ಹತ್ತನೇ ಮನೆಯಲ್ಲಿ ಈ ಸ್ಥಿತಿ ಇರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಸಿಗುತ್ತವೆ. ಅಧಿಕಾರದಲ್ಲಿರುವವರಿಂದ ಗೌರವ ದೊರೆಯುತ್ತದೆ.
ಸಂಶೋಧನೆ ಅಥವಾ ತಾಂತ್ರಿಕ ಕ್ಷೇತ್ರದಲ್ಲಿ ಇರುವವರಿಗೆ ಈ ಕಾಲವು ಬಹಳ ಅನುಕೂಲಕರವಾಗಿದೆ. ಶ್ರಮಕ್ಕೆ ತಕ್ಕಂತೆ ಆರ್ಥಿಕ ಲಾಭವಾಗಲಿದೆ.
ಏಕಾದಶ ರಾಶಿಯಲ್ಲಿ ಸೂರ್ಯ ಇರುವುದರಿಂದ ಆರ್ಥಿಕ ಲಾಭವಿರುತ್ತದೆ, ಆದರೆ ಸ್ನೇಹಿತರೊಂದಿಗೆ ಅಥವಾ ಹಿರಿಯ ಸಹೋದರರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ.
ನಿಮ್ಮ ಧೈರ್ಯ ಹೆಚ್ಚಾಗುತ್ತದೆ. ಸಣ್ಣ ಪ್ರಯಾಣಗಳಿಂದ ಲಾಭವಾಗಬಹುದು, ಆದರೆ ಕೆಲಸದಲ್ಲಿ ವಿಳಂಬ ಉಂಟಾಗಬಹುದು.
ಸೂರ್ಯನು ನಿಮ್ಮ ರಾಶ್ಯಾಧಿಪತಿ. ಸಪ್ತಮ ಸ್ಥಾನದಲ್ಲಿ ಶತ್ರು ರಾಶಿಯಲ್ಲಿದ್ದು ಶನಿ ದ್ರೇಕ್ಕಾಣದಲ್ಲಿರುವುದು ದಾಂಪತ್ಯ ಜೀವನದಲ್ಲಿ ಉದ್ವಿಗ್ನತೆ ಅಥವಾ ಪಾಲುದಾರಿಕೆಯಲ್ಲಿ ನಷ್ಟ ತರಬಹುದು. ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.
ಅಷ್ಟಮ ಸ್ಥಾನದಲ್ಲಿ ಸೂರ್ಯ ಮತ್ತು ಶನಿಯ ಪ್ರಭಾವ ಇರುವುದರಿಂದ ಅನಗತ್ಯ ಮಾನಸಿಕ ಒತ್ತಡ, ಅಪವಾದ ಅಥವಾ ತಂದೆಯ ಆರೋಗ್ಯದಲ್ಲಿ ಏರುಪೇರಾಗಬಹುದು.
ಚತುರ್ಥದಲ್ಲಿ ಈ ಸ್ಥಿತಿ ಇರುವುದರಿಂದ ಮನೆಯ ಸುಖ-ಶಾಂತಿಗೆ ಭಂಗ ಬರಬಹುದು ಅಥವಾ ಆಸ್ತಿ ವಿಚಾರದಲ್ಲಿ ವಿವಾದಗಳು ತಲೆದೂರಬಹುದು.
ಸೂರ್ಯ-ಶನಿ ಸಂಬಂಧವು ತಂದೆ-ಮಗನ ನಡುವಿನ ಭಿನ್ನಾಭಿಪ್ರಾಯ ಅಥವಾ ಮೇಲಧಿಕಾರಿಗಳೊಂದಿಗೆ ಸಂಘರ್ಷವನ್ನು ಸೂಚಿಸುತ್ತದೆ.
ಈ ಸಮಯದಲ್ಲಿ ಪ್ರತಿದಿನ ಶಿವ ಪಂಚಾಕ್ಷರಿ ಮಂತ್ರ ಜಪಿಸುವುದು ಅಥವಾ ಸೂರ್ಯನಿಗೆ ನಮಸ್ಕಾರ ಅಶುಭ ಫಲಗಳನ್ನು ಕಡಿಮೆ ಮಾಡಲು ಸಹಕಾರಿ.
– ಲೋಹಿತ ಹೆಬ್ಬಾರ್