AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಕ್ಷತ್ರದಲ್ಲಿ ಜನಿಸಿದವರಿಗೆ ಸುಂದರ ದೇಹವಿರುತ್ತದೆ..!

ಈ ನಕ್ಷತ್ರವನ್ನು ಚಂದ್ರನ ಅತ್ಯಂತ ಪ್ರೀತಿಯ ಪತ್ನಿ ಎಂದು ಪರಿಗಣಿಸುತ್ತಾರೆ. ಇದು ವೃಷಭ ರಾಶಿಯಲ್ಲಿ ಬರುವ ಪೂರ್ಣ ನಕ್ಷತ್ರ.

ಈ ನಕ್ಷತ್ರದಲ್ಲಿ ಜನಿಸಿದವರಿಗೆ ಸುಂದರ ದೇಹವಿರುತ್ತದೆ..!
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 07, 2024 | 11:47 AM

Share

ಇಪ್ಪತ್ತೇಳು ನಕ್ಷತ್ರಗಳಲ್ಲಿ ರೋಹಿಣೀ ಮೂರನೇ ನಕ್ಷತ್ರ. ಇದರ ದೇವತೆ ಬ್ರಹ್ಮಾ. ಈ ನಕ್ಷತ್ರವನ್ನು ಚಂದ್ರನ ಅತ್ಯಂತ ಪ್ರೀತಿಯ ಪತ್ನಿ ಎಂದು ಪರಿಗಣಿಸುತ್ತಾರೆ. ಇದು ವೃಷಭ ರಾಶಿಯಲ್ಲಿ ಬರುವ ಪೂರ್ಣ ನಕ್ಷತ್ರ. ನಕ್ಷತ್ರ ಸಮೂಹಗಳಿಂದ ಕೂಡಿರುವ ನಕ್ಷತ್ರವಿದು. ಶ್ರೀಕೃಷ್ಣನ ನಕ್ಷತ್ರವೂ ಇದೇ ಆಗಿದೆ.

ಈ ನಕ್ಷತ್ರದಲ್ಲಿ ಜನಿಸಿದರು ಹೇಗಿರುತ್ತಾರೆ? ಯಾವ ಅಂಶಗಳನ್ನು ಹೆಚ್ಚು ರೂಢಿಸಿಕೊಳ್ಳುತ್ತಾರೆ? ಇವುದು ಇಷ್ಟ? ಎನ್ನುವುದನ್ನು ನೋಡೋಣ.

ಧರ್ಮಕಾರ್ಯದಲ್ಲಿ ಕುಶಲ :

ಧಾರ್ಮಿಕ ಆಚರಣೆಯನ್ನು ಹೇಗೆ ಮಾಡಬೇಕು ಎನ್ನುವ ಕೌಶಲವು ಇವರಿಗೆ ತಿಳಿದಿದೆ. ದೇವರಿಗೆ ಹಿರಿಯರಿಗೆ ಪ್ರಿಯವಾದುದನ್ನು ಮಾಡಲು ಇವರು ತಿಳಿದಿರುತ್ತಾರೆ.

ಉತ್ತಮ ಕುಲದಲ್ಲಿ ಜನನ :

ಇವರು ಯಾವುದೋ ಸಾಮಾನ್ಯ ಕುಲದಲ್ಲಿ ಜನಿಸದೇ, ಇವರ ತಂದೆ, ತಾಯಿ, ಅಜ್ಜ ಅಥವಾ ಇವರ ತಲೆಮಾರಿನಲ್ಲಿ ಯಾರಾದರೂ ಶ್ರೇಷ್ಠರು ಜನಿಸಿದವರಾಗಿರುತ್ತಾರೆ. ಅಂತಹ ಗೌರವಯುತವಾದ ಕುಟುಂಬದಲ್ಲಿ ಜನಿಸುವರು.

ಸುಂದರದೇಹ :

ಇವರ ದೇಹವೂ ಆತ್ಯಂತ ಆಕರ್ಷಕವಾಗಿ ಇರುತ್ತದೆ. ದೊಡ್ಡದಾದ, ಕೃಶವೂ ಸ್ಥೂಲವೂ ಅಲ್ಲದ ಶರೀರ, ಕಾಂತಿಯಿಂದಲೂ ಕೂಡಿರುತ್ತದೆ. ನೃತ್ಯ, ನಾಟಕ ಮುಂತಾದ ಕಲೆಗಳಿಗೆ ಯೋಗ್ಯವಾದ ಕಡೆ ಹೆಚ್ಚು ಆಸಕ್ತಿ ಇರುತ್ತದೆ.

ಧನವಾನ್ :

ಇವರ ಬಳಿ ಅಧಿಕ ಧನವಿರುತ್ತದೆ. ಸ್ಥಿತಿವಂತರಾಗಿ ಬಾಳುವರು. ಧನ, ಆಸ್ತಿಗಳು, ವಿದ್ಯೆ ಇವುಗಳು ಸಂಪತ್ತೇ ಆಗಿರುತ್ತದೆ.

ಮಾನವಾನ್ :

ಇವರು ಎಲ್ಲ ಕಡೆಗಳಿಂದ, ಎಲ್ಲರಿಂದ ಗೌರವವನ್ನು ಪಡೆದುಕೊಳ್ಳುವರು. ಅಂತಹ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳುತ್ತಾರೆ.

ಪ್ರಿಯವಾದ ಮಾತು :

ಇವರು ಅಂತರಂಗದಲ್ಲಿ ಏನೇ ಇದ್ದರು ಅದನ್ನು ಹೊರಹಾಕದೇ ಎಲ್ಲರ ಜೊತೆಯೂ ಪ್ರೀತಿಯಿಂದ ಸಂತೋಷವಾಗುವಂತೆ ಮಾತನಾಡುತ್ತಾರೆ.

ಶುಚಿತ್ವ :

ಇವರ ಇನ್ನೊಂದು ಗುಣ ಶುಚಿಯಾಗಿರುವುದು.‌ ಮನಸ್ಸಿಗೆ ಹಾಗೂ ದೇಹವನ್ನು ಶುದ್ಧವಾಗಿ ಇಟ್ಟುಕೊಳ್ಳಲು ಬಯಸುವರು. ತಮ್ಮ ವಸ್ತುಗಳ ಬಗ್ಗೆಯೂ ಶುಚಿತ್ವವು ಇರುವುದು.

ಈ ನಕ್ಷತ್ರದ ಗುಣ ಹಾಗೂ ಶ್ರೀಕೃಷ್ಣನ ನಡೆವಳಿಕೆಗೆ ಎರಡಕ್ಕೂ ಕೂಡ ಹೆಚ್ಚು ಹೋಲಿಕೆ ಇದೆ. ಈ ನಕ್ಷತ್ರಗಳಲ್ಲಿ ಜನಿಸಿದವರಿಗೆ ಅಲ್ಪ ಪ್ರಮಾಣದ ಲಕ್ಷಣಗಳು ಬಂದೇ ಬರುತ್ತವೆ.

– ಲೋಹಿತ ಹೆಬ್ಬಾರ್ – 8762924271

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ