AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಭವಿಷ್ಯದ ಬಗ್ಗೆ ಇರಬೇಕಾದ ಕಾಳಜಿಯು ಕಡಿಮೆ ಆಗುವುದು, ಕೆಲಸಕ್ಕೆ ಪ್ರಶಂಸೆ ಸಿಗಲಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಭವಿಷ್ಯದ ಬಗ್ಗೆ ಇರಬೇಕಾದ ಕಾಳಜಿಯು ಕಡಿಮೆ ಆಗುವುದು, ಕೆಲಸಕ್ಕೆ ಪ್ರಶಂಸೆ ಸಿಗಲಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 16, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 16 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:35 ರಿಂದ 08:00ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:26 ರಿಂದ 10:52ರ ವರೆಗೆ.

ಮೇಷ ರಾಶಿ: ನಿಮ್ಮ ಬಗ್ಗೆ ಕೆಲವು ಅಪಸ್ವರಗಳು ಬಂದರೂ ಆ ಬಗ್ಗೆ ಕಿವಿಗೊಡದೆ ಸ್ಥೈರ್ಯವನ್ನು ಕಾಪಾಡಿಕೊಳ್ಳಿ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಕೆಟ್ಟ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಕೆಲವು ಸಮಸ್ಯೆಯು ನಿಮ್ಮ ಮಾನಸಿಕತೆಯಿಂದಾಗಿಯೇ ಇರುವುದು. ಇದು ಶಾಶ್ವತವಾಗಿ ಇರದು ಎಂಬುದನ್ನು ಮರೆಯಬಾರದು.

ವೃಷಭ ರಾಶಿ: ಭವಿಷ್ಯದ ಬಗ್ಗೆ ಇರಬೇಕಾದ ಕಾಳಜಿಯು ಕಡಿಮೆ ಆಗುವುದು. ಸ್ನೇಹಿತರ ಬೆಂಬಲವನ್ನು ನೀವು ಪೂರ್ಣವಾಗಿ ಒಪ್ಪಲಾರಿರಿ. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ಸಂಗಾತಿಯ ಜೊತೆ ಸಮಯವನ್ನು ಕಳೆಯಬೇಕು ಎನಿಸಬಹುದು. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು.

ಮಿಥುನ ರಾಶಿ: ಹೂಡಿಕೆಯ ವಿಚಾರ‌ ಬಂದಾಗ ಆಮೂಲಾಗ್ರ ದೃಷ್ಟಿಯು ಇರಲಿ. ಸುಮ್ಮನೇ ಒಪ್ಪಿಗೆ ಬೇಡ. ಮಾನಸಿಕ ನೋವನ್ನು ಸಹಿಸಲಾಗದು. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಯಲ್ಲಿ ಹಣವಿದ್ದಷ್ಟು ಖರ್ಚು ತಾನಾಗಿಯೇ ಹುಡುಕಿಕೊಂಡು ಬರಬಹುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ.

ಕಟಕ ರಾಶಿ: ಅನವಶ್ಯಕ ವಸ್ತುಗಳನ್ನು ದೂರ ಮಾಡುವಿರಿ. ಸಂಯಮದಿಂದ ವರ್ತಿಸುವುದು ಅವಶ್ಯಕ. ಇಂದು ನಿಮ್ಮ ಜೇಬು ತುಂಬಿದಂತೆ ಕಂಡರೂ ಒಳಗೆ ರಂಧ್ರವಿರುವುದು ಗೊತ್ತಾಗದೇ ಹೋಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು. ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ