Horoscope: ಸುಲಭವಾಗಿ ಸಿಗುವ ಸಂಪತ್ತು ಈ ರಾಶಿಯವರಿಗೆ ಧಕ್ಕದು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 26, 2024 | 12:05 AM

26 ಅಕ್ಟೋಬರ್​ 2024: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಸುಲಭವಾಗಿ ಸಿಗುವ ಸಂಪತ್ತು ನಿಮಗೆ ಧಕ್ಕದು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಇರುವುದು. ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ಆಕಸ್ಮಾತ್ತಾಗಿ ಭೇಟಿಯಾಗುವಿರಿ. ಭೂ ವ್ಯವಹಾರಕ್ಕೆ ರಾಜಕೀಯದ ನಂಟು ಬರುವುದು. ಹಾಗಾದರೆ ಅಕ್ಟೋಬರ್ 26ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಸುಲಭವಾಗಿ ಸಿಗುವ ಸಂಪತ್ತು ಈ ರಾಶಿಯವರಿಗೆ ಧಕ್ಕದು
ಸುಲಭವಾಗಿ ಸಿಗುವ ಸಂಪತ್ತು ಈ ರಾಶಿಯವರಿಗೆ ಧಕ್ಕದು
Follow us on

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶುಕ್ಲ​​, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:49 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:44 ರಿಂದ 03:11ರವರೆಗೆ, ಗುಳಿಕ ಕಾಲ ಬೆಳಿಗ್ಗೆ 06:27 ರಿಂದ 07:55 ರವರೆಗೆ.

ಮೇಷ ರಾಶಿ: ನಿಮ್ಮ ವಸ್ತುವಿನ ಕಳ್ಳತನವಾಗಲಿದೆ. ಇಂದು ದೈವಭಕ್ತಿಗೆ ನಿಮಗೆ ಅನುಕೂಲಕರ ವಾತಾವರಣವು ಸಿಗಲಿದೆ. ಮನಃಕ್ಲೇಶವನ್ನು ಕಡಿಮೆ ಮಾಡಿಕೊಳ್ಳುವುದು ಅನಿವಾರ್ಯವಾಗುವುದು. ಕಳ್ಳತನದ ಭೀತಿಯು ಇರಬಹುದು. ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡುವುದಿಲ್ಲ. ಸೇವಾಮನೋಭಾವದ ಕಾರ್ಯಕ್ಕೆ ತೃಪ್ತಿ ಇರುವುದು. ಇದರಿಂದ ಸ್ವಲ್ಪ ನಷ್ಟವೂ ಆದೀತು‌. ವೃತ್ತಿಪರರಾದ ನಿಮಗೆ ಕಛೇರಿಯಿಂದ ಅಶುಭವಾರ್ತೆಯು ಬರಬಹುದು. ಹಳೆಯ ಸಂಗಾತಿಯ ನೆನಪು ಇಂದು ಮತ್ತೆ ಮತ್ತೆ ನೆನಪಾಗುವುದು. ಮನೆಯಲ್ಲಿ ಧಾರ್ಮಿಕ ಸಮಾರಂಭವನ್ನು ಯೋಜಿಸುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಬಂಧುಗಳ ಕಡೆಯಿಂದ ವಿವಾಹ ಸಂಬಂಧವು ಬರಬಹುದು.

ವೃಷಭ ರಾಶಿ: ದೇವರು ಕೊಟ್ಟರೂ ಪೂಜಾರಿ ಕೊಡ ಎಂಬ ಭಾವ ಬರಬಹುದು. ಇಂದು ದುರಭ್ಯಾಸದಿಂದ ಸಿಗುವ ಉನ್ನತ ಸ್ಥಾನವು ತಪ್ಪಬಹುದು. ಸುಲಭವಾಗಿ ಸಿಗುವ ಸಂಪತ್ತು ನಿಮಗೆ ಧಕ್ಕದು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಇರುವುದು. ನಿಮ್ಮ ನೆಚ್ಚಿನ ವ್ಯಕ್ತಿಗಳನ್ನು ಆಕಸ್ಮಾತ್ತಾಗಿ ಭೇಟಿಯಾಗುವಿರಿ. ಭೂ ವ್ಯವಹಾರಕ್ಕೆ ರಾಜಕೀಯದ ನಂಟು ಬರುವುದು. ಕುಟುಂಬದ ಜೊತೆ ಪ್ರಯಾಣವನ್ನೂ ಮಾಡುವ ಆಲೋಚನೆಯು ಇರಲಿದೆ. ನಿಮಗೆ ಕೊಟ್ಟ ಕೆಲಸವನ್ನು ಬಿಟ್ಟು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ನಿಮ್ಮವರ ಸ್ವೇಚ್ಛಾಚಾರದ ನಡವಳಿಕೆಯು ನಿಮಗೆ ಇಷ್ಡವಾಗದು. ಅದನ್ನು ಬೇರೆ ಮಾತಿನ ಮೂಲಕ ತಿಳಿಸುವಿರಿ. ಹಣವನ್ನು ಕೊಟ್ಟು ವಸ್ತುವನ್ನೂ ಕಳೆದುಕೊಳ್ಳುವ ಸ್ಥಿತಿಯು ಬರಬಹುದು. ಸಂಗಾತಿಯ ದೌರ್ಬಲ್ಯಗಳನ್ನು ಎತ್ತಿ ಆಡುವಿರಿ. ಇರುವ ಸ್ಥಳವನ್ನು ಬಿಟ್ಟು ಬೇರೆಡೆಗೆ ಹೋಗಲು ಇಷ್ಟವಾಗದು. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ.

ಮಿಥುನ ರಾಶಿ: ನಿಮ್ಮ ಬಳಿ ಮಾತನಾಡಲು ಇಷ್ಟಪಡದೇ ಇರಬಹುದು. ನಿಮ್ಮ ಇಂದಿನ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತ್ಸಾಹವನ್ನು ಕೊಡುವುದು. ಎಷ್ಟೇ ಹುಡುಕಿದರೂ ನಿಮಗೆ ಬೇಕಾದ ಉದ್ಯೋಗವು ಸಿಗದೇ ಜೀವನವು ನಿರುತ್ಸಾಹದಿಂದ ಕೂಡಿರಬಹುದು. ಸಾಮಾಜಿಕ ಕಾರ್ಯಗಳತ್ತ ಮನಸ್ಸು ಮಾಡುವಿರಿ. ಉದ್ಯಮದ ವಿಸ್ತಾರಕ್ಕೆ ಪಾಲುದಾರರಿಂದ ಸಹಕಾರ ಸಿಗದು. ಸಹೋದ್ಯೋಗಿಗಳು ಕಿರಿಕಿರಿಯನ್ನು ನೀಡಬಹುದು. ಮಕ್ಕಳ ಭವಿಷ್ಯಕ್ಕೆ ನೀವು ಸ್ವಲ್ಪ ಹಣವನ್ನು ಹೊಂದಿಸುವಿರಿ. ದೂರದಲ್ಲಿದ್ದ ಮಕ್ಕಳನ್ನು ಬಹಳ ದಿನಗಳ ಅನಂತರದ ಭೇಟಿ ಮಾಡುವಿರಿ. ನಿಮಗೆ ಇಷ್ಟವಾದ ಸ್ಥಳವು ಸಿಗದೇ ಇರುವ ಕಾರಣ ಸ್ಥಿರಾಸ್ತಿಯ ಖರೀದಿಯನ್ನು ಮುಂದೂಡುವುದು ಉತ್ತಮ. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು. ಅನಾಸಕ್ತಿಗೆ ಕಳ್ಳದಾರಿಯನ್ನು ಹುಡುಕುವಿರಿ. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ಕರ್ಕಾಟಕ ರಾಶಿ: ಇಂದು ನೀವು ಶತ್ರುಗಳನ್ನು ತಂತ್ರದಿಂದ ಸೋಲಿಸಬಹುದು. ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನವು ಇರುವುದು. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೋರಿಸುವಿರಿ. ಗೆಲುವಿಗೆ ಬಹಳ ಪ್ರಯತ್ನಪಡುವಿರಿ. ವ್ಯಕ್ತಿಗಳನ್ನು ನೋಡಿ ನಿಮ್ಮ ಮಾತು ಇರಲಿ. ನಿಮ್ಮ ಸಾಧನೆಗೆ ಗೌರವವು ಸಿಗಬಹುದು. ನಿಮ್ಮ ಸ್ಥಾನದ ಬಗ್ಗೆ ನಿಮಗೆ ಭಯವಿರುವುದು. ಹಳೆಯ ಪ್ರೇಯಸಿಯಿಂದ ಪೀಡಿತರಾಗಬಹುದು. ದ್ವೇಷವನ್ನು ಸಾಧಿಸುವುದು ನಿಮ್ಮ ಅವಗುಣಗಳಲ್ಲಿ ಒಂದಾಗಿದ್ದು ಅದನ್ನು ಬಿಡಬೇಕಾಗಬಹುದು. ಧಾರ್ಮಿಕ ಆಚರಣೆಗಳಲ್ಲಿ ಸ್ವತಃ ತೊಡಗುವಿರಿ. ನೀವು ಅನುಸರಿಸುವ ಕ್ರಮದಲ್ಲಿ ವ್ಯತ್ಯಾಸ ಇರಬಹುದು. ವಿವಾಹಕ್ಕೆ ಬರುವ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಿ. ನಿಮ್ಮ ಮಾತುಗಳಿಂದ ನೋವಾಗಲಿದೆ. ಕ್ಷುಲ್ಲಕ ಕಾರಣವನ್ನು ಬಿಟ್ಟು ಖುಷಿಯಿಂದ ಮಾತನಾಡಿ.

ಸಿಂಹ ರಾಶಿ: ಮಹಿಳೆಯರಿಗೆ ಖಾಸಗಿ ಸಂಸ್ಥೆಯಲ್ಲಿ‌ ಉದ್ಯೋಗಕ್ಕೆ‌ ಕರೆ‌ಬರುವುದು. ಎಲ್ಲರಿಂದ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಕ್ಕರೂ ನಿಮಗೆ ಕಾರ್ಯದಲ್ಲಿ ಸಮಾಧಾನ ಸಿಗದು. ಬಂದ ಹಣವು ಸಾಲವನ್ನು ತೀರಿಸಲಿಕ್ಕೇ ಸರಿಯಾಗುವುದು. ಅವ್ಯವಹಾರವನ್ನು ಮಾಡಲು ಸಹೋದ್ಯೋಗಿಗಳು ಪ್ರೇರಿಸಬಹುದು. ಪರೀಕ್ಷೆಯ ಫಲಿತಾಂಶದಿಂದ ನಿಮಗೆ ಸಂತೋಷವಾಗಲಿದೆ. ವ್ಯರ್ಥ ಎಂದುಕೊಂಡ ವಿದ್ಯೆಯು ಇಂದು ಪ್ರಯೋಜನಕ್ಕೆ ಬರಲಿದೆ. ಮನೆಗೆ ಬೇಕಾದ ವಸ್ತುವನ್ನು ಯಾರಿಗೂ ಹೇಳದೇ ತರುವಿರಿ. ಮಾತೇ ಎಲ್ಲದಕ್ಕೂ ಪರಿಹಾರವಾಗಲಾರದು, ಮೌನದಿಂದಲೂ ಉತ್ತರಿಸುವಿರಿ. ನಿಮ್ಮ‌ ಕೆಲವು ಕಾರ್ಯಗಳು ನಿಷ್ಪ್ರಯೋಜಕ ಎಂದು ಅನ್ನಿಸುವುದು. ಪೂರ್ವಾಗ್ರಹ ಬುದ್ಧಿಯಿಂದ ಸರಿ ತಪ್ಪುಗಳನ್ನು ನಿರ್ಣಯಿಸುವುದು ಸಾಧ್ಯವಾಗದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ವಿದೇಶದವರ ಜೊತೆ ನಿಮ್ಮ ವ್ಯವಹಾರವು ನಡೆಯುವುದು.

ಕನ್ಯಾ ರಾಶಿ: ನೀವು ಮಾಡಿದ್ದೆಲ್ಲವೂ ಸರಿ ಎಂಬ ಭ್ರಮೆ ಬಿಟ್ಟು ಬೇರೆಯವರ ಮಾತನ್ನೂ ಕೇಳಿ. ಇಂದು ಮಕ್ಕಳ ವಿಚಾರಕ್ಕೆ ಹಣವು ವ್ಯಯವಾಗಬಹುದು. ಸಮಾಧಾನಚಿತ್ತವು ನಿಮಗೆ ಅನೇಕ ಸುಂದರ ಸಮಯವನ್ನು ಅನುಭವಿಸುವಿರಿ. ಮಕ್ಕಳಿಗೆ ಏನನ್ನೂ ಕೊಡಬಾರದು ಎಂಬ ನಿಶ್ಚಯ ಮಾಡುವಿರಿ. ಭೂಮಿಯ ವ್ಯವಹಾರದಿಂದ ಹಣವನ್ನು ಕಳೆದುಕೊಳ್ಳಬೇಕಾಗಬಹುದು. ಮನೆಯ ವಾತಾವರಣವು ನಿಮಗೆ ಹಿತವೆನಿಸುವುದು. ಧಾರ್ಮಿಕ ಆಚರಣೆಗಳಲ್ಲಿ ಮನಸ್ಸಾಗುವುದು. ಮಾನಸಿಕ ಕಿರಿಕಿರಿಯನ್ನು ತಪ್ಪಿಸಿಕೊಳ್ಳಲು ಅನ್ಯ ಮಾರ್ಗವನ್ನು ಆಶ್ರಯಿಸಿವಿರಿ. ಸ್ವಾಭಿಮಾನವು ನಿಮ್ಮ ಪ್ರತಿಷ್ಠೆಯಾಗಲಿದೆ. ತಪ್ಪಿಗೆ ಪಶ್ಚಾತ್ತಾಪಪಡುವಿರಿ. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ನಿಮ್ಮ ಮಾತು ಇನ್ನೊಬ್ಬರ ಕೋಪವನ್ನು ಕರಗಿಸೀತು. ನಿಮ್ಮ ಬಗ್ಗೆ ಬರುವ ಆರೋಪವನ್ನು ಸುಳ್ಳು ಮಾಡಿ ತೋರಿಸುವ ಕಾರ್ಯಕ್ಕೆ ಮುಂದಾಗುವಿರಿ.