AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರಿಗೆ ತಾವು ಅನಾಥವೆನ್ನುವ ಭಾವ ಬರಬಹುದು

24 ಫೆಬ್ರವರಿ​ 2025: ಸೋಮವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಹಾಗಾದರೆ ಫೆಬ್ರವರಿ 24 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರಿಗೆ ತಾವು ಅನಾಥವೆನ್ನುವ ಭಾವ ಬರಬಹುದು
ಈ ರಾಶಿಯವರಿಗೆ ತಾವು ಅನಾಥವೆನ್ನುವ ಭಾವ ಬರಬಹುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 24, 2025 | 12:10 AM

Share

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಿದ್ಧಿ, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:22 – 09:50, ಯಮಘಂಡ ಕಾಲ 11:18 – 12:46, ಗುಳಿಕ ಕಾಲ 14:14 – 15:42.

ಮೇಷ ರಾಶಿ: ನಿಮ್ಮ ಉದ್ದೇಶದ ಸಾಧನೆಗೆ ದೈವಕ್ಕೆ ಶರಣಾಗುವಿರಿ. ನಿಮಗೆ ಆಕಸ್ಮಿಕವಾಗಿ ಸಿಕ್ಕ ವಸ್ತುಗಳನ್ನು ನೀವು ಜೋಪಾನ ಮಾಡಿಕೊಳ್ಳುವಿರಿ. ವಿವಿಧ ವೃತ್ತಿಗಳು ನಿಮ್ಮನ್ನು ಕರೆಯಬಹುದು. ಪಾಲುದಾರಿಕೆಯು ನಿಮಗೆ ಮೋಸದಂತೆ ಕಾಣುವುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು. ನೀರಿನ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು. ಬೇರೆ ಬೇರೆ ಕ್ಷೇತ್ರಗಳ ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಕೆಲವರಿಂದ ದೂರವಿರುವ ಪ್ರಯತ್ನವನ್ನು ಮಾಡುವಿರಿ. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳಬಹುದು. ಮನಸ್ಸಿನ ಚಾಂಚಲ್ಯವನ್ನು ನಿವಾರಿಸಲು ಯೋಗವೇ ಮದ್ದಾಗಲಿದೆ.

ವೃಷಭ ರಾಶಿ: ಅನಾಥ ಎನ್ನುವ ಭಾವ ಬರಬಹುದು. ಗೊತ್ತಿಲ್ಲದ ವಿಚಾರಗಳನ್ನು ಹಂಚಿಕೊಳ್ಳುವುದು ಬೇಡ. ಎಲ್ಲರ ಸಹಕಾರದಿಂದ ಮನೆಯ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಯತ್ನಕ್ಕೆ ಸರಿಯಾದ ಫಲವು ಸಿಗುವುದು. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಇಂದು ಖರ್ಚಿನ ಬಗ್ಗೆ ಊಹೆಗೂ ಸಿಗದು. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ. ದೈವದ ಮೇಲಿನ ನಂಬಿಕೆ ಸತ್ಯವಾಗುವುದು. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ. ಕೃಷಿ ಉತ್ಪನ್ನದ ಮಾರಾಟ. ಖರ್ಚು ಮತ್ತು ಆದಾಯ ಸಮಾಮವಾಗುವುದು. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ಮಿತಿಮೀರಿದ ಆಸೆಗೆ ಕಡಿವಾಣದ ಅಗತ್ಯವಿದೆ. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ.

ಮಿಥುನ ರಾಶಿ: ಸಂಗಾತಿಯ ಮೇಲೆ‌ ನಂಬಿಕೆಗೆ ಕೃತಕಪ್ರಯತ್ನ ಮಾಡುವಿರಿ. ನಿಮ್ಮ ಕಾಳಜಿಯು ಇತರರಿಗೆ ಕಷ್ಟವಾದೀತು. ಕಟ್ಟಡ ನಿರ್ಮಾಣದವರಿಗೆ ಹೆಚ್ಚು ಲಾಭವಾಗಲಿದೆ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ವಿನಯಶೀಲತೆಯನ್ನು ಬೆಳೆಸಿಕೊಳ್ಳುವುದು ಅಗತ್ಯ. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸುಳ್ಳು ಮಾತುಗಳನ್ನು ಯಾರೂ ಕೇಳಲು ಇಷ್ಟ ಪಡರು.‌ ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ‌ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ಶತ್ರುವಾದರೂ ಅವರಿಂದ ಸುಫಲವನ್ನೇ ಅಂತಿಮವಾಗಿ ಪಡೆಯುವಿರಿ. ಗುರುತು ಪರಿಚಯವಿಲ್ಲದವರು ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ಇಷ್ಟವಾಗದು.

ಕರ್ಕಾಟಕ ರಾಶಿ; ನಿಮಗೆ ಕೊಡುವ ಗೌರವದಿಂದ ನಿಮಗೆ ಮುಜುಗರವಾದೀತು. ಮನೆಯ ಕೆಲವು ವಿಚಾರದಲ್ಲಿ ಮನೆಯವರಿಂದ‌ ಕಿರಿಕಿರಿ ಆಗಬಹುದು. ಕೃಷಿಯ ಉತ್ಪನ್ನದಿಂದ ಅಧಿಕ‌ಲಾಭವಿರಲಿದೆ. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ನಿದ್ರೆ ಇಲ್ಲದೇ ಮಾನಸಿಕ‌ವಾಗಿ ಕುಗ್ಗುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ವಿದ್ಯಾಭ್ಯಾಸದ ಫಲಿತಾಂಶ ನೆಮ್ಮದಿ ಕೊಡುವುದು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಲಿದೆ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ.‌ ಸದಾ ಯಾರ ಮೇಲಾದರೂ ಅನುಮಾನದಿಂದಲೇ ಇರುವಿರಿ.‌ ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗಲು ಇಷ್ಟ ಪಡುವುದಿಲ್ಲ.‌

ಸಿಂಹ ರಾಶಿ: ಮನಸ್ಸಿನ ಹತೋಟಿ ಇಲ್ಲದೇ ಶತ್ರುಗಳು ಹುಟ್ಟುವರು. ಮಾಧ್ಯಮದಲ್ಲಿ ಕಾರ್ಯ ಮಾಡುವವರಿಗೆ ಒತ್ತಡಗಳು ಎಂದಿಗಿಂತ ಹೆಚ್ಚು ಇರುವುದು. ಅಪರಿಚಿತರ ಜೊತೆ ಅತಿಯಾದ ಸ್ನೇಹವು ಬೆಳೆಯಬಹುದು. ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎನ್ನುವ ಗೊಂದಲ, ಹತಾಶೆಗಳು ಕಾಣಿಸುವುದು. ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ನಿಮ್ಮವರನ್ನು ಬಿಟ್ಟು ಹೋದವರ ಬಗ್ಗೆ ಆಲೋಚನೆ ಬೇಡ. ಸ್ನೇಹಿತರ ಜೊತೆಗೆ ಪ್ರವಾಸ ಸಂಭವ. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮನಸ್ಸಿನ ಹುಯ್ದಾಟಕ್ಕೆ ಒಂದು ವಿರಾಮ ಬೇಕಿದೆ. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಸಣ್ಣ ವಿಚಾರಕ್ಕೆ ಯಾರನ್ನೋ ದ್ವೇಷ‌ ಮಾಡುವುದು ಸರಿಯಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು.

ಕನ್ಯಾ ರಾಶಿ: ಅಪರಿಚಿತರ ಕರೆಯಿಂದ ಕಾರ್ಯಕ್ಕೆ ಅಡ್ಡಿ. ಹೊಸ ಸ್ನೇಹಿತರ ಬಳಗದಿಂದ ನಿಮಗೆ ಸಂತೋಷವು ಸಿಗುವುದು. ಉದ್ಯೋಗದ ಮಿತ್ರರು ಎಲ್ಲಿಗಾದರೂ ಹೋಗುವ ಯೋಜನೆಯನ್ನು ಮಾಡಿಕೊಂಡು ಹೊರಡುವಿರಿ. ಇಂದು ಹಿರಿಯರಿಂದ ಕೆಲವು ಹಿತೋಪದೇಶವನ್ನು ಕೇಳಬೇಕಾದೀತು. ಯಾವ ಸಂದರ್ಭದಲ್ಲಿ ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ದಿನದ ಕೆಲಸವನ್ನು ಮಾಡುವಷ್ಟರಲ್ಲಿ ನಿಮ್ಮ ಸಮಯವು ಕಳೆದುಹೋಗುವುದು. ಅಪಘಾತದ ಮುನ್ಸೂಚನೆ ನಿಮಗೆ ಸಿಗಬಹುದು. ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧಾನ ಇರುವುದು. ಸಾಮಾಜಿಕ ಕಾರ್ಯವನ್ನೂ ಪರಿಚಿತರ ಜೊತೆ ಭಾಗವಹಿಸಿ ಮಾಡುವಿರಿ.