Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಅನ್ಯರ ಅನುಭವ ನಿಮಗೆ ಪಾಠವಾಗಬಹುದು ಆದರೆ ಅದನ್ನೇ ಅನುಸರಿಸುವುದು ಬೇಡ

21 ಜನವರಿ​ 2025: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹಾಗಾದರೆ ಜನವರಿ 21ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಅನ್ಯರ ಅನುಭವ ನಿಮಗೆ ಪಾಠವಾಗಬಹುದು ಆದರೆ ಅದನ್ನೇ ಅನುಸರಿಸುವುದು ಬೇಡ
ಅನ್ಯರ ಅನುಭವ ನಿಮಗೆ ಪಾಠವಾಗಬಹುದು ಆದರೆ ಅನುಸರಿಸುವುದು ಬೇಡ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 21, 2025 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03: 35 ರಿಂದ 04:59ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:54 ರಿಂದ 11:19 ರವರೆಗೆ, ಗುಳಿಕ ಮಧ್ಯಾಹ್ನ 12:14 ರಿಂದ 02:09 ರವರೆಗೆ.

ಮೇಷ ರಾಶಿ: ಕೆಲವರು ನಿಮ್ಮನ್ನು ದೂರವಿಡಬಹುದು. ಅದು ವಿಳಂಬವಾಗಿ ಗೊತ್ತಾಗಲಿದೆ. ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಮಾಯೆಯಂತೆ ಬದಲಾಗುವುದು. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು.

ವೃಷಭ ರಾಶಿ: ಅನಾಥ ಪ್ರಜ್ಞೆಯಿಂದ ನಿಮಗೆ ಸ್ವಲ್ಪ ಸಮಾಧಾನವೂ ಆಗುವುದು. ಉನ್ನತ ಅಧಿಕಾರಿಗಳು ನಿಮ್ಮಿಂದ ಅಧಿಕ ನಿರೀಕ್ಷೆಯನ್ನು ಅಪೇಕ್ಷಿಸುವರು. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬರಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಕೇಳಬಾರದ ವಿಚಾರಗಳನ್ನು ಬಂಧುಗಳಿಂದ ಪಡೆಯುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ವ್ಯವಹಾರದಲ್ಲಿ ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಯಾವುದನ್ನೂ ಹೆಚ್ಚು ಕಾಲ ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.

ಮಿಥುನ ರಾಶಿ: ಅಧಿಕಾರವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಇಲ್ಲವಾದರೆ ದುರುಪಯೋಗವೂ ನಿಷ್ಪ್ರಯೋಜಕವೂ ಆಗಬಹುದು. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಟವಾಗದು. ಯಾವುದೋ ಅಸತ್ಯವಾದ ಉದ್ಯೋಗಕ್ಕೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾದೀತು. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ಒಳ ಮನಸ್ಸು ನಿಮ್ಮ ದಾರಿಯನ್ನು ತಪ್ಪಿಸದು. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.

ಕರ್ಕಾಟಕ ರಾಶಿ: ಅನ್ಯರ ಅನುಭವ ನಿಮಗೆ ಪಾಠವಾಗಬಹುದು, ಆದರೆ ಅದನ್ನೇ ಅನುಸರಿಸುವುದು ಬೇಡ. ನಿಮ್ಮ ವರ್ತನೆಯನ್ನು ನೀವು ನಿಯಂತ್ರಿಸಿಕೊಳ್ಳಬೇಕು, ಇಲ್ಲದಿದ್ದರೆ ತಮಾಷೆಯ ವಸ್ತುವಾಗಬೇಕಾಗುವುದು. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಜೀವನಕ್ಕೆ ಆಗದವರ ಬಗ್ಗೆ ತಾತ್ಸಾರ ಭಾವ ಬರಬಹುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ.

ಸಿಂಹ ರಾಶಿ: ಯಾವ ರೀತಿಯಿಂದಲೂ ದೈವ ಸಹಾಯ ನಿಮಗೆ ಸಿಗಲಿದೆ. ಆದರೆ ಅದನ್ನು ಕಾಣುವ ಕಣ್ಣು ಬುದ್ಧಿಗಳು ಬೇಕು. ಇಂದು ಉದ್ಯೋಗಿಗಳಿಗೆ ಕಛೇರಿಯಲ್ಲಿ ಎಲ್ಲರ ಜೊತೆ ಉತ್ತಮ ಸಮಯ ಕಳೆಯುವ ಅವಕಾಶವು ಸಿಗುವುದು. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಇಂದು ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಸಾಲಕ್ಕಾಗಿ ಮತ್ತೆ ಮತ್ತೆ ದೂರವಾಣಿ ಕರೆಗಳು ಪೀಡಿಸಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.

ಕನ್ಯಾ ರಾಶಿ: ಹಿರಿಯರ ಮಾತಿಗೆ ತಲೆಬಾಗುವುದು ಒಳ್ಳೆಯದೇ. ಒತ್ತಡದ ನಡುವೆಯೂ ತಾಳ್ಮೆಯನ್ನು ನೀವು ಕಂಡುಕೊಳ್ಳುವಿರಿ. ಕಾಣಾಂತರಗಳಿಂದ ನಿಲ್ಲಿಸಿದ್ದ ಕಾರ್ಯವನ್ನು ಪುನಃ ಪ್ರಾರಂಭಿಸುವಿರಿ. ನೀವು ಹೇಳುವ ಸುಳ್ಳುಗಳೇ ಸತ್ಯವಾಗಬಹುದು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಅನಾರೋಗ್ಯಕ್ಕೆ ಉತ್ತಮ ಚಿಕಿತ್ಸೆ ಸಿಗಲಿದೆ. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಹೂಡಿಕೆಯ ನಷ್ಟದಿಂದ ವಿಚಲಿತರಾಗಬೇಕಾಗಿಲ್ಲ. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ.