AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಸಂಗಾತಿಯ ಜೊತೆ ವಾಗ್ವಾದ ಮಾಡುವರು

01 ಮಾರ್ಚ್​​​ 2025: ಶನಿವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಹಾಗಾದರೆ ಮಾರ್ಚ್​​​ 01ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ಸಂಗಾತಿಯ ಜೊತೆ ವಾಗ್ವಾದ ಮಾಡುವರು
ಈ ರಾಶಿಯವರು ಸಂಗಾತಿಯ ಜೊತೆ ವಾಗ್ವಾದ ಮಾಡಿರುವಿರಿ
TV9 Web
| Edited By: |

Updated on: Mar 01, 2025 | 12:10 AM

Share

ಬೆಂಗಳೂರು, ಮಾರ್ಚ್​​ 01: ನಿತ್ಯ ಪಂಚಾಗ ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಿದ್ಧ, ಕರಣ : ಬವ ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:48 – 11:16, ಯಮಘಂಡ ಕಾಲ 14:14 – 15:42, ಗುಳಿಕ ಕಾಲ 06:51 – 08:19.

ಮೇಷ ರಾಶಿ: ಮನೆಯನ್ನು ಸುಂದರಗೊಳಿಸುವಿರಿ. ಬಂಧುಗಳ ಭೇಟಿಯ ಅಕಸ್ಮಾತ್ ಆಗಲಿದೆ. ನಿಮ್ಮ ಆಲಸ್ಯವನ್ನು ಇತರರು ಸುಮ್ಮನೇ ಆಡಿಕೊಂಡಾರು. ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು.

ವೃಷಭ ರಾಶಿ: ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ವಾಗ್ವಾದ. ಮಾತನ್ನು ನಿಧಾನವಾಗಿ ಆಡುವಿರಿ. ಹಳೆಯ ಗೆಳೆಯರು ನಿಮಗೆ ಅನಿರೀಕ್ಷಿತವಾಗಿ ದೊರೆಯಬಹುದು. ವಿದ್ಯೆಯು ಬೇಕಾದ ಸಮಯಕ್ಕೆ ಕೆಲಸಕ್ಕೆ ಬಾರದೇಹೋಗಬಹುದು. ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು. ಮನೋರಂಜನೆಗೆ ಭಾಗವಹಿಸುವುದು ಇಷ್ಟವಾಗುವುದು. ಆರ್ಥಿಕತೆಯ ಬಗ್ಗೆ ನಿಮ್ಮನ್ನು ಬಂಧುಗಳು ಪ್ರಶ್ನಿಸಬಹುದು. ನಿಮ್ಮ ನಮಗೆ ಗೊತ್ತಿರಲಿ. ಕುರುಡನಂತೆ ಹೋಗುವುದು ಬೇಡ. ಸ್ನೇಹಿತರ ಬೆಂಬಲವನ್ನು ನೀವು ನಿರಾಕರಿಸಬಹುದು. ಹೊಸ ಹೂಡಿಕೆಯ ಬಗ್ಗೆ ಆಸಕ್ತಿಯಿರದು.

ಮಿಥುನ ರಾಶಿ: ಆಸ್ತಿಯ ಪಾಲಿಗೆ ಸಂಬಂಧಿಸಿದಂತೆ ಮಾತುಕತೆಗಳು ಮುಕ್ತಾಯದ ಹಂತಕ್ಕೆ ಬರಲಿದೆ. ಉದ್ಯಮದಲ್ಲಿ ನಿಮ್ಮ ತೊಡಗುವಿಕೆ ಎಷ್ಟಿದೆ ಎನ್ನುವುದರ ಮೇಲೆ ಲಾಭವು ನಿರ್ಧಾರವಾಗುವುದು. ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ದಾಂಪತ್ಯದ ಸಮಸ್ಯೆಯನ್ನು ಸರಿಯಾಗಿ ಬಗೆಹರಿಸಿಕೊಳ್ಳಿ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ಗಣ್ಯರ ಭೇಟಿಯನ್ನು ಮಾಡುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ತಿಳಿದುಕೊಳ್ಳಿ. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದೆ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ. ಇಂದು ನಿಮ್ಮ ರೂಪಕ್ಕೆ ಆಕರ್ಷಣೆ ಇರಲಿದೆ. ಎಲ್ಲರೂ ಪ್ರಶಂಸಿಸಬಹುದು.

ಕರ್ಕಾಟಕ ರಾಶಿ: ನೌಕರರ ಮನಸ್ತಾಪದ ಬಿಸಿ ನಿಮ್ಮ ಉದ್ಯಮಕ್ಕೆ ತಟ್ಟಬಹುದು. ದಾಂಪತ್ಯದ ಕಲಹವು ಬೇರೆ ದಾರಿಯಲ್ಲಿ ನಡೆಯುವುದು. ಪ್ರೇಮಿಗಳು ಎಲ್ಲಿಯಾದರೂ ಭೇಟಿಯಾಗಲು ಯೋಚಿಸುವರು. ನೀವು ಕೈಗೊಂಡ ಕ್ರಮವು ಸರಿಯಾಗಿ ಜಾರಿಗೆ ಬರಲಿ. ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ಗಂಭೀರವಾದ ಸಣ್ಣ ವಿಚಾರವೂ ಮುಂದೆ ದೊಡ್ಡದಾಗಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಅನಪೇಕ್ಷಿತ ಮಾತು ನಿಮ್ಮ ದಾರಿ ತಪ್ಪಿಸಬಹುದು. ಸಂಗಾತಿಯ ವಿರುದ್ಧ ಸಿಟ್ಟಾಗಬಹುದು. ಮಹಿಳೆಯರಿಗೆ ನಿಮ್ಮಿಂದ ಹೆಚ್ಚಿನ ಸಹಕಾರವು ಸಿಕ್ಕಬಹುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು. ಒಬ್ಬೊಂಟಿಯಾಗಿ ಇಂದು ನಿರ್ಜನ ಪ್ರದೇಶದಲ್ಲಿ ವಿಹಾರ ಮಾಡುವಿರಿ. ವಿವಾಹಕ್ಕೆ ಅಪರಿಚಿತರಿಂದ ತಡೆ ಬರಬಹುದು. ನಿಮ್ಮ ಕನಸುಗಳಿಗೆ ನೀರೆರೆಯುವ ಅವಶ್ಯಕತೆ ಇದೆ.

ಸಿಂಹ ರಾಶಿ: ನಿಮ್ಮ ಮಾತು ಬಹಳ ಒರಟಾಗಿ ಕೇಳಿಸುವುದು. ಪೂರ್ವಾರ್ಜಿತ ಸಂಪತ್ತನ್ನೇ ನಂಬಿ ನಿಶ್ಚಿಂತರಾಗುವಿರಿ. ನಿಮ್ಮ ಶ್ರಮದ ಬಗ್ಗೆಯೂ ಗಮನವಿರಲಿ. ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಿಗೆ ರಾಜಕೀಯದತ್ತ ಒಲವು ಉಂಟಾದೀತು. ವಿನಯದಿಂದ ಇದ್ದರೆ ಮಾತ್ರ ನೀವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಇಂದಿನ ಖರ್ಚಿನ ಬಗ್ಗೆ ಅಂದಾಜಿರಲಿ. ನಿಮ್ಮ ವಸ್ತುಗಳು ಕಣ್ಮರೆಯಾದೀತು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ನಿಮ್ಮನ್ನು ಅತಿಥಿಗಳಾಗಿ ಆಹ್ವಾನಿಸಬಹುದು. ಹಾಗೆಯೇ ಬಿಟ್ಟರೆ ನಿಮ್ಮ ಪ್ರೇಮಸಂಬಂಧವು ಸಡಿಲಾಗಬಹುದು. ನಿಮ್ಮ‌ ಜವಾಬ್ದಾರಿಗೆ ಬೆನ್ನು ಹಾಕಿಹೋಗುವುದು ಬೇಡ.‌ ಬರುವುದನ್ನು ಎದುರಿಸುವ ಬಲವನ್ನೂ ಬೆಳೆಸಿಕೊಳ್ಳಿ.

ಕನ್ಯಾ ರಾಶಿ: ನಿಮ್ಮ ತೀರ್ಮಾನಗಳು ಸರಿಯಲ್ಲದೆಯೂ ಇರಬಹುದು. ಸಣ್ಣ ಉದ್ಯೋಗವಿದ್ದರೂ ನಿರುದ್ಯೋಗದಂತೆ ಅನ್ನಿಸಬಹುದು. ಯಾರ ಜೊತೆಯೂ ಬೆರೆಯಬೇಕು ಎನ್ನುವ ಆಸೆಯೂ ಇರದು. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಹಿರಿಯರಿಂದ ಸಕಾಲದಲ್ಲಿ ಮಾರ್ಗದರ್ಶನ.‌ ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಮನೆಯಿಂದ ದೂರದಲ್ಲಿ ನಿಮ್ಮ ಹೊಸ ಜೀವನವನ್ನು ನಡೆಸಬಹುದು. ಹಳೆಯ ವಿದ್ಯುತ್ ಉಪಕರಣಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವಿರಿ. ಇಂದು ಅಧಿಕ ಮಾತನ್ನು ಆಡುವುದು ಬೇಡ. ಕಲಾವಿದರು ಕೆಲವು ಅವಕಾಶದಿಂದ ವಂಚಿತರಾಗಬಹುದು. ಹಣಕಾಸಿನ ಹೂಡಿಕೆಯು ಹೊಸ ತಿರುವನ್ನು ಪಡೆದೀತು.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್