Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಯಾರನ್ನೋ ನಂಬಿ ಕೈಯಲ್ಲಿರುವ ಸಣ್ಣ ಕೆಲಸವನ್ನೂ ಕಳೆದುಕೊಳ್ಳುವಿರಿ

30 ಜನವರಿ​ 2025: ಗುರುವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಆರೋಗ್ಯದ ರಕ್ಷಣೆಗೆ ಉಳಿತಾಯದ ಬಗ್ಗೆ ಗಮನ ಕೊಡುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಹಾಗಾದರೆ ಜನವರಿ 30ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಯಾರನ್ನೋ ನಂಬಿ ಕೈಯಲ್ಲಿರುವ ಸಣ್ಣ ಕೆಲಸವನ್ನೂ ಕಳೆದುಕೊಳ್ಳುವಿರಿ
ಯಾರನ್ನೋ ನಂಬಿ ಕೈಯಲ್ಲಿರುವ ಸಣ್ಣ ಕೆಲಸವನ್ನೂ ಕಳೆದುಕೊಳ್ಳುವಿರಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 30, 2025 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ಶತಭಿಷಾ, ಯೋಗ : ವ್ಯತಿಪಾತ್, ಕರಣ : ಬವ , ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:12 – 15:38, ಯಮಘಂಡ ಕಾಲ 07:02 – 08:28, ಗುಳಿಕ ಕಾಲ 09:54 – 11:20

ಮೇಷ ರಾಶಿ: ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ಸಂಗಾತಿಗೆ ನೀವೇ ಧೈರ್ಯಕೊಡಬೇಕಾಗುವುದು. ದೈವಭಕ್ತಿ ಶ್ರದ್ಧೆಗಳು ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು. ಇನ್ನೊಬ್ಬರಿಗೆ ಕೊಡುವ ಸಮಯು ವ್ಯರ್ಥವಾಗುವುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗುವುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಸಿಕ್ಕ ವಸ್ತುವನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮನ್ನು ಸ್ನೇಹಿತರು ಕಡೆಗಣಿಸಬಹುದು.

ವೃಷಭ ರಾಶಿ: ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ ನಿಮಗೆ ಅರಿವಿರದು. ಕೃತಜ್ಞತೆಯನ್ನು ಸ್ಮರಿಸಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವಿರಿ.‌ ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಂದ ನೀವು ಸಾಮಾಜಿಕ ಕಾರ್ಯಕ್ಕೆ ಹಣವನ್ನು ಪಡೆಯುವಿರಿ. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮೊಳಗಿರುವ ತರತಮಭಾವವನ್ನು ಪ್ರಕಟಿಸಲಾರಿರಿ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ನಿಮ್ಮವರು ನಿಮ್ಮನ್ನು ಬೇರೆ ಕೆಲಸಗಳಿಗೆ ಕರೆದುಕೊಂಡು ಹೋಗುವರು. ನಿಮ್ಮ ಪಕ್ಷಪಾತವು ಕೆಲವರಿಗೆ ಇಷ್ಟವಾಗದು. ನೀವು ವಹಿಸಿಕೊಂಡ ನಿರ್ಮಾಣ ಕೆಲಸಗಳು ನಿಧಾನವಾಗುವುದು.

ಮಿಥುನ ರಾಶಿ: ಸಮರ್ಥರ ಜೊತೆ ವಾಗ್ವಾದ ನಡೆಸುವಿರಿ. ವೃತ್ತಿಯಲ್ಲಿ ಸುಲಭದ ಕಾರ್ಯವನ್ನು ನೀವು ಆರಿಸಿಕೊಳ್ಳುವಿರಿ. ಆತ್ಮವಿಶ್ವಾಸದ ಕೊರೆತೆಯು ಕಾಣಿಸುವುದು. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ವಿವಾಹ ಸಂಬಂಧಕ್ಕೆ ನಿಮ್ಮ ಪೂರ್ಣ ಸಹಮತ ಇರದು. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಸಹೋದ್ಯೋಗಿಗಳ ಸಹಕಾರದಿಂದ ವೃತ್ತಿಯಲ್ಲಿ ಅಸಮಾಧಾನ ಕಾಣಿಸುವುದು. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಪ್ರಖ್ಯಾತ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ದೊಡ್ಡ ಅಪಾಯದಿಂದ ನೀವು ಸುರಕ್ಷಿತರಾಗಿರುವಿರಿ. ಸಂಗಾತಿಯ ಇಂಗಿತವನ್ನು ತಿಳಿಯಲು ಪ್ರಯತ್ನಿಸುವಿರಿ.

ಕರ್ಕಾಟಕ ರಾಶಿ: ಭೇದಭಾವವನ್ನು ಮರೆತು ಅಲ್ಪಕಾಲವಾದರು ಬಂಧುಗಳ ಜೊತೆ ಇರಬೇಕಾದೀತು. ಹಠದಿಂದ ಏನನ್ನೂ ಸಾಧಿಸಲಾಗದು ಎಂಬುದು ನಿಮಗೇ ಮನವರಿಕೆಯಾಗಲಿದೆ. ಉದ್ಯೋಗಮಿತ್ರರು ನಿಮ್ಮ ಕಾರ್ಯಗಳಿಗೆ ಸಹಕಾರ ನೀಡುವರು. ಶತ್ರುಗಳು ಸಹಿಸಲಾಗದೇ ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಎಲ್ಲ ಕಡೆ ನೀವೇ ಕಾಣಿಸಿಕೊಳ್ಳಬೇಕು ಎಂಬ ಧೋರಣೆ ಕಾಣಿಸುವುದು. ಮನೋರಂಜನೆಯಲ್ಲಿ ಪಾಲ್ಗೊಂಡು ಮನಸ್ಸು ಹಗುರಾಗುವುದು. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ದೊಡ್ಡ ಅಪಾಯದಿಂದ ತಪ್ಪಿಸಿಕೊಳ್ಲಕುವುರಿ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ವ್ಯಾಪಾರದಲ್ಲಿ ಪೂರೈಕೆ ಮಾಡುವವರಿಗೆ ಹೆಚ್ಚು ಬೇಡಿಕೆ ಕಾಣಿಸುವುದು. ಉದ್ಯಮದ ಹೊಸ ಕೇಂದ್ರವನ್ನು ನಿರ್ಮಿಸುವ ಸಾಧ್ಯತೆ ಇದೆ.

ಸಿಂಹ ರಾಶಿ: ಪರರ ಬಗ್ಗೆ ಅನುಕಂಪ ಉಂಟಾಗುವುದು. ಮಾನಸಿಕ ಸ್ಥೈರ್ಯದಿಂದ ಎಲ್ಲ ಕೆಲಸವನ್ನು ಮಾಡಿಕೊಳ್ಳುವಿರಿ. ಸಂಸ್ಥೆಯ ಮುಖ್ಯಸ್ಥರಾಗಿ ಆಯ್ಕೆಯಾಗುವ ಸಂಭವವಿದೆ. ಸದ್ಯೋ ಭವಿಷ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಎದುರಾಳಿಗಳು ತಯಾರಾಗುವ ಸಾಧ್ಯತೆ ಇದೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೆನಿಸುವುದು. ನಿಮ್ಮ ಮಾತುಗಳು ಅರಣ್ಯರೋದನದಂತೆ ನಿಷ್ಪ್ರಯೋಜಕವಾದೀತು. ಹಿತಶತ್ರುಗಳ ತಂತ್ರಕ್ಕೆ ಬಲಿಯಾಗಿ ಬೇಸರಗೊಳ್ಳುವಿರಿ. ಆರೋಗ್ಯದ ರಕ್ಷಣೆಯಲ್ಲಿ ಹಿನ್ನಡೆಯಾದೀತು. ಅಪರಿಚಿತರ ವಿದ್ಯಾಭ್ಯಾಸಕ್ಕೆ ನಿಮ್ಮಿಂದ ಸಹಾಯವು ಸಿಗಲಿದೆ. ಎತ್ತರದ ಪ್ರದೇಶವನ್ನು ಏರುವ ಸಾಹಸ ಮಾಡುವಿರಿ. ಅಧಿಕಾರಿಗಳು ವೃತ್ತಿಯನ್ನು ಸರಿಯಾಗಿ ನಿರ್ವಹಿಸುವರು. ಅಜ್ಞಾನವನ್ನು ಯಾರಿಂದಲಾದರೂ ದೂರಮಾಡಿಕೊಳ್ಳಿ. ಒತ್ತಾಯಪೂರ್ವಕವಾಗಿ ಯಾರ ಸ್ನೇಹವನ್ನೂ ಬಯಸದಿರಿ.

ಕನ್ಯಾ ರಾಶಿ: ಆರೋಗ್ಯದ ರಕ್ಷಣೆಗೆ ಉಳಿತಾಯದ ಬಗ್ಗೆ ಗಮನ ಕೊಡುವಿರಿ. ಅತಿಯಾದ ಆಡಂಬರವು ನಿಮಗೇ ಮುಜುಗರವನ್ನು ತಂದೀತು. ಹಿತಶತ್ರುಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರ್ಕಾರಿ ಉದ್ಯೋಗಿಗಳು ನಿಮಗೆ ತೊಂದರೆಯನ್ನು ಕೊಡಬಹುದು. ಧೈರ್ಯವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ. ಉದ್ಯಮದಲ್ಲಿ ಉಂಟಾದ ಬೆಳವಣಿಗೆಯನ್ನು ಸಕಾರಾತ್ಮಕವಾಗಿ ಆಲೋಚಿಸಿ. ರಾಜಕಾರಣದಿಂದ ನಿಮ್ಮ ಯಶಸ್ಸಿಗೆ ತೊಂದರೆ. ಸಮ್ಮಾನಗಳನ್ನು ಪಡೆಯುವ ಆಸೆ ಇದ್ದರೂ ಯೋಗವು ಬೇಕಾಗುತ್ತದೆ. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಪರೋಕ್ಷವಾಗಿಯಾದರೂ ಹಿರಿಯರ ಆಶೀರ್ವಾದ ಪಡೆಯಿರಿ. ಆಗದವರು ನಿಮ್ಮ ರಹಸ್ಯ ವಿಚಾರಗಳನ್ನು ತಿಳಿದುಕೊಳ್ಳಲು ಇಚ್ಛಿಸುವರು. ನಿರುದ್ಯೋಗದ ಸಮಸ್ಯೆ ದೂರಾಗುವುದು.

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!