Daily Horoscope: ನಿರುದ್ಯೋಗಿಗಳು ಮಾನಸಿಕ ಖಿನ್ನತೆ ಅನುಭವಿಸಬೇಕಾಗಬಹುದು

4 ಫೆಬ್ರವರಿ​ 2025: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಮೋಜಿನಲ್ಲಿ ನಿಮ್ಮ ಸಮಯವು ಕಳೆಯುವುದು. ನಿಮ್ಮ ಒತ್ತಡವನ್ನು ಸಹೋದ್ಯೋಗಿಗಳ ಮೇಲೆ‌ಹಾಕಿ ಸ್ವಲ್ಪ ಹಗುರಾಗಬಹುದು. ಹಾಗಾದರೆ ಫೆಬ್ರವರಿ 4 ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ನಿರುದ್ಯೋಗಿಗಳು ಮಾನಸಿಕ ಖಿನ್ನತೆ ಅನುಭವಿಸಬೇಕಾಗಬಹುದು
ನಿರುದ್ಯೋಗಿಗಳು ಮಾನಸಿಕ ಖಿನ್ನತೆ ಅನುಭವಿಸಬೇಕಾಗಬಹುದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 04, 2025 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಭರಣೀ, ಯೋಗ : ಸಾಧ್ಯ, ಕರಣ : ತೈತಿಲ, ಸೂರ್ಯೋದಯ – 07 – 01 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:39 – 17:06, ಯಮಘಂಡ ಕಾಲ 09:54 – 11:20, ಗುಳಿಕ ಕಾಲ12:47 – 14:13.

ಮೇಷ ರಾಶಿ: ಇಂದಿನ ದಿನಚರಿಯಲ್ಲಿ ಯಾವುದೂ ಸಮಂಜಸವೆನಿಸದೇ ಇರುವುದು. ಆಗಿಹೋದ ಸಾಮಾಜಿಕ ಕಾರ್ಯಗಳಿಗೆ ಪ್ರಶಂಸೆ ಬರಬಹುದು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಅಸಮಯದ ಆಹಾರವು ನಿಮಗೆ ಅಭ್ಯಾಸವಾಗಲಿದ್ದು, ಇದನ್ನು ಬದಲಿಸಿಕೊಳ್ಳಬೇಕಾಗಬಹುದು. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ನಿಮಗಾದ ನೋವಿಗೆ ಯಾರ ಸಾಂತ್ವನವೂ ಉಪಯೋಗಕ್ಕೆ ಬಾರದು. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ‌ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು.

ವೃಷಭ ರಾಶಿ: ಅದೃಷ್ಟವನ್ನು ನಂಬಿ ಕಾರ್ಯೋನ್ಮುಖರಾದರೆ ಹಲವಾರು ಪ್ರಯೋಜನವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಕೆಡುವ ಸಂಭವವಿದೆ. ನಿರುದ್ಯೋಗಿಗಳು ಮಾನಸಿಕ ಖಿನ್ನತೆಯನ್ನು ಅನುಭವಿಸಬೇಕಾಗಬಹುದು. ಜೀವನೋತ್ಸಾಹಕ್ಕೆ ನಿಮ್ಮದಾದ ಚಿಂತನೆಗಳು ಇರಲಿ. ಯಾರ ಮಾತನ್ನೂ ನಂಬದ ಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ. ಹೊಸ‌ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯ ಸಾಲದು. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಅತಿಥಿಗಳ ಜೊತೆ ಸಲ್ಪ ಸಮಯ ಕಳೆಯಬೇಕಾಗುವುದು. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ. ಯಾರದೋ ಮಾತಿನಿಂದ ಹೂಡಿಕೆ ಮಾಡುವಿರಿ. ಹೃದ್ಯವಾದ ವಿಚಾರಗಳ ಕಡೆ ಗಮನವಿರಲಿ.

ಮಿಥುನ ರಾಶಿ: ಆತ್ಮಾವಲೋಕನ ಮಾಡಿಕೊಳ್ಳುವ ದಿನ. ಮಕ್ಕಳಿಂದ ನಿಮಗೆ ಆಗಬೇಕಾದ ಸಹಾಯವು ಆಗಬಹುದು. ನೌಕರರ ವಿಚಾರದಲ್ಲಿ ಗಟ್ಟಿಯಾದ ನಿಲುವು ಅಗತ್ಯ. ಸಂಗಾತಿಯನ್ನು ನೀವು ವಿಧವಿಧವಾಗಿ ಪರೀಕ್ಷಿಸುವಿರಿ. ಸುಮ್ಮನೇ ದೇಹಾಯಾಸವನ್ನು ಮಾಡಿಕೊಳ್ಳದೇ ಯುಕ್ತಿಯಿಂದ ಕೆಲಸ ಮಾಡಿ. ನೆರೆಯವರ ಜೊತೆ ಕಲಹವು ಬೇಡ. ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಯಾವುದೇ ಪೂರ್ವಾಪರ ವಿಚಾರವಿಲ್ಲದೇ ಪೂರೈಸಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ಹೇಗಾದರೂ ಮಾಡಿ ಬೆಳೆಯಬೇಕು ಎನ್ನುವ ಬಯಕೆ ಅತಿಯಾಗಿರುವುದು. ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ಸಂತೃಪ್ತಿ ಸಿಗುವುದು.

ಕರ್ಕಾಟಕ ರಾಶಿ: ನೀವು ಎಂತಹ ಉತ್ತಮರಾದರೂ ಸಮಾಜ ನಿಮ್ಮನ್ನು ಒಪ್ಪಿಕೊಳ್ಳದೇ ಇರಬಹುದು. ಇಂದು ನಿಮ್ಮ ಸಮಯವನ್ನಷ್ಟೇ ಅಲ್ಲದೇ ಇತರರ ಸಮಯವನ್ನೂ ಹಾಳುಮಾಡುವಿರಿ. ನಿಶ್ಚಿತ ಕೆಲಸದಲ್ಲಿ ಆಲಸ್ಯದಿಂದ ಇದ್ದು ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಸಲ್ಲದ ಆಸೆಗಳಿಂದ ನಿಮಗೆ ಬಂಧನವನ್ನು ಹಾಕಿಕೊಳ್ಳುವಿರಿ. ಎಂದೋ ಬಯಸಿದ ವಸ್ತುವುದು ಇಂದು ನಿಮಗೆ ಅನಿರೀಕ್ಷಿತವಾಗಿ ಸಿಗುವುದು. ಸಂಗಾತಿಯ ಆಯ್ಕೆಯಲ್ಲಿ ಗೊಂದಲ ಇರುವುದು. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಅಧಿಕಾರವನ್ನು ವೈಯಕ್ತಿಕ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಉಪಕಾರದ ವಿಚಾರದಲ್ಲಿ ನೀವು ಹಿಂದಿರುವಿರಿ. ವೃತ್ತಿಯು ಬೇಸರ ತರಿಸಬಹುದು. ಇಂದು ಸರ್ಕಾರಿ ನೌಕರರು ಅಧಿಕ‌ ಕಾರ್ಯಗಳ‌ ಕಡೆ ಗಮನ ಹರಿಸಬೇಕಾದೀತು. ಎಂದೋ ಆದ ಘಟನೆಯನ್ನು ಮತ್ತೆ ನೆನಪಿಸಿಕೊಂಡು ಮನಸ್ತಾಪವನ್ನು ತಂದುಕೊಳ್ಳುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ‌ ಮಾಡಿ.

ಸಿಂಹ ರಾಶಿ: ಇಂದು ಶ್ರಮಕ್ಕೆ ಯೋಗ್ಯವಾದ ಆದಾಯವನ್ನು ನೀವು ಮಾತ್ರ ಅಪೇಕ್ಷಿಸುವಿರಿ. ಆಕಸ್ಮಿಕ ಧನಲಾಭಕ್ಕೆ ಹಿಂದೇಟು ಹಾಕುವಿರಿ. ಮೋಜಿನಲ್ಲಿ ನಿಮ್ಮ ಸಮಯವು ಕಳೆಯುವುದು. ನಿಮ್ಮ ಒತ್ತಡವನ್ನು ಸಹೋದ್ಯೋಗಿಗಳ ಮೇಲೆ‌ಹಾಕಿ ಸ್ವಲ್ಪ ಹಗುರಾಗಬಹುದು. ದೌರ್ಭಾಗ್ಯಗಳು ನಿಮ್ಮನ್ನು ಯಾವುದಾದರೂ ಒಂದು ರೀತಿಯಲ್ಲಿ ನಿಮ್ಮನ್ನು ಸೇರಬಹುದು.‌ ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿದೆ. ನೀವೇ ಆಶ್ಚರ್ಯವಾಗುವಂತೆ ಆಕರ್ಷಕವಾಗಿ‌ ನೀವು ಇಂದು ಕಾಣಲಿದ್ದೀರಿ. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ಜೀವನದ ಎಲ್ಲ ಸಂಗತಿಗಳನ್ನೂ ನಿಮ್ಮದಾಗಿಸಿಕೊಳ್ಳಲು ಬಯಸುವಿರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳು ಬಳಸಿಕೊಳ್ಳುವರು.

ಕನ್ಯಾ ರಾಶಿ: ಈ ದಿನವನ್ನು ನೀವು ಒತ್ತಡದಿಂದಲೇ ಮುಕ್ತಾಯ ಮಾಡಬೇಕಾದೀತು. ಅಪರಿಚಿತರ ಸಹವಾಸವನ್ನು ಅನಿವಾರ್ಯ ಕಾರಣದಿಂದ ಮಾಡಬೇಕಾಗಬಹುದು. ಸುಳ್ಳನ್ನು ಸತ್ಯವೆಂದು ನಂಬಿಸುವ ಸಾಹಸಕ್ಕೆ ಹೋಗುವುದು ಬೇಡ. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ನಿಮ್ಮ ಸಹಕಾರವನ್ನು ಬಂಧುಗಳು ಮರೆಯಬಹುದು. ಪ್ರಯಾಣದಲ್ಲಿ ಸುರಕ್ಷತೆಯ ಬಗ್ಗೆ ಗಮನವಿರಲಿ. ಹಣದ ಕೊರೆತೆ ಇಲ್ಲದಿದ್ದರೂ ಹಳೆಯ ಮನೆಯನ್ನೇ ಅವಶ್ಯಕತೆಗೆ ಸರಿಯಾಗಿ ಗಟ್ಟಿ ಮಾಡಿಕೊಳ್ಳಿ. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೂಡಬೇಕಾಗುವುದು. ಮಕ್ಕಳು ನಿಮ್ಮ ಪ್ರತಿ ಬದಲಾವಣೆಯನ್ನೂ ಗಮನಿಸುವರು. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ಸಂಪನ್ಮೂಲ ವ್ಯಕ್ತಿಗಳಾಗಿ ದೂರದ ಊರಿಗೆ ಹೋಗುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು.

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ