AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ, ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ

03 ಡಿಸೆಂಬರ್​​ 2024: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ತಂದೆಯ ಆರೋಗ್ಯವನ್ನು ಸರಿಪಡಿಸಲು ಹೆಚ್ಚು ಜವಾಬ್ದಾರಿಯನ್ನು ಹೊರಬೇಕಾದೀತು. ಹಾಗಾದರೆ ಡಿಸೆಂಬರ್ 03ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ, ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ
ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ, ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 03, 2024 | 12:10 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಶೂಲಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 44 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ 04:36ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:33 ರಿಂದ 10:58 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:23 ರಿಂದ 01:47 ರವರೆಗೆ.

ಮೇಷ ರಾಶಿ: ನಿಮಗೆ ಉಚಿತ ಗೌರವ ಸಿಗಲಿದೆ. ಯಾವುದಾದರೂ ತೊಂದರೆಗೆ ನೀವೇ ಕಾರಣವೆಂದು ಪಶ್ಚಾತ್ತಾಪವಾಗಬಹುದು. ಆತ್ಮೀಯರ ಜೊತೆ ಇದ್ದು ಹಣವನ್ನು ಖರ್ಚು ಮಾಡುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಕೆಲವು ಸಮಸ್ಯೆಗಳು ಎದುರಾಗಬಹುದು. ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹ ಬೇಡ. ಸಮಾರಂಭಗಳಲ್ಲಿ ಮುಖ್ಯಸ್ಥರಾಗಬಹುದು. ವಿದ್ಯಾಭ್ಯಾಸದ ವಿಚಾರದಲ್ಲಿ ಯಾವ ಸಡಿಲಿಕೆಯನ್ನೂ ಮಾಡಿಕೊಳ್ಳದಿರಿ. ದಾಂಪತ್ಯದಲ್ಲಿ ನೀವು ಸಂತೋಷವಾಗಿರುವಿರಿ. ಹತ್ತಿರದ ಆಪ್ತ ಬಂಧುಗಳನ್ನು ಕಳೆದುಕೊಳ್ಳುವಿರಿ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತ ಸಮಾಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಿ. ದೂರಪ್ರಯಾಣದಿಂದ ಆಯಾಸವಾಗಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪು ನಿಮ್ಮ ತಲೆಯ ಮೇಲೆ ಬರಬಹುದು. ಮಾತು ಅಲ್ಪವಾಗಿದ್ದರೂ ಯೋಗ್ಯವಾದ ಮಾತುಗಳನ್ನು ಆಡುವಿರಿ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸಿ.

ವೃಷಭ ರಾಶಿ: ಅಜೀರ್ಣವಾಗುವ ಯಾವುದನ್ನೂ ವಸ್ತು, ವಿಷಯವನ್ನೂ ಸೇವಿಸಬಾರದು. ಅಧಿಕಾರಿಗಳ ಒತ್ತಡವೇ ನಿಮ್ಮ ಉದ್ವೇಗಕ್ಕೆ ಕಾರಣವಾಗಲಿದೆ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಡವಾಗಬಹುದು. ಅನಿರೀಕ್ಷಿತ ಬಂಧುಗಳ ಆಗಮನದಿಂದ ಕೊಂಚ ಗಲಿಬಿಲಿ ಆಗುವುದು. ಚಂಚಲ ಮನಸ್ಸನ್ನು ನೀವು ನಿಯಂತ್ರಿಸಲು ಆಗದು. ಇದರಿಂದ ತೀರ್ಮಾನ ಸರಿಯಾಗಿ ತೆಗೆದುಕೊಳ್ಳಲಾಗದು. ಪ್ರಯಾಣದಿಂದ ನಿಮ್ಮ ದೇಹಸ್ಥಿತಿ ಬದಲಾಗಬಹುದು. ಕಛೇರಿಯಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸ ಮಾಡಲು ಆಗದು. ಉನ್ನತ ಅಧಿಕಾರಿಗಳ ಜೊತೆ ಸೆಣೆಸಾಡುವ ಸ್ಥಿತಿಯು ಬರಬಹುದು. ಸರ್ಕಾರದ ಕೆಲಸಕ್ಕೆ ನೀವು ಹಣವನ್ನು ಖರ್ಚುಮಾಡುವಿರಿ. ಇಂದಿನ‌ ನಿವು ಬಹಳ ಒತ್ತಡದಲ್ಲಿ ಇರುವಂತೆ ತೋರುವಿರಿ. ಅರಿವಿಲ್ಲದೇ ನೀವು ತಪ್ಪು ದಾರಿಗೆ ಹೋಗುವಿರಿ.‌ ನಿಮ್ಮ ಬಳಿ ಹಣವಿದ್ದರೂ ಸರಿಯಾದ ಸಮಯಕ್ಕೆ ಸಿಗದು. ನಿಮ್ಮ ಅಸಹಜ ಸ್ವಭಾವವನ್ನು ಸರಿಮಾಡಿಕೊಳ್ಳುವುದು ಮುಖ್ಯ.

ಮಿಥುನ ರಾಶಿ: ಅಜ್ಞಾತವಾಸದಿಂದ ಹೊರಬರುವ ಲಕ್ಷಣವಿದೆ. ಅನೇಕ ವಿಚಾರಗಳ ಕಡೆ ನಿಮ್ಮ ಗಮನವಿರುವುದು. ಹಾಗಾಗಿ ಇಂದಿನ ಕಾರ್ಯವು ಸಫಲವಾಗದು. ಉದ್ಯೋಗವನ್ನು ಬದಲಿಸುವ ಆಲೋಚನೆ ಮಾಡುವಿರಿ. ಪಾಲುದಾರಿಕೆಯಲ್ಲಿ ಅನ್ಯೋನ್ಯತೆ ಕಂಡುಬರುವುದು. ನೀವು ಮಾಡಬೇಕಂದುಕೊಂಡ ಕಾರ್ಯದಲ್ಲಿ ಜಯವಿರುವುದು. ಸ್ತ್ರೀಯರಿಂದ ಕಛೇರಿಯಲ್ಲಿ ಸಹಕಾರವು ಸಿಗಲಿದೆ. ಭೂಮಿಯ ಬಗ್ಗೆ ಆಸೆ ಕಡಿಮೆ ಆಗಬಹುದು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ತಂದೆಯ ಆರೋಗ್ಯವನ್ನು ಸರಿಪಡಿಸಲು ಹೆಚ್ಚು ಜವಾಬ್ದಾರಿಯನ್ನು ಹೊರಬೇಕಾದೀತು. ಮನಸ್ಸಿಗೆ ನೆಮ್ಮದಿ ಸಿಗುವ ಜಾಗಕ್ಕೆ ಹೋಗುವಿರಿ. ನಿಮ್ಮ‌ ಮಾತುಗಳು ಅಹಂಕಾರದಂತೆ ತೋರಬಹುದು. ಆಸ್ತಿಯಲ್ಲಿ ಪಾಲನ್ನು ಕೇಳುವ ಸ್ಥಿತಿ ಬರಬಹುದು. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಹೊಸ ಕಾರ್ಯಕ್ಕೆ ದೊಡ್ಡ ಫಲದ ಯೋಜನೆ ಇರಲಿ.

ಕರ್ಕಾಟಕ ರಾಶಿ: ಬಹಿರಂಗವಾಗಿ ಬಹಳ ಸಭ್ಯರಾಗುವಿರಿ. ಅನ್ವೇಷಣೆಯ ಮನಃಸ್ಥಿತಿಯವರಿಗೆ ಯಾವುದಾದರೂ ಮಾರ್ಗವು ಸಿಗುವುದು. ರಾಜಕೀಯ ಪರಿವರ್ತನೆಯು ನಿಮ್ಮಲ್ಲಿ ಅಚ್ಚರಿ ತಂದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನೂ ಕೊಡುವರು. ಇಂದು ನೀವು ಸಮಾನ್ಯಾರಂತೆ ತೋರುವಿರಿ. ನಿಮ್ಮ ರಹಸ್ಯ ವಿಚಾರವನ್ನು ಆಪ್ತರಿಗೆ ಹೇಳುವಿರಿ. ಸಿಟ್ಟು ನಿಮ್ಮ ಆರೋಗ್ಯವನ್ನು ಕೆಡಿಸುವುದು. ಬಾಡಿಗೆ ಮನೆಯವರು ಮನೆಯನ್ನು ಬದಲಾಯಿಸುವರು. ಭೂವ್ಯವಹಾರವನ್ನು ಮಾಡುವವರಿಗೆ ಇಂದು ಅಧಿಕ ಲಾಭವು ಆಗುವುದು. ಕಡಿಮೆಯಾಗುತ್ತಿದ್ದ ಆರೋಗ್ಯದಿಂದ ಸಮಾಧಾನ‌ಸಿಗಲಿದೆ. ನಿಮ್ಮನ್ನು ತಿಳಿದವರೇ ನಿಮಗೆ ವಂಚನೆ ಮಾಡುವರು. ಮನೆಯ ಕೆಲಸದಲ್ಲಿ ಇಂದು ಆಸಕ್ತಿ ಕಡಿಮೆ ಆಗುವುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಬೇಡ.‌ ತಪ್ಪಿಲ್ಲದೇ ಹೆದರುವ ಅವಶ್ಯಕತೆ ಇರದು. ಮಕ್ಕಳಿಗಾಗಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ.

ಸಿಂಹ ರಾಶಿ: ನಿಮ್ಮನ್ನು ನೀವು ಖಾಲಿ ಮಾಡಿಕೊಳ್ಳುವುದು ಬೇಡ. ಸಂಗಾತಿಯ ಮನೋಭಾವವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಹೋದರಿಯರ ಭೇಟಿಯು ನಿಮಗೆ ಸಂತೋಷ ಕೊಡುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆ ಆಗುವ ಸಾಧ್ಯತೆ ಇದೆ.‌ ಛಲವು ನಿಮಗೆ ಪರಿವರ್ತನೆಯನ್ನು ಕೊಡಿಸುವುದು. ನಿಮಗೆ ಯಾರಿಂದಲಾದರೂ ಸಹಾಯ ಕೇಳಲು ಸಂಕೋಚವಾದೀತು. ವ್ಯಾಪಾರದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ಇಂದು ನೀವು ಒತ್ತಡವನ್ನು ತಂದುಕೊಳ್ಳಬಾರದು ಎಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಸೃಷ್ಟಿಯಾಗಬಹುದು. ಉದ್ಯಮದಲ್ಲಿ ಹೊಸ ಕ್ರಾಂತಿಯನ್ನು ಮಾಡುವ ಸಾಧ್ಯತೆ ಇದೆ. ನಿಮ್ಮ ಕಾರ್ಮಿಕರು ನಿಮ್ಮ ಕಾರ್ಯವನ್ನು ಸರಿಯಾಗಿ ಮಾಡದೇ ಇರಬಹುದು. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಯಾರದೋ ಮಾತಿನಿಂದ ಸ್ಥೈರ್ಯವನ್ನು ಕಳೆದುಕೊಳ್ಳುವಿರಿ.

ಕನ್ಯಾ ರಾಶಿ: ಇಂದು ವ್ಯವಹಾರದ ಅನುಭವವನ್ನು ಕಲಿಯಿರಿ. ಸಂಬಂಧಗಳು ಸಂಬಂಧಗಳಾಗಿಯೇ ಇರಲಿ. ಅಪರಿಚಿತರ ಜೊತೆ ಸ್ವಲ್ಪ ಹದವಾಗಿ ವರ್ತಿಸಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ನಿಮಗೆ ಕಷ್ಟವಾದೀತು. ಸ್ನೇಹಿತರು ಪ್ರೀತಿಯಿಂದ ನಿಮಗೆ ಉಡುಗೊರೆ ಕೊಡುವರು. ತಾಯಿಯ ಪ್ರೀತಿಯು ಇಂದು ನಿಮಗೆ ಹೆಚ್ಚು ಸಿಗಲಿದೆ. ಸಂಗಾತಿಯ ಜೊತೆ ಕಲಹವಾಡಿ ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ಯೋಜನೆಯನ್ನು ಪೂರ್ಣವಾಗಿ ನಿರ್ವಹಿಸಲು ಸಾಧ್ಯವಾಗದು. ನಿಮ್ಮನ್ನು ಸಮ್ಮಾನಿಸಬಹುದು. ಸಣ್ಣ ವಿಚಾರದಲ್ಲಿ ಇನ್ನೊಬ್ಬರ ಜೊತೆ ಕಲಹ ಬೇಡ. ಮರೆತು ಮುನ್ನಡೆಯುವುದು ಉತ್ತಮ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ. ನ್ಯಾಯವಾದಿಗಳು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ