AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope ವಾರ ಭವಿಷ್ಯ: ಮುಂದಿನ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Weekly Horoscope ವಾರ ಭವಿಷ್ಯ: ಮುಂದಿನ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ
ರಾಶಿ ಚಕ್ರ
TV9 Web
| Updated By: ಆಯೇಷಾ ಬಾನು|

Updated on: Sep 05, 2021 | 6:46 AM

Share

ವಾರ ಭವಿಷ್ಯ: ತಾ.06-09-2021 ರಿಂದ ತಾ.12-09-2021 ರವರೆವಿಗೆ.

ಮೇಷರಾಶಿ: ಈ ವಾರ ಬಹಳ ಶುಭಫಲಗಳಿವೆ. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಅನಾವಶ್ಯಕವಾಗಿ ಯಾವುದೇ ವಿಚಾರಗಳಲ್ಲಿ ಸಕ್ರಿಯವಾಗುವುದು ಬೇಡ. ಮನೆಯಲ್ಲಿ ಶುಭಕಾರ್ಯಗಳು ನೆರವೇರಲಿವೆ. ತಂದೆ-ತಾಯಿಗಳ ಬೆಂಬಲದಿಂದ ನೂತನ ಉದ್ಯಮವನ್ನು ಆರಂಭ ಮಾಡುವಿರಿ. ಸ್ನೇಹಿತರೊಂದಿಗೆ ಆರ್ಥಿಕ ವ್ಯವಹಾರ ಬೇಡ. ವಿದ್ಯಾರ್ಥಿಗಳ ಪಾಲಿಗೆ ಒಳ್ಳೆಯ ದಿನಗಳಿವು. ಅದೃಷ್ಟ ಸಂಖ್ಯೆ: 7

ವೃಷಭರಾಶಿ: ಶುಕ್ರನ ನೀಚತ್ವ ಮುಗಿದು ಶುಭವಾಗಲಿದೆ. ನಿಮ್ಮ ಹತ್ತಿರದವರಿಗೆ ಸಿಟ್ಟು ಬರಿಸದೇ ಇರುವುದು ಒಳ್ಳೆಯದು. ದುಡ್ಡಿನ ವಿಷಯದಲ್ಲಿ ಹುಷಾರಾಗಿರಿ. ಗೆಳೆಯರ ಮಾತಿಗೆ ಹೆಚ್ಚು ಬೆಲೆ ನೀಡುವಿರಿ.ಆರೋಗ್ಯದ ಕಡೆ ಗಮನವಿರಲಿ. ಹತ್ತಿರದ ಬಂಧುಗಳಿಗೆ ಆರ್ಥಿಕ ಸಹಾಯ ಮಾಡುವಿರಿ. ಸಂಬಂಧದಲ್ಲಿ ಸಣ್ಣ ಕೋಲಾಹಲವಾಗಲಿದೆ. ಅಂದುಕೊಂಡ ಕಾರ್ಯಗಳಲ್ಲಿ ಪ್ರಗತಿ. ಅದೃಷ್ಟ ಸಂಖ್ಯೆ: 1

ಮಿಥುನರಾಶಿ: ಭಯದ ವಾತಾವರಣ ಬೇಡ. ಮುಕ್ತವಾಗಿರಿ. ಮೊದಲು ನಿಮ್ಮ ಕೆಲಸಗಳ ಕಡೆಗೆ ಗಮನವಿಡಿ. ತದನಂತರ ಸ್ನೇಹಿತರಿಗೆ ನೆರವಾಗಿ. ಔದ್ಯೋಗಿಕವಾಗಿ ಇನ್ನಷ್ಟು ವೇಗ ಹೆಚ್ಚಿಸಿಕೊಳ್ಳುವತ್ತ ಗಮನಹರಿಸುವಿರಿ. ಆರೋಗ್ಯದಲ್ಲಿ ಸ್ಥಿರತೆ. ಶುಭ ಕಾರ್ಯಗಳು ಸನ್ನಿಹಿತವಾಗಲಿವೆ.ಬಂಧು ಬಳಗದಿಂದ ನಿಮ್ಮ ಬೆಳವಣಿಗೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ. ಸೂಕ್ತಿ ನಿರ್ಧಾರಗಳಿಂದ ಮುಂದುವರೆಯಿರಿ. ಅದೃಷ್ಟ ಸಂಖ್ಯೆ: 4

ಕಟಕರಾಶಿ: ಗುರುಬಲ ಪ್ರಾರಂಭವಾಗಲಿದೆ.ಕಾರ್ಯಸಿದ್ದಿಯಾಗಲಿದೆ. ಸ್ವಲ್ಪ ಯೋಚಿಸಿ ಮುಂದಡಿಯಿಟ್ಟರೆ ಧನಲಾಭ. ವಾರಪೂರ್ತಿ ಸಂತಸದಿಂದ ಇರುವಿರಿ. ನಿಧಾನವಾಗಿ ಯೋಚಿಸಿ ಸಂಬಂಧ ಬೆಸೆಯಲು ಮುಂದಾಗಿ.ಆಗುವುದೆಲ್ಲಾ ಒಳ್ಳೆಯದಕ್ಕೆ ಅನ್ನುವುದರಲ್ಲಿ ನಂಬಿಕೆ ಇರಲಿ. ಮನೆಗೆ ಹೊಸ ವಸ್ತುಗಳು ಬರಲಿವೆ. ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ಇರಲಿ. ದೂರದ ಪ್ರಯಾಣ ಮಾಡುವ ಅಗತ್ಯ ಬರಲಿ. ಅದೃಷ್ಟ ಸಂಖ್ಯೆ: 8

ಸಿಂಹರಾಶಿ: ಕೋಪತಾಪಗಳಿಂದ ದೂರವಿರಿ,ಶುಭ ಸಮಯ,ಒಂದೇ ವಿಚಾರದ ಬಗ್ಗೆ ಹೆಚ್ಚು ಯೋಚನೆಮಾಡುವುದು ಬೇಡ. ನಿಮ್ಮ ಶಕ್ತಿಗೆ ಅನುಗುಣವಾದ ಕೆಲಸ ಆಯ್ಕೆ ಮಾಡಿಕೊಳ್ಳಿ. ಹಿಂದೆ ಮಾಡಿದ ಕೆಲಸಕ್ಕೆ ಒಳ್ಳೆಯ ಫಲ ದೊರಕಲಿದೆ. ನಾಳೆಗಳಿಗಾಗಿ ಒಂದಷ್ಟು ಪೂರ್ವತಯಾರಿಯನ್ನು ಮಾಡಿಕೊಳ್ಳಿ. ಮಿತವ್ಯಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಮನೆಯವರೊಂದಿಗೆ ಸಂತಸವಾಗಲಿದೆ. ಅದೃಷ್ಟ ಸಂಖ್ಯೆ: 6

ಕನ್ಯಾರಾಶಿ: ಬುಧನ ಅನುಗ್ರಹ ಚನ್ನಾಗಿದೆ. ನಿರ್ಧಿಷ್ಟ ಕಾಲಮಿತಿಯಲ್ಲಿ ಅಂದುಕೊಂಡ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಕೈಹಾಕಿದ ಕೆಲಸಗಳೆಲ್ಲಕ್ಕೂ ಒಳ್ಳೆಯ ಫಲಿತಾಂಶ ಸಿಗಲಿದೆ. ಹೆಚ್ಚುಮೊಬೈಲ್ ಬಳಕೆ ಒಳ್ಳೆಯದಲ್ಲ. ಕೆಲಸದ ಸ್ಥಳದಲ್ಲಿ ಅನಾವಶ್ಯಕ ಕಿರಿಕಿರಿಗಳಿಂದ ಮುಕ್ತಿ ದೊರಕಲಿದೆ. ನಿಮ್ಮ ಕೆಲಸಗಳಿಂದ ಹೆತ್ತವರು ಹೆಮ್ಮೆ ಪಡಲಿದ್ದಾರೆ. ಮಾತಿಗಿಂತ ಮೌನ ಹೆಚ್ಚು ಪರಿಣಾಮಕಾರಿ. ಅದೃಷ್ಟ ಸಂಖ್ಯೆ: 7

ತುಲಾರಾಶಿ: ಶುಕ್ರ ಜನ್ಮ ಸಂಚಾರ ಶುಭವಾಗಲಿದೆ. ಆರೋಗ್ಯದ ಮೇಲೆ ಜಾಸ್ತಿ ನಿಗಾ ಇರಲಿ. ಕೆಲಸದ ಒತ್ತಡ ನಿಭಾಯಿಸುವ ಶಕ್ತಿಯನ್ನು ಒಟ್ಟು ಮಾಡಿಟ್ಟುಕೊಳ್ಳಿ. ಅಗತ್ಯವಾದ ವಿಚಾರಗಳ ಕಡೆಗೆಮಾತ್ರ ನಿಮ್ಮ ಗಮನವಿರಲಿ. ಖರ್ಚು ಕಡಿಮೆ ಮಾಡಿಕೊಳ್ಳಿ. ರಾಜಕೀಯವಾಗಿ ಮುನ್ನಡೆ ಸಿಗಲಿದೆ. ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ. ಒಂದೇ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ. ಅದೃಷ್ಟ ಸಂಖ್ಯೆ: 2

ವೃಶ್ಚಿಕರಾಶಿ: ದೊಡ್ಡ ದೊಡ್ಡ ನಿರ್ಧಾರಗಳನ್ನು ಹೆಚ್ಚು ಸಮಯ ಮುಂದೂಡಬೇಡಿ. ಮದುವೆ ಮೊದಲಾದ ಶುಭ ಸಂದರ್ಭಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಘಟನೆಗಳು ಎದುರಾಗಲಿವೆ. ಎಲ್ಲವನ್ನೂ ಶಾಂತ ಚಿತ್ತದಿಂದ ಎದುರಿಸಿದರೆ ಒಳ್ಳೆಯ ಫಲ ದೊರಕಲಿದೆ. ಸ್ವಂತ ಮನೆ ಕನಸು ಕೈಗೂಡಲಿದೆ. ಅದೃಷ್ಟ ಸಂಖ್ಯೆ: 9

ಧನಸ್ಸುರಾಶಿ: ಏನೋ ಅಂದುಕೊಂಡಿದ್ದರೂ ಆ ಕಡೆಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಹತ್ತಿರದವರೊಂದಿಗೆ ಮೃದುವಾಗಿ ವರ್ತಿಸಿ, ಆರ್ಥಿಕವಾಗಿಲಾಭವಾಗಲಿದೆ. ಕೋಪ ಬಂದಾಗ ಹೆಚ್ಚು ಮಾತನಾಡಲು ಹೋಗಬೇಡಿ. ಮಾಡುವ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಮುಖ್ಯ. ಅದೃಷ್ಟ ಸಂಖ್ಯೆ: 5

ಮಕರರಾಶಿ: ವ್ಯಾಪಾರಕ್ಕೆ ಸಂಬಂಧಿಸಿದಂತೆ ದುಡುಕ ಬೇಡ. ಮನೆಯಲ್ಲಿ ಮುನಿಸು ಬೇಡ. ಮಕ್ಕಳ ಪ್ರೀತಿಯಿಂದ ಹೆಚ್ಚು ಸಂತೋಷಪಡುವಿರಿ. ಅಂದುಕೊಂಡಂತೆ ಮಹತ್ವದ ಘಟನೆಗಳು ನೆರವೇರಲಿವೆ. ನಿಧಾನವಾಗಿ ಮುಂನಡೆಯಿರಿ. ಖರ್ಚಿನಲ್ಲಿ ಮಿತ ಸಾಧಿಸಿದರೆ ಭವಿಷ್ಯದಲ್ಲಿ ಒಳಿತಾಗಲಿದೆ. ಅದೃಷ್ಟ ಸಂಖ್ಯೆ: 3

ಕುಂಭರಾಶಿ: ವ್ಯಯ ಗುರು ಸರಳ ವಿಘ್ನಗಳು. ಎಲ್ಲರೊಂದಿಗೂ ಅತಿಯಾದ ಸಲುಗೆ ಬೇಡ. ದೂರದಪ್ರಯಾಣ ದಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಅತಿ ಭಾವುಕತೆ ಒಳ್ಳೆಯದಲ್ಲ. ಜಗತ್ತು ನೀವಂದುಕೊಂಡ ಹಾಗೆ ಇಲ್ಲ. ತಂದೆ ತಾಯಿ ಆರೋಗ್ಯದಲ್ಲಿ ಸುಧಾರಣೆ. ಅದೃಷ್ಟ ಸಂಖ್ಯೆ: ಸಿನಿಮಾ ಕ್ಷೇತ್ರದಲ್ಲಿ ಇರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿವೆ. ಕೆಲಸದಲ್ಲಿ ನಿರೀಕ್ಷಿತ ಪ್ರಗತಿಯಾಗಲಿದೆ. ಅದೃಷ್ಟ ಸಂಖ್ಯೆ: ಸಂಖ್ಯೆ.9

ಮೀನರಾಶಿ: ಗುರು ಬದಲಾವಣೆ ಶುಭ ಫಲ. ನೆಮ್ಮದಿಯ ನಾಳೆಗಾಗಿ ಇಂದಿನಿಂದಲೇ ತಯಾರಿಮಾಡಿಕೊಳ್ಳಿ. ಒತ್ತಡದಿಂದ ಹೊರಗೆ ಬರುವಿರಿ.ಉಳಿತಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ. ಮಕ್ಕಳವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಲಿದೆ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಅಸಕ್ತರಿಗೆ ನೆರವಾಗುವಿರಿ. ಅದೃಷ್ಟ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!