Weekly Horoscope in Kannada: ವಾರ ಭವಿಷ್ಯ: ಜು.​01 ರಿಂದ 07 ರವರೆಗೆ ನಿಮ್ಮ ಭವಿಷ್ಯ ಹೀಗಿದೆ

ಜುಲೈ ತಿಂಗಳ ಮೊದಲ ವಾರವು 01 ರಿಂದ 07 ರವರೆಗೆ ಇರಲಿದ್ದು, ಶುಭಾಶುಭಫಲಗಳು ನಿಮ್ಮ ಪಾಲಿಗಿವೆ. ಅಶುಭ ಫಲ ಇರುವವರು ದೈವಾನುಗ್ರಹದಿಂದ ಶುಭಫಲವನ್ನೇ ಅನುಭವಿಸಬಹುದು.

Weekly Horoscope in Kannada: ವಾರ ಭವಿಷ್ಯ: ಜು.​01 ರಿಂದ 07 ರವರೆಗೆ ನಿಮ್ಮ ಭವಿಷ್ಯ ಹೀಗಿದೆ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2024 | 8:34 PM

ಜುಲೈ ತಿಂಗಳ ಮೊದಲ ವಾರವು 01 ರಿಂದ 07 ರವರೆಗೆ ಇರಲಿದ್ದು, ಶುಭಾಶುಭಫಲಗಳು ನಿಮ್ಮ ಪಾಲಿಗಿವೆ. ಅಶುಭ ಫಲ ಇರುವವರು ದೈವಾನುಗ್ರಹದಿಂದ ಶುಭಫಲವನ್ನೇ ಅನುಭವಿಸಬಹುದು.

ಮೇಷ ರಾಶಿ : ಜುಲೈ ತಿಂಗಳ ಮೊದಲ ವಾರ ದೈವಾನುಕೂಲದ ವಾರವಾಗಿದೆ. ಶ್ರಮಕ್ಕೆ ತಕ್ಕ ಪ್ರತಿಫಲವನ್ನು ನೀವು ನಿರೀಕ್ಷಿಸಿ ಪಡೆದುಕೊಳ್ಳಬಹುದು. ಅನಗತ್ಯ ಕೆಲಸಗಳಿಗೆ ಹಣವು ವ್ಯಯವಾಗುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ಹೆಚ್ವು ಕಾಲ ಕಳೆಯಿರಿ. ನೀವು ಕೆಲಸದಲ್ಲಿ ಇಂದು ಒಂದು ಒಳ್ಳೆಯ ಸುದ್ದಿ ಪಡೆಯಬಹುದು. ಮಾನಸಿಕವಾಗಿ ಸ್ವಲ್ಪ ಮಟ್ಟಿನ ಕಿರಿಕಿರಿಯನ್ನು ಅನುಭವಿಸುವಿರಿ. ಈ ವಾರದಲ್ಲಿ ಒಂಟಿತನವನ್ನು ಇಷ್ಟಪಡುತ್ತೀರಿ. ಅನಿರೀಕ್ಷಿತವಾಗಿ ಗುರುವಿನ ದರ್ಶನವನ್ನು ಪಡೆಯಿರಿ. ಒಳ್ಳೆಯ ಸಮಾಚರ ನಿಮ್ಮನ್ನು ಸೇರಬಹುದು. ನಂಬಿಕೆಯೇ ಸ್ವಭಾವವಾಗಿರುವ ನಿಮ್ಮನ್ನು ಅದು ಕೈ ಬಿಡದು. ರಾಶಿಯ ಅಧಿಪತಿಯಾದ ಕುಜನ ಅನುಗ್ರಹಕ್ಕೆ ಕೆಂಪು ವಸ್ತ್ರವನ್ನು ದೋಷ ನಿವಾರಣೆಗೆ ದಾನಮಾಡಿ.

ವೃಷಭ ರಾಶಿ : ರಾಶಿ ಚಕ್ರದ ಎರಡನೇ ರಾಶಿಯವರಿಗೆ ಮಿಶ್ರಫಲವಿದೆ. ನಿಮ್ಮ ಸಂಗಾತಿಯಿಂದ ಅಚ್ಚರಿಯ ಸುದ್ದಿ ಕಾದಿರುತ್ತದೆ. ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಅವರೊಂದಿಗೆ ಸಮಯವನ್ನು ಕಳೆಯಬಹುದು. ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಜೀವನದ ತೊಂದರೆಗಳನ್ನು ಸಂಗಾತಿಯ ಜೊತೆ ಹಂಚಿಕೊಳ್ಳಲು ಬಯಸುವಿರಿ. ಆದರೆ ಅವರ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ಸಂಬಂಧಿಕರ ಜೊತೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ. ಗೊಂದಲವನ್ನು ಪರಿಹರಿಸಿಕೊಳ್ಳಲು ನಿಮಗೆ ಸಾಧ್ಯವಾಗುವುದು. ಅಂದುಕೊಂಡಿದ್ದನ್ನು ಸಾಧಿಸಲು ಲಲಿತಾಸಹಸ್ರನಾಮವನ್ನು ಪಠಿಸಿ.

ಮಿಥುನ ರಾಶಿ : ಈ ವಾರವು ಜುಲೈ ಮೊದಲ ವಾರವಾಗಿದೆ. ಮಾನಸಿಕವಾದ ಉಲ್ಲಾಸವಿರಲಿದೆ. ದೈಹಿಕ ಸೌಕರ್ಯವನ್ನು ಸಾಧಿಸಲಾಗುತ್ತದೆ. ಈ ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಗುರುವು ದ್ವಾದಶದಲ್ಲಿ ಇರುವ ಕಾರಣ ಆಗಾಗ ಸಲ್ಲದ ಯೋಚನೆಗಳು ಬರಲಿದೆ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಪ್ರಯಾಣದ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನೀವು ಕೆಲವು ವ್ಯವಹಾರ ಅಥವಾ ಒಪ್ಪಂದದ ಜೊತೆ ಉತ್ತಮ ಸಂಬಂಧ ಹೊಂದಿದ್ದರೆ, ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ. ವಿಷ್ಣುಸಹಸ್ರನಾಮವನ್ನು ಒಳ್ಳೆಯದಕ್ಕಾಗಿ ಪಠಿಸಿ.

ಕರ್ಕ ರಾಶಿ : ಈ ವಾರವು ರಾಶಿಚಕ್ರದ ನಾಲ್ಕನೇ ರಾಶಿಯವರಿಗೆ ಶುಭ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರದ ಗಟ್ಟಿತನ ಧೈರ್ಯ ಕೊಡಲಿದೆ. ಆರೋಗ್ಯ ಉತ್ತಮ. ಏಕಾದಶದ ಗುರುವು ನಿಮ್ಮ ಎಲ್ಲ ಕಷ್ಟಗಳನ್ನೂ ದೂರಮಾಡುವನು. ಆದರೆ ಗುರುವಿನ ಸಾಂಗತ್ಯ ಬೇಕಷ್ಟೇ. ಸಾಲವನ್ನು ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಕೆಲಸ ಕಾರ್ಯಗಳು ಫಲಿಸಲಿವೆ.

ಸಿಂಹ ರಾಶಿ : ಈ ವಾರವು ನಿಮಗೆ ಮಿಶ್ರಫದ್ದಾಗಿದೆ. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಸ್ನೇಹಿರಿಗೆ ಸಾಲವನ್ನು ನೀಡಬೇಕಾಗಿಬರಬಹುದು. ಸಂಗಾತಿಯ, ಪ್ರೇಯಸಿ ಜೊತೆಯಲ್ಲಿ ಸುತ್ತಾಟ. ನಿಮ್ಮ ಉದ್ದೇಶವು ಸಾಕಾರಗೊಂಡರೂ ನೆಮ್ಮದಿ ಸಿಗದೇ ಕಷ್ಟಪಡುವಿರಿ. ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಈ ವಾರ ಕಳೆದು ಹೋದ ಸಂಬಂಧಗಳಿಗೆ ಮರುಜೀವ ಕೊಡುವಿರಿ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ದೊರೆಯಲಿದೆ. ಆದಿತ್ಯಹೃದಯವನ್ನು ಸೂರ್ಯೋದಯದ ಸಮಯದಲ್ಲಿ ಪಠಿಸಿ.

ಕನ್ಯಾ ರಾಶಿ : ರಾಶಿ ಚಕ್ರದ ಆರನೇ ರಾಶಿಯವರಿಗೆ ಈ ವಾರವು ಸಮೃದ್ಧಿಯ ಕಾಲ. ಪರಸ್ಪರ ಒರಟುತನದಿಂದ ದಾಂಪತ್ಯದಲ್ಲಿ ಕಲಹವಿದ್ದರೂ ಅದು ಸರಿಯಾಗುವುದು. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಹಿರಿಯರ ಸಲಹೆಯನ್ನು ಒಡೆಯಿರಿ. ಎಂದೋ ಬಯಸಿದ್ದನ್ನು ಈ ವಾರ ಪಡೆಯುವ ಅವಕಾಶ ಸಿಗಲಿದೆ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಶಿಸ್ತುಬದ್ಧವಾದ ಅಭ್ಯಾಸವನ್ನು ರೂಢಿಸಿಕೊಳ್ಳುವಿರಿ.

ತುಲಾ ರಾಶಿ : ಜುಲೈ ತಿಂಗಳ ಮೊದಲ ವಾರದಲ್ಲಿ ಯಾವುದನ್ನಾದರೂ ಉಳಿಸಿಕೊಳ್ಳುವ ಹೋರಾಟದಲ್ಲಿ ಇರುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ ಇದೆ. ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳಿ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಒಂದರ ಮೇಲೆ ಒಂದರಂತೆ ಕಷ್ಟಗಳನ್ನು ನಿಮ್ಮ ಬೆನ್ನಹತ್ತುವುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸಬಹುದು. ಆದರೆ ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ನಿಶ್ಚಿತ. ಮಹಾದೇವಿಯನ್ನು ಆರಾಧಿಸಿ. ಇಷ್ಟಾರ್ಥವನ್ನು ನೀಡುವಳು.

ವೃಶ್ಚಿಕ ರಾಶಿ : ಈ ವಾರ ನಿಮ್ಮ ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದ ಜೊತೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ಈ ವಾರ ನಿಮ್ಮ ವಿವಾಹದ ಬಗ್ಗೆ ಗಂಭೀರ ಚಿಂತನೆ ನಡೆಯುವುದು. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಕೆಲಸದಲ್ಲಿ ತಡೆಯೊಡ್ಡುವವರು ತೀವ್ರ ಅವನತಿ ಹೊಂದುತ್ತಾರೆ. ದೈವಾನುಗ್ರಹವಿದ್ದು ನಿಮ್ಮ ಪ್ರಯತ್ನವೂ ಅಲ್ಪವಾಗಲಿದೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಈ ಕಾರಣದಿಂದಾಗಿ ನಿಮ್ಮ ಕೆಲವು ಸಮಯ ವ್ಯರ್ಥವಾಗಬಹುದು. ಅನಾರೋಗ್ಯ ಕಾಡಬಹುದು. ಕಾರ್ತಿಕೇಯನನ್ನು ಸ್ಮರಿಸಿ.

ಧನು ರಾಶಿ : ಈ ವಾರದಲ್ಲಿ ನಿಮಗೆ ಒಮ್ಮತ ಅಭಿಪ್ರಾಯವನ್ನು ಹೇಳಲು ಕಷ್ಟವಾಗುವುದು. ಖರ್ಚುಗಳಿಗೆ ಸ್ವಂತ ಹಣವನ್ನು ಬಳಸಿ. ಯಾವುದೇ ವಾದ ವಿವಾದಗಳಿಗೆ ಕಿವಿಯನ್ನು ಕೊಡಬೇಡಿ. ಬಾಯನ್ನು ಹಾಕಲೇ ಬೇಡಿ‌. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಸರಳವಾದ ಸಂಗತಿಗಳನ್ನು ನಿಭಾಯಿಸಲು ಕಲಿಯಬೇಕಾಗುವುದು. ನಿಮ್ಮದಲ್ಲದ ವಿಚಾರವನ್ನೂ ನೀವು ವೈಯಕ್ತಿಕವಾಗಿ ಸ್ವೀಕರಿಸುವಿರಿ. ಕೆಲವು ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿ ಇರುವುದು. ಧಾರ್ಮಿಕ ಆಚರಣೆಯಲ್ಲಿ ಅನಾದರ ಉಂಟಾಗಬಹುದು. ಆರೋಗ್ಯ ಭಾಗ್ಯಕ್ಕಾಗಿ ಹೆಚ್ಚಿನ ಕಾಳಜಿವಹಿಸಿದ್ದಲ್ಲಿ ಆಸ್ಪತ್ರೆಯ ಅಲೆದಾಟ ತಪ್ಪಲಿದೆ. ಗುರುಚರಿತ್ರೆಯ ಪಠನವು ನಿಮಗೆ ರಕ್ಷೆಯಾಗಲಿದೆ.

ಮಕರ ರಾಶಿ : ರಾಶಿ ಚಕ್ರದ ಹತ್ತನೇ ರಾಶಿಯವರಿಗೆ ಜುಲೈ ತಿಂಗಳ ಮೊದಲ ವಾರ ಶುಭಪ್ರದ. ದೀರ್ಘ ಪ್ರಯಾಣವನ್ನು ಈ ವಾರ ಮಾಡುವುದು ಒಳಿತಲ್ಲ‌. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ದೈವಾನುಗ್ರಹವು ಎಲ್ಲ ಕಾರ್ಯವನ್ನು ಮಾಡಿಸುವುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮ ಅಂಕುರಿಸುವ ಸಾಧ್ಯತೆ ಇದೆ. ನೀರೆರೆದರೆ ಫಲಿಸಲೂ ಬಹುದು. ನಿಮ್ಮ ಸಂಗಾತಿಯು ನಿಮಗೆ ಅನುಕೂಲವನ್ನು ಕಲ್ಪಿಸುವವಳೇ ಆಗಿದ್ದಾಳೆ. ವ್ಯಾಮೋಹದಿಂದ ನೀವು ಹೊರಬರುವ ದಾರಿ ಕಾಣಿಸುವುದು.

ಕುಂಭ ರಾಶಿ : ಜುಲೈ ತಿಂಗಳ ಮೊದಲ ವಾರವು ಮಿಶ್ರಫಲದ ವಾರ. ಆತುರದ ತೀರ್ಮಾನ ಹಾಗೂ ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಸರ್ಕಾರದ ಕಾರ್ಯಕ್ಕೆ ಓಡಾಟ ಮಾಡಿ ಪೂರ್ಣ ಮಾಡುವಿರಿ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ನೀವು ಗಣ್ಯರೊಂದಿಗೆ ಇಂದಿನ ಒಡನಾಡವಿರಲಿದೆ. ಈ ವಾರ ಕಳೆದುದುಕ್ಕಿಂತ ಪಡೆದುದು ಅಧಿಕವಾಗಲಿದೆ. ವಿವಾಹಕ್ಕೆ ಸಂಬಂಧಿಸಿದ ಕಟು ಮಾತುಗಳು ಕೇಳಿಬರಬಹುದು. ಉತ್ತರಿಸಲು ಹೋಗದೇ ಅಲೆಗಳು ಶಾಂತವಾಗುವವರೆಗೆ ಸುಮ್ಮನಿರಿ. ಶಿವನ ಅನುಗ್ರಹಕ್ಕೆ ಪಾತ್ರರಾಗಿ.

ಮೀನ ರಾಶಿ : ಮೊದಲ ವಾರದಲ್ಲಿ ರಾಶಿ ಚಕ್ರದ ಹನ್ನೆರಡನೇ ರಾಶಿಯವರಿಗೆ ಮಿಶ್ರ ಫಲ. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳಬೇಕಾಗಬಹುದು. ರಾಹುವು ನಿಮ್ಮ ರಾಶಿಯಲ್ಲಿ ಇರುವುದು ಮತ್ತು ರಾಶಿಯ ಅಧಿಪತಿ ತೃತೀಯದಲ್ಲಿ ಇರುವುದು ಎರಡೂ ಶುಭವಲ್ಲ. ದೈಹಿಕ‌ ಮಾನಿಸಿಕ ಅಶಾಂತಿಯನ್ನು ಸಹಿಸಿಕೊಳ್ಳುವುದು ಕಷ್ಟವಾಗುವುದು. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಪುಣ್ಯಸ್ಥಳಗಳ ದರ್ಶನಭಾಗ್ಯ ಸಿಗಲಿದೆ. ಪ್ರತಿ ಗುರುವಾರದಂದು ರಾಯರ ಅನುಗ್ರಹವನ್ನು ಪಡೆಯಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್