AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ!

2026ರ ಜೂನ್ 14ರಿಂದ ಜೂನ್ 20ರವರೆಗಿನ ಅವಧಿಯಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಗುರು ಗ್ರಹಗಳ ವಿಶೇಷ ಸಂಚಾರದಿಂದಾಗಿ ಮೇಷ, ಮಿಥುನ, ಕರ್ಕಾಟಕ ಮತ್ತು ಕನ್ಯಾ ಸೇರಿದಂತೆ ಹಲವು ರಾಶಿಗಳಿಗೆ ಉದ್ಯೋಗದಲ್ಲಿ ಬಡ್ತಿ, ಧನಲಾಭ ಹಾಗೂ ಆಸ್ತಿ ಖರೀದಿಯ ಶುಭ ಯೋಗಗಳಿವೆ. ಇನ್ನುಳಿದ ರಾಶಿಯವರು ಆರೋಗ್ಯ ಮತ್ತು ವಾದವಿವಾದಗಳ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಸಂಪೂರ್ಣ ವಿವರ ಇಲ್ಲಿದೆ.

ವಾರ ಭವಿಷ್ಯ: ಜೂನ್ 14 ರಿಂದ 20 ರವರೆಗೆ ಈ 4 ರಾಶಿಯವರಿಗೆ ಒಲಿಯಲಿದೆ ಧನಲಕ್ಷ್ಮಿ ಯೋಗ!
ವಾರ ಭವಿಷ್ಯImage Credit source: Getty Images
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 13, 2026 | 6:22 PM

Share

2026ರ ಜೂನ್ 14ರಿಂದ ಜೂನ್ 20ರವರೆಗೆ ಮೂರನೇ ವಾರವಾಗಿದ್ದು, ಈ ಅವಧಿಯಲ್ಲಿ ಸೂರ್ಯ ಮತ್ತು ಬುಧ ಮಿಥುನದಲ್ಲೂ, ಶುಕ್ರ ಮತ್ತು ಗುರು ಕರ್ಕಾಟಕದಲ್ಲೂ, ಶನಿ ಮೀನ ರಾಶಿಯಲ್ಲೂ ಸಂಚರಿಸುತ್ತಿದ್ದಾರೆ. ಸ್ವಕ್ಷೇತ್ರ ಹಾಗೂ ಉಚ್ಚಕ್ಷೇತ್ರದಲ್ಲಿ ಇರುವ ಗ್ರಹಗಳು ಶುಭಫಲವನ್ನು ನೀಡುವರು.

​ಮೇಷ ರಾಶಿ:

ಮಂಗಳನ ಸ್ವಕ್ಷೇತ್ರ ಸಂಚಾರದಿಂದ ಧೈರ್ಯ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

​ವೃಷಭ ರಾಶಿ:

ಧನಲಾಭದ ಯೋಗವಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ಸಾಮರಸ್ಯವಿರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ಪ್ರಮುಖ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ.

​ಮಿಥುನ ರಾಶಿ:

ನಿಮ್ಮ ರಾಶಿಯಲ್ಲಿ ಸೂರ್ಯ-ಬುಧರ ಯುತಿಯಿಂದ ಬುದ್ಧಿಮತ್ತೆ ಮತ್ತು ಗೌರವ ಹೆಚ್ಚುತ್ತದೆ. ವ್ಯಾಪಾರದಲ್ಲಿ ಲಾಭದಾಯಕ ಅವಕಾಶಗಳು ಬರಲಿವೆ. ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದ್ದು, ನೆಮ್ಮದಿಯ ವಾರವಿದು.

​ಕರ್ಕಾಟಕ ರಾಶಿ:

ಗುರು ಹಾಗೂ ಶುಕ್ರರ ಶುಭ ಸಂಚಾರದಿಂದ ಆಧ್ಯಾತ್ಮಿಕ ಚಿಂತನೆ ಹೆಚ್ಚುತ್ತದೆ. ಆಸ್ತಿ ಖರೀದಿ ಯೋಗವಿದೆ. ದೂರದ ಪ್ರಯಾಣದಿಂದ ಲಾಭವಾಗಲಿದ್ದು, ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ದಟ್ಟವಾಗಿದೆ.

​ಸಿಂಹ ರಾಶಿ:

ಚಂದ್ರ ಮತ್ತು ಕೇತುಗಳ ಪ್ರಭಾವದಿಂದ ಮನಸ್ಸಿನಲ್ಲಿ ಸಣ್ಣಗಿನ ಗೊಂದಲಗಳಿರಬಹುದು. ಆದಾಗ್ಯೂ, ಆರ್ಥಿಕವಾಗಿ ಆದಾಯದ ಮೂಲಗಳು ಹೆಚ್ಚಲಿವೆ. ಸ್ನೇಹಿತರ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ.

​ಕನ್ಯಾ ರಾಶಿ:

ಉದ್ಯೋಗಿಗಳಿಗೆ ಬಡ್ತಿ ಅಥವಾ ವರ್ಗಾವಣೆಯ ಶುಭ ಸೂಚನೆಗಳಿವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ಕೌಟುಂಬಿಕವಾಗಿ ಸಂತಸದ ವಾತಾವರಣವಿರುತ್ತದೆ.

​ತುಲಾ ರಾಶಿ:

ಭಾಗ್ಯಸ್ಥಾನದಲ್ಲಿ ಗ್ರಹಗಳ ಅನುಕೂಲತೆಯಿಂದ ಅಂದುಕೊಂಡ ಕಾರ್ಯಗಳು ಸಫಲವಾಗುತ್ತವೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ಸಮಾಜದಲ್ಲಿ ಕೀರ್ತಿ ಲಭಿಸುತ್ತದೆ.

​ವೃಶ್ಚಿಕ ರಾಶಿ:

ಅಷ್ಟಮದಲ್ಲಿ ಸೂರ್ಯನಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅನಗತ್ಯ ವಾದವಿವಾದಗಳಿಂದ ದೂರವಿರಿ. ಕಠಿಣ ಪರಿಶ್ರಮದಿಂದ ಮಾತ್ರ ಕೆಲಸಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ, ತಾಳ್ಮೆ ಇರಲಿ.

​ಧನು ರಾಶಿ:

ಸಪ್ತಮ ಭಾವದ ಶುಭ ದೃಷ್ಟಿಯಿಂದ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಲಾಭ ನಿರೀಕ್ಷಿಸಬಹುದು. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಳ್ಳುವ ಅವಕಾಶಗಳು ಒದಗಿ ಬರಲಿವೆ.

​ಮಕರ ರಾಶಿ:

ಶತ್ರುಗಳ ಮೇಲಿನ ಜಯ ನಿಮ್ಮದಾಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದ್ದು, ದೈನಂದಿನ ಆದಾಯವು ಸ್ಥಿರವಾಗಿ ಮುಂದುವರಿಯುತ್ತದೆ.

​ಕುಂಭ ರಾಶಿ:

ರಾಹುವಿನ ಸಂಚಾರವಿದ್ದರೂ ಬುಧನ ಅನುಕೂಲತೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ ಕಂಡುಬರುತ್ತದೆ. ಹೊಸ ಹೂಡಿಕೆಗಳಿಗೆ ಈ ವಾರ ಸೂಕ್ತವಾಗಿದೆ. ಮಕ್ಕಳ ಕಡೆಯಿಂದ ಶುಭ ವಾರ್ತೆಗಳನ್ನು ಕೇಳುವಿರಿ.

​ಮೀನ ರಾಶಿ:

ನಿಮ್ಮ ರಾಶಿಯಲ್ಲಿ ಶನಿಯಿರುವುದರಿಂದ ಕೆಲಸದಲ್ಲಿ ಕೊಂಚ ವಿಳಂಬವಾಗಬಹುದು. ಆದರೆ ಸುಖಸ್ಥಾನದ ಗ್ರಹಬಲದಿಂದ ವಾಹನ ಅಥವಾ ಭೂಮಿ ಖರೀದಿಯ ಯೋಗವಿದೆ. ತಾಯಿಯ ಆರೋಗ್ಯದ ಕಡೆ ಗಮನವಿರಲಿ.

– ಲೋಹಿತ್ ಹೆಬ್ಬಾರ್

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು