AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope ವಾರ ಭವಿಷ್ಯ: ಮುಂದಿನ ವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Weekly Horoscope ವಾರ ಭವಿಷ್ಯ: ಮುಂದಿನ ವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
ಭವಿಷ್ಯ
TV9 Web
| Edited By: |

Updated on: Jun 06, 2021 | 7:00 AM

Share

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

-:ವಾರ ಭವಿಷ್ಯ:- ತಾ.07-06-2021 ರಿಂದ ತಾ.13-06-2021 ರ ತನಕ ರಾಶಿಭವಿಷ್ಯ. **

ಮೇಷರಾಶಿ:- ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅದೃಷ್ಟ ಸಂಖ್ಯೆ: 9 ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಷಭರಾಶಿ:- ಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕು. ಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ. ಅದೃಷ್ಟ ಸಂಖ್ಯೆ: 5 ಅದೃಷ್ಟದ ಬಣ್ಣ: ಬಿಳಿಬಣ್ಣ

ಮಿಥುನರಾಶಿ:- ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಅದೃಷ್ಟ ಸಂಖ್ಯೆ: 8 ಅದೃಷ್ಟದ ಬಣ್ಣ: ಹಸಿರು

ಕರ್ಕರಾಶಿ:- ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾದೀತು. ಆದರೆ ಸಹನೆಯಿಂದ ಎದುರಿಸುವಿರಿ. ಮಾತಿನಲ್ಲಿ ಸಂಯಮವಿದ್ದರೆ ನಿಮ್ಮನ್ನು ಯಾರೂ ಸೋಲಿಸಲಾಗದು. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಅದೃಷ್ಟ ಸಂಖ್ಯೆ: 4 ಅದೃಷ್ಟದ ಬಣ್ಣ: ಹಳದಿ

ಸಿಂಹರಾಶಿ:- ಮಾನಸಿಕವಾಗಿ ಸಂತಸವಿದ್ದರೂ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ. ಅದೃಷ್ಟ ಸಂಖ್ಯೆ: 1 ಅದೃಷ್ಟದ ಬಣ್ಣ: ಕೇಸರಿ

ಕನ್ಯಾರಾಶಿ:- ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಏಕಾಗ್ರತೆಗೆ ಭಂಗ ತರುವ ವಿಚಾರಗಳು ಎದುರಾಗಲಿವೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ. ಅದೃಷ್ಟ ಸಂಖ್ಯೆ: 7 ಅದೃಷ್ಟದ ಬಣ್ಣ: ಕಂದು

ತುಲಾರಾಶಿ:- ಆರ್ಥಿಕವಾಗಿ ಚೇತರಿಕೆ ಕಂಡುಬಂದು ಮುನ್ನಡೆ ಅನುಭವಕ್ಕೆ ಬರುವುದು. ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಅದೃಷ್ಟ ಸಂಖ್ಯೆ: 4 ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ ರಾಶಿ:- ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪ್ರತಿಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುವುದು. ಸಂಗಾತಿಯ ಪ್ರೀತಿ ಸಿಗಲಿದೆ. ದಾಯಾದಿಗಳೊಂದಿಗೆ ಆಸ್ತಿ ವಿಚಾರವಾಗಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿ. ಅದೃಷ್ಟ ಸಂಖ್ಯೆ: 6 ಅದೃಷ್ಟದ ಬಣ್ಣ: ಆರೆಂಜ್

ಧನಸ್ಸುರಾಶಿ:- ತೀರ್ಥಕ್ಷೇತ್ರಗಳ ಸಂದರ್ಶನ ನಡೆಸುವಿರಿ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮದ ಅಗತ್ಯವಿದೆ. ವಾಸ ಸ್ಥಳದ ಬದಲಾವಣೆಗೆ ಸಿದ್ಧತೆ ನಡೆಸುತ್ತೀರಿ. ಕಾರ್ಯಕ್ಷೇತ್ರದಲ್ಲಿ ತಾಳ್ಮೆ ಸಮಾಧಾನದಿಂದ ಮುನ್ನಡೆಯಿರಿ. ಅದೃಷ್ಟ ಸಂಖ್ಯೆ: 3 ಅದೃಷ್ಟದ ಬಣ್ಣ: ಹಳದಿ

ಮಕರ ರಾಶಿ: ಮಕ್ಕಳಿಂದ ಶುಭ ಫಲ ನಿರೀಕ್ಷಿಸಬಹುದು. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಕೈ ಹಿಡಿದ ಕೆಲಸಗಳು ಫಲಗೂಡುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಅದೃಷ್ಟ ಸಂಖ್ಯೆ: 8 ಅದೃಷ್ಟದ ಬಣ್ಣ: ಕಪ್ಪು

ಕುಂಭರಾಶಿ:- ಶುಭ ಮಂಗಲ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಾನಸಿಕವಾಗಿ ಗೊಂದಲಗಳು, ಖಿನ್ನತೆ ಕಾಡಲಿದೆ. ತಾಳ್ಮೆ, ಸಮಾಧಾನ ಅಗತ್ಯ. ಸಂಗಾತಿಯ ಸಲಹೆಗೆ ಕಿವಿಗೊಡಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚುವುದು. ಆರ್ಥಿಕ ಪರಿಸ್ಥಿತಿ ಬಗ್ಗೆ ಎಚ್ಚರ. ಅದೃಷ್ಟ ಸಂಖ್ಯೆ: 2 ಅದೃಷ್ಟದ ಬಣ್ಣ: ತಿಳಿನೀಲಿ

ಮೀನರಾಶಿ:- ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಸಂತಾನ ಸೂಚಕ ಫಲ ಸಿಗಲಿದೆ. ಮನೆಯಲ್ಲಿ ಸಂತಸದ ವಾತಾವರಣವಿರುವುದು. ವೃತ್ತಿರಂಗದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ಬೇಸರವಾಗಬಹುದು. ಅದೃಷ್ಟ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!