AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope ವಾರ ಭವಿಷ್ಯ: ಮುಂದಿನ ವಾರದ ಭವಿಷ್ಯ ತಿಳಿದುಕೊಳ್ಳಿ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

Weekly Horoscope ವಾರ ಭವಿಷ್ಯ: ಮುಂದಿನ ವಾರದ ಭವಿಷ್ಯ ತಿಳಿದುಕೊಳ್ಳಿ
ಭವಿಷ್ಯ
TV9 Web
| Edited By: |

Updated on: Jun 13, 2021 | 6:55 AM

Share

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ.

ವಾರ ಭವಿಷ್ಯ ತಾ.14-06-2021 ರಿಂದ 20-06-2021 ರ ತನಕ:- ಮೇಷ – ಮೌನ ಹೆಚ್ಚಾಗಿ ಇದ್ದಷ್ಟು ಆರೋಗ್ಯಕ್ಕೆ ಒಳಿತು. ಹಲವರಿಂದ ಮನಸ್ಸು ಕೆಡಿಸುವ ಪ್ರಯತ್ನ. ಅಂಜದೇ ಮನಸ್ಸಿನ ಶಾಂತಯನ್ನು ಕಂಡುಕೊಳ್ಳಿರಿ. ಮನೆಯಲ್ಲಿ ಯಾವತ್ತೂ ಲವಲವಿಕೆ ಇರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಾಗಲಿವೆ. ಅದೃಷ್ಟ ಸಂಖ್ಯೆ: 9

ವೃಷಭ – ಬೇರೆ ಬೇರೆ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಿ. ಮನೆಯಲ್ಲಿ ಸಿಗುವ ಏಕಾಂತವನ್ನು ನಿಮ್ಮ ಹಿತಕ್ಕೆ ತಕ್ಕಂತೆ ಬಳಕೆ ಮಾಡಿಕೊಳ್ಳಿ. ಸೂಕ್ತ ವ್ಯಕ್ತಿಯೊಂದಿಗೆ ಸಂವಹನ ನಡೆಸಿ. ನೀವು ಧೈರ್ಯವಾಗಿರುವಂತೆ, ನಿಮ್ಮ ಮನೆಯವರನ್ನೂ ಗಟ್ಟಿಯಾಗಿ ಇರುವಂತೆ ನೋಡಿಕೊಳ್ಳುವುದು ಅಗತ್ಯ. ಅದೃಷ್ಟ ಸಂಖ್ಯೆ: 1

ಮಿಥುನ – ಕೆಟ್ಟ ಚಟಗಳು ಕಡಿಮೆಯಾಗಲಿವೆ. ಅದನ್ನೇ ಮುಂದುವರೆಸಿ. ಇದರಿಂದ ನಿಮ್ಮ ಭವಿಷ್ಯಕ್ಕೆಎ ಅನುಕೂಲವಾದೀತು. ಇಂದು ಹೊಸ ರೀತಿಯ ಜೀವನ ಕ್ರಮವನ್ನು ರೂಢಿ ಮಾಡಿಕೊಳ್ಳಲಿದ್ದೀರಿ. ಸಮಯಕ್ಕೆ ಸರಿಯಾಗಿ ಯಾವ ಕೆಲಸವನ್ನು ಮಾಡಿ ಮುಗಿಸೇಕೂ ಅದನ್ನು ಮಾಡಿ ಮುಗಿಸಿ. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ. ಅದೃಷ್ಟ ಸಂಖ್ಯೆ: 7

ಕಟಕ – ಸಂಸಾರ ಎಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಸಹಜ. ಅದನ್ನು ನಿಮ್ಮ ನಡುವಲ್ಲಿಯೇ ಬಬಗೆಹರಿಸಿಕೊಳ್ಳಿ. ನಾಲ್ಕು ಜನರ ಮುಂದೆ ತರುವುದು ಬೇಡ. ಮತ್ತೊಬಬ್ಬರಿಂದ ಪದೇ ಪದೇ ಹೇಳಿಸಿಕೊಳ್ಳುವುದು ಸರಿಯಲ್ಲ. ನಯವಂಚನೆಗೆ ಬಲಿಯಾಗುವುದರಿಂದ ತಪ್ಪಿಸಿಕೊಳ್ಳಿ. ನಿಮ್ಮ ವರ್ತನೆಯಲ್ಲೇ ಕೆಲ ಬದಲಾವಣೆ ಆಗಲಿದೆ. ಅದೃಷ್ಟ ಸಂಖ್ಯೆ: 2

ಸಿಂಹ – ಆದಾಯದ ಮೂಲಗಳಿಗೆ ಪೆಟ್ಟು ಬೀಳಲಿದೆ. ಅದರೆ ಅದು ಅದ್ಯಕ್ಕೆ ಮಾತ್ರ. ಯಾವುದೇ ಆತಂಕಕ್ಕೆ ಒಳಗಾಗದೆ ಜೀವನ ಸಾಗಿಸಿ. ಮನೆ ಮಂದಿಯೊಂದಿಗೆ ಸಂತೋಷದಿಂದ ಇದ್ದಷ್ಟು ಆರೋಗಗ್ಯದಲ್ಲಿ ಚೇತರಿಕೆ ಕಾಣಲಿದೆ. ತಾಜಾ ಹಹಾಗೂ ಶುದ್ಧವಾದ ಅಹಾರ ಕ್ರಮಕ್ಕೆ ಹೊಂದಿಕೊಳ್ಳಿ. ಅದೃಷ್ಟ ಸಂಖ್ಯೆ: 5

ಕನ್ಯಾ – ಎಲ್ಲರನ್ನೂ ಅಂತೈಸಿ ಜೀವನ ಮಾಡಲು ಸಾಧ್ಯವಿಲ್ಲ. ನೀವು ನಡೆಯುವ ದಾರಿ ಸರಿಯಾಗಿದೆ ಎಂದರೆ ಯಾರಿಗೂ ತಲೆ ಬಾಗುವುದು ಬೇಡ. ಕೆಲಸ ಹೊರೆ ಅಧಿಕವಾಗಲಿದೆ. ಮನಸ್ಸನ್ನು ಬೇರೆ ಬೇರೆ ಕಡೆ ಕಡೆಗೆ ಹರಿಸಿ. ಸಾಧ್ಯವಾದಷ್ಟು ಒಳ್ಳೆಯ ಸಂಗತಿ ಕಡೆ ನಿಮ್ಮ ಚಿತ್ತ ಇರಲಿ. ಅದೃಷ್ಟ ಸಂಖ್ಯೆ: 6

ತುಲಾ – ಇಂತಹ ಸಮಯದಲ್ಲಿ ಕೆಲವು ಸ್ನೇಹಿತರಿಗೆ ನಿಮ್ಮ ಸಹಾಯ ಅನಿವಾರ್ಯವಾಗಿ ಬೇಕಾಗಲಿದೆ. ಅದನ್ನು ನೀವಾಗೇ ತಿಳಿದುಕೊಂಡು ಅವರ ಸಹಾಯಕ್ಕೆ ಮುಂದಾಗಿ. ಒಲ್ಲದ ಮನಸ್ಸಿನಿಂದ ಏನೂ ಮಾಡುವುದು ಬೇಡ. ಮಕ್ಕಳ ಮೇಲೆ ಅನಾವಶ್ಯಕವಾಗಿ ಒತ್ತಡ ಹಾಕುವುದು ಬೇಡ. ಅದೃಷ್ಟ ಸಂಖ್ಯೆ: 4

ವೃಶ್ಚಿಕ – ಹಳೆಯ ಬೇನರೆಗಳಿಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಮನೆ ಮದ್ದು ಉಪಯೋಗಿಸಿ ನಿಮ್ಮ ಇಷ್ಟದ ದೇವರ ಆರಾಧನೆ ಮಾಡಿ. ಮನಸ್ಸಿಗೆ ಸಮಾಧಾನ ಸಿಕ್ಕೀತು. ಮನೆಯಲ್ಲಿಯೇ ಇದ್ದು ಸಮುದಾಯದ ಆರೋಗ್ಯಕ್ಕೆ ಸಹಕರಿಸಿ. ಅದೃಷ್ಟ ಸಂಖ್ಯೆ: 7

ಧನುಸ್ಸು – ನಿಮ್ಮ ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟನ್ನು ಮಾತ್ರ ಉಪಯೋಗಿಸಿ. ಅನಗತ್ಯವಾಗಿ ಶೇಖರಣೆ ಮಾಡಿಕೊಳ್ಳುವುದು ಬೇಡ. ಆಶಾವಾದಿಯಾಗಿರಿ. ಸಾಧ್ಯವಾದರೆ ಸಕಾರಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ಹಂಚಿ. ಇಲ್ಲವೇ ಸುಮ್ಮನಿರಿ. ಅದೃಷ್ಟ ಸಂಖ್ಯೆ: 8

ಮಕರ – ಬೇಸರ ಕಳೆಯಲೆಂದು ಮಾಡಿದ ಕೆಲಸಕ್ಕೆ ಒಳ್ಳೆಯ ಪ್ರಶಂಸೆ ದೊರೆಯಲಿದೆ. ಇಂತಹ ವೇಳೆಯಲ್ಲಿ ನಿಮ್ಮಲ್ಲಿ ಇರುವ ಪ್ರತಿಭೆಗೆ ತಕ್ಕಂತೆ ಕೆಲಸ ನೀಡಿ. ನಿಮ್ಮ ಅಂತರಂಗವನ್ನು ಕಂಡುಕೊಳ್ಳಲು ಇದು ಸಕಾಲ. ಸಮಾನ ಮನಸ್ಕರೊಂದದಿಗೆ ಹೆಚ್ಚು ಬೆರೆಯಲಿದ್ದೀರರಿ. ಅದೃಷ್ಟ ಸಂಖ್ಯೆ: 2

ಕುಂಭ – ಎಲ್ಲವೂ ಖಾಲಿ ಖಾಲಿ ಎಂದು ಎನಿಸುವ ವೇಳೆಗೆ ಶುಭ ಸುದ್ದಿಯೊಂದು ತಿಳಿಯಲಿದೆ. ಇಂತಹ ವೇಳೆಯಲ್ಲಿ ಶಿಸ್ತಿಗಿಂತ ಮಾನವೀಯತೆ ಮುಖ್ಯ. ಒಬ್ಬರಿಗೆ ಮತ್ತೊಬ್ಬರು ಸಹಾಯ ಮಾಡಿಕೊಂಡು ಜೀವನ ನಡೆಸಬೇಕು. ಕೂಡು ಬಾಳ್ವೆಯಿಂದ ಆನಂದ. ತಾಳ್ಮೆ ತಾನಾಗೇ ಬದುಕಿನ ಅಂಗವಾಗಲಿದೆ. ಅದೃಷ್ಟ ಸಂಖ್ಯೆ: 6

ಮೀನ – ನಮಗೆ ನಿಜವಾಗಿ ಸಹಾಯದ ಅವಶ್ಯಕತೆ ಇದನ್ನು ನೇರವಾಗಿ ಕೇಳಿ. ಮುಜುಗರ ಆಡಿಕೊಳ್ಳುವುದು ಬೇಡ. ಸಹಾಯ ಮಾಡುವ ಕೈಗಳು ಸಮಾಜದಲ್ಲಿ ಅಧಿಕವಾಗಿ ಇವೆ. ಅನಾವಶ್ಯಕ ಗೊಂದಲ, ಗಾಳಿ ಮಾತುಗಳಿಗೆ ಕಿವಿ ತೆರೆದಿಡುವುದು ಬೇಡ. ಅದೃಷ್ಟ ಸಂಖ್ಯೆ: 3

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ