AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಭವಿಷ್ಯ: ಈ 4 ರಾಶಿಯವರಿಗೆ ಸಿಗಲಿದೆ ಉನ್ನತ ಹುದ್ದೆ, ಸಂಬಳ ಹೆಚ್ಚಳದ ಬಿಗ್ ಆಫರ್!

ಮೇ 31 ರಿಂದ ಜೂನ್ 06 ರವರೆಗಿನ ವಾರದ ಉದ್ಯೋಗ ಭವಿಷ್ಯದ ಬಗ್ಗೆ ಈ ಲೇಖನವು ಪ್ರತಿಯೊಂದು ರಾಶಿ ಚಿಹ್ನೆಗೂ ವೃತ್ತಿ ಮಾರ್ಗದರ್ಶನ ನೀಡುತ್ತದೆ. ಹೊಸ ಅವಕಾಶಗಳನ್ನು ಬಳಸಿಕೊಳ್ಳಲು, ಸವಾಲುಗಳನ್ನು ನಿಭಾಯಿಸಲು ಮತ್ತು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಇದು ಸಲಹೆ ನೀಡುತ್ತದೆ. ತಾಳ್ಮೆ, ದಕ್ಷತೆ ಮತ್ತು ಕಠಿಣ ಪರಿಶ್ರಮದಿಂದ ನೀವು ನಿರೀಕ್ಷಿತ ಪ್ರಗತಿ ಮತ್ತು ಆರ್ಥಿಕ ಸ್ಥಿರತೆಯನ್ನು ಪಡೆಯಬಹುದು. ಈ ವಾರ ನಿಮ್ಮ ವೃತ್ತಿಜೀವನಕ್ಕೆ ಮಹತ್ವದ್ದಾಗಲಿದೆ.

ಉದ್ಯೋಗ ಭವಿಷ್ಯ: ಈ 4 ರಾಶಿಯವರಿಗೆ ಸಿಗಲಿದೆ ಉನ್ನತ ಹುದ್ದೆ, ಸಂಬಳ ಹೆಚ್ಚಳದ ಬಿಗ್ ಆಫರ್!
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 29, 2026 | 5:44 PM

Share

ಮೇ 31ರಿಂದ ಜೂನ್‌ 06ರವರೆಗಿನ ಮೊದಲ ವಾರದಲ್ಲಿ ಉದ್ಯೋಗ ಅವಕಾಶಗಳು ಬರಲಿದ್ದು, ಅದನ್ನು ದೂರಸರಿಸದೇ ಅನುಭವಕ್ಕಾಗಿ ಸೇರಿಕೊಳ್ಳುವುದು ಸೂಕ್ತ. ನಿಮ್ಮ ಮಾರ್ಗವನ್ನು ತಪ್ಪಿಸಲು ಹಲವರು ಪ್ರಯತ್ನಶೀಲರಾದರೂ ಅದನ್ನು ಮೀರುವ ಸಾಮರ್ಥ್ಯ ಬೇಕಾಗಲಿದೆ. ಉದ್ಯಮವನ್ನು ಯಶಸ್ಸನ್ನು ಕಾಣಲಿ.

​ಮೇಷ ರಾಶಿ :

​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಕೆಲಸದ ಸ್ಥಳದಲ್ಲಿ ನಿಮ್ಮ ದಕ್ಷತೆಗೆ ಮೆಚ್ಚುಗೆ ದೊರೆಯುತ್ತದೆ. ಆದರೆ, ಸಹೋದ್ಯೋಗಿಗಳೊಂದಿಗೆ ಮಾತನಾಡುವಾಗ ಆತುರ ಅಥವಾ ಸಿಟ್ಟಿನ ನಿರ್ಧಾರಗಳು ಬೇಡ, ತಾಳ್ಮೆ ಇರಲಿ.

​ವೃಷಭ ರಾಶಿ :

​ರಾಶಿಯಲ್ಲಿ ಸೂರ್ಯನಿರುವುದರಿಂದ ಸರ್ಕಾರಿ ವಲಯದ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮೇಲಧಿಕಾರಿಗಳ ಬೆಂಬಲ ಸಿಗಲಿದೆ. ಆದರೆ ಅಹಂಕಾರದ ನಡವಳಿಕೆಯಿಂದ ದೂರವಿರಿ. ಹೊಸ ಉದ್ಯೋಗದ ಹುಡುಕಾಟದಲ್ಲಿದ್ದವರಿಗೆ ಉತ್ತಮ ಅವಕಾಶಗಳು ಕೈಸೇರಲಿವೆ. ​ ಮಿಥುನ ರಾಶಿ :

​ಬುಧ ಮತ್ತು ಶುಕ್ರರು ನಿಮ್ಮ ರಾಶಿಯಲ್ಲಿರುವುದರಿಂದ ಬುದ್ಧಿವಂತಿಕೆಯಿಂದ ಕಾರ್ಯ ಸಾಧಿಸುವಿರಿ. ವ್ಯಾಪಾರ ಮತ್ತು ಕಲಾ ರಂಗದಲ್ಲಿರುವವರಿಗೆ ಅತ್ಯುತ್ತಮ ಲಾಭವಿದೆ. ನಿಮ್ಮ ಸಂಪರ್ಕ ಕೌಶಲ್ಯದಿಂದ ಉದ್ಯೋಗದಲ್ಲಿ ಹೊಸ ಒಪ್ಪಂದಗಳನ್ನು ಪಡೆದುಕೊಳ್ಳುವಿರಿ.

​ಕರ್ಕಾಟಕ ರಾಶಿ :

​ಗುರು ಉಚ್ಛಸ್ಥಿತಿಯಲ್ಲಿರುವುದರಿಂದ ಉದ್ಯೋಗದಲ್ಲಿ ದೊಡ್ಡ ಯಶಸ್ಸು ಸಿಗಲಿದೆ. ಉನ್ನತ ಸ್ಥಾನ ಅಥವಾ ಸಂಬಳ ಹೆಚ್ಚಳದ ಸುದ್ದಿ ಕೇಳುವಿರಿ. ವಿದೇಶಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಅನುಕೂಲಕರ ವಾತಾವರಣವಿರಲಿದ್ದು, ಗೌರವ ವೃದ್ಧಿಸಲಿದೆ.

​ಸಿಂಹ ರಾಶಿ :

​ರಾಶಿಯಲ್ಲಿ ಕೇತು ಇರುವುದರಿಂದ ಕೆಲಸದಲ್ಲಿ ಕೆಲವು ಗೊಂದಲಗಳು ಅಥವಾ ತೃಪ್ತಿಯಿಲ್ಲದ ಭಾವನೆ ಮೂಡಬಹುದು. ಸಹೋದ್ಯೋಗಿಗಳ ರಾಜಕೀಯಕ್ಕೆ ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಕೆಲಸದ ಮೇಲೆ ಮಾತ್ರ ಗಮನವಿಟ್ಟರೆ ವಾರಾಂತ್ಯಕ್ಕೆ ಪರಿಸ್ಥಿತಿ ಸುಧಾರಿಸಲಿದೆ.

​ಕನ್ಯಾ ರಾಶಿ :

​ಉದ್ಯೋಗದಲ್ಲಿ ಈ ವಾರ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗ ಜಾಗರೂಕರಾಗಿರಿ. ವೃತ್ತಿಜೀವನದಲ್ಲಿ ಸಣ್ಣ ಬದಲಾವಣೆಗಳನ್ನು ನಿರೀಕ್ಷಿಸಬಹುದು, ಹಿರಿಯರ ಮಾರ್ಗದರ್ಶನ ನಿಮಗೆ ಧನಾತ್ಮಕ ದಾರಿ ತೋರಿಸುತ್ತದೆ. ​ತುಲಾ ರಾಶಿ :

​ವೃತ್ತಿರಂಗದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಆಫರ್‌ಗಳು ಬರಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭಾಂಶ ಹೆಚ್ಚಾಗಲಿದೆ. ದೀರ್ಘಾವಧಿಯ ಹೂಡಿಕೆಗಳಿಗೆ ಈ ವಾರ ಅತ್ಯಂತ ಸೂಕ್ತವಾಗಿದೆ. ​ ವೃಶ್ಚಿಕ ರಾಶಿ :

​ಕೆಲಸದ ಒತ್ತಡ ಹೆಚ್ಚಾಗಿದ್ದರೂ ನಿಮ್ಮ ಕಾರ್ಯದಕ್ಷತೆಯಿಂದ ಎಲ್ಲವನ್ನೂ ನಿಭಾಯಿಸುವಿರಿ. ಕಚೇರಿಯಲ್ಲಿ ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ. ಸಹನೆ ಕಳೆದುಕೊಳ್ಳದೆ ಕೆಲಸ ಮಾಡಿದರೆ, ಮೇಲಧಿಕಾರಿಗಳು ನಿಮ್ಮ ಪರಿಶ್ರಮವನ್ನು ಗುರುತಿಸಿ ಪುರಸ್ಕರಿಸುತ್ತಾರೆ. ​ ಧನು ರಾಶಿ :

​ಈ ವಾರ ಬಲದಿಂದ ಉದ್ಯೋಗದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಉದ್ಯಮ ಆರಂಭಿಸಲು ಯೋಚಿಸುತ್ತಿದ್ದರೆ ಈ ವಾರ ಶುಭಪ್ರದವಾಗಿದೆ. ಉದ್ಯೋಗಿಗಳಿಗೆ ಅಪೇಕ್ಷಿತ ವರ್ಗಾವಣೆ ಅಥವಾ ಹೊಸ ಹುದ್ದೆ ಸಿಗುವ ಯೋಗವಿದೆ.

​ಮಕರ ರಾಶಿ :

​ಉದ್ಯೋಗ ಕ್ಷೇತ್ರದಲ್ಲಿ ಹಠಾತ್ ಸವಾಲುಗಳು ಎದುರಾಗಬಹುದು. ಕೆಲಸದಲ್ಲಿ ಯಾವುದೇ ಶಾರ್ಟ್‌ಕಟ್ ಬಳಸಬೇಡಿ. ದಾಖಲೆಗಳಿಗೆ ಸಹಿ ಮಾಡುವ ಮುನ್ನ ಎಚ್ಚರವಿರಲಿ. ಸಹೋದ್ಯೋಗಿಗಳೊಂದಿಗೆ ವಾದ ಮಾಡದೆ, ಶಾಂತವಾಗಿ ಕಾರ್ಯ ನಿರ್ವಹಿಸುವುದು ಪ್ರಗತಿಗೆ ಪೂರಕ.

ಕುಂಭ ರಾಶಿ :

​ರಾಶಿಯಲ್ಲಿ ಚಂದ್ರ ಮತ್ತು ರಾಹು ಇರುವುದರಿಂದ ಕೆಲಸದ ಜಾಗದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲ ಉಂಟಾಗಬಹುದು. ಭ್ರಮೆಯ ಆಧಾರದ ಮೇಲೆ ಕೆಲಸ ಬಿಡುವ ನಿರ್ಧಾರ ಬೇಡ. ಸ್ಥಿರತೆಯಿಂದ ಕಾರ್ಯನಿರ್ವಹಿಸಿದರೆ ವಾರದ ಕೊನೆಯಲ್ಲಿ ಯಶಸ್ಸು ನಿಮ್ಮದಾಗುತ್ತದೆ.

ಇದನ್ನೂ ಓದಿ: ಮಾಸ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಜೂನ್ ತಿಂಗಳ ಭವಿಷ್ಯ ಇಲ್ಲಿ ತಿಳಿಯಿರಿಮೀನ ರಾಶಿ :

​ನಿಮ್ಮ ರಾಶಿಯಲ್ಲಿ ಶನಿ ಇರುವುದರಿಂದ ಉದ್ಯೋಗದಲ್ಲಿ ಜವಾಬ್ದಾರಿಗಳು ಮತ್ತು ಶ್ರಮ ಹೆಚ್ಚಾಗಲಿದೆ. ಶಿಸ್ತು ಮತ್ತು ಸಮಯ ಪಾಲನೆ ನಿಮಗೆ ಯಶಸ್ಸು ತರಲಿದೆ. ನಿಧಾನಗತಿಯಲ್ಲಾದರೂ ನಿಮ್ಮ ವೃತ್ತಿಜೀವನದಲ್ಲಿ ಸ್ಥಿರವಾದ ಪ್ರಗತಿ ಮತ್ತು ಆರ್ಥಿಕ ಭದ್ರತೆ ಕಂಡುಬರಲಿದೆ.

– ಲೋಹಿತ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More