AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2022: ಅಕ್ಷಯ ತೃತೀಯದಂದು ಯಾವ ರಾಶಿಯವರು ಯಾವ ಲೋಹ ಖರೀದಿಸಬೇಕು?

ಇದೇ ಮೇ 3ನೇ ತಾರೀಕಿನಂದು ಅಕ್ಷಯ ತೃತೀಯ ಇದೆ. ಇದರ ಪ್ರಯುಕ್ತ ಯಾವ ರಾಶಿಯವರು ಏನನ್ನು ಖರೀದಿಸಿದರೆ ಶುಭ ಎಂಬ ಮಾಹಿತಿ ನಿಮಗೆ ಇಲ್ಲಿ ದೊರೆಯುತ್ತದೆ.

Akshaya Tritiya 2022: ಅಕ್ಷಯ ತೃತೀಯದಂದು ಯಾವ ರಾಶಿಯವರು ಯಾವ ಲೋಹ ಖರೀದಿಸಬೇಕು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 30, 2022 | 2:10 PM

Share

ಅಕ್ಷಯ ತೃತೀಯದ (Akshaya Tritiya) ದಿನದಂದು ಚಿನ್ನ, ಬೆಳ್ಳಿಯಂತಹ ದುಬಾರಿ ಲೋಹಗಳನ್ನು ಖರೀದಿಸುವ ಸಂಪ್ರದಾಯವಿದೆ. ಅಕ್ಷಯ ತೃತೀಯದಂದು ಲೋಹದ ರೂಪದಲ್ಲಿ ತಮ್ಮ ಮನೆಗಳಿಗೆ ಲಕ್ಷ್ಮಿ ದೇವಿಯನ್ನು ಆಹ್ವಾನಿಸಲಾಗುತ್ತದೆ. ಇದರಿಂದ ಈ ದಿನದಂದು ಪಡೆದ ಸಂಪತ್ತು, ದಾನದ ಫಲ ನಾಶ ಆಗುವುದಿಲ್ಲ. ಈ ವರ್ಷ ಅಕ್ಷಯ ತೃತೀಯವನ್ನು ಮೇ 3ರ ಮಂಗಳವಾರದಂದು ಆಚರಿಸಲಾಗುತ್ತದೆ. ಈ ದಿನ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಚಿನ್ನ, ಬೆಳ್ಳಿ ಅಥವಾ ಇತರ ಲೋಹ- ಆಭರಣಗಳನ್ನು ಖರೀದಿಸಲು ಬಯಸುತ್ತಾರೆ. ಆದರೆ ಅಕ್ಷಯ ತೃತೀಯ ಸಂದರ್ಭದಲ್ಲಿ ನಿಮ್ಮ ರಾಶಿಚಕ್ರದ ಚಿಹ್ನೆಯ ಪ್ರಕಾರ ಯಾವ ಲೋಹವನ್ನು ಖರೀದಿಸಬೇಕು, ಅದರಿಂದ ನಿಮ್ಮ ಪ್ರಗತಿಗೆ ಸಹಕಾರಿಯಾಗುತ್ತದೆಯೇ ಎಂಬುದನ್ನು ಇಲ್ಲಿ ತಿಳಿಸಲಾಗುತ್ತಿದೆ. ರಾಶಿಚಕ್ರದ ಪ್ರಕಾರ ಯಾವ ಲೋಹವನ್ನು ಖರೀದಿಸಲು ಲಾಭದಾಯಕ ಎಂಬ ವಿವರಣೆ ಇಲ್ಲಿದೆ.

  1. ಮೇಷ : ಮೇಷ ರಾಶಿಯ ಜನರು ಅಕ್ಷಯ ತೃತೀಯದಂದು ತಾಮ್ರ ಅಥವಾ ಚಿನ್ನವನ್ನು ಖರೀದಿಸುವುದು ಶುಭಪ್ರದ. ನಿಮ್ಮ ರಾಶಿಯ ಅಧಿಪತಿ ಮಂಗಳ ಗ್ರಹಕ್ಕೆ ಮಂಗಳಕರ ಲೋಹ ತಾಮ್ರವಾಗಿದೆ.
  2. ವೃಷಭ: ನಿಮ್ಮ ರಾಶಿಯ ಅಧಿಪತಿ ಶುಕ್ರ. ಅಕ್ಷಯ ತೃತೀಯದಲ್ಲಿ ಬೆಳ್ಳಿಯನ್ನು ಖರೀದಿಸುವುದು ನಿಮಗೆ ಶುಭಕರ. ವಜ್ರವನ್ನು ಶುಕ್ರನ ಮುಖ್ಯ ರತ್ನವೆಂದು ಪರಿಗಣಿಸಲಾಗಿದೆ.
  3. ಮಿಥುನ: ಮಿಥುನ ರಾಶಿಯ ಜನರ ಅಧಿಪತಿ ಬುಧ. ಈ ಕಾರಣದಿಂದಾಗಿ ಮಿಥುನ ರಾಶಿಯ ಜನರು ಅಕ್ಷಯ ತೃತೀಯದಂದು ಕಂಚಿನ ಪಾತ್ರೆಗಳನ್ನು ಅಥವಾ ಆಭರಣಗಳನ್ನು ಖರೀದಿಸಬಹುದು.
  4. ಕರ್ಕಾಟಕ: ಕರ್ಕಾಟಕ ರಾಶಿಯವರು ಬೆಳ್ಳಿಯನ್ನು ಖರೀದಿಸುವುದು ಒಳ್ಳೆಯದು. ಈ ರಾಶ್ಯಾಧಿಪತಿ ಚಂದ್ರ, ಆದ್ದರಿಂದ ಬೆಳ್ಳಿಯು ಮಂಗಳಕರವಾಗಿರುತ್ತದೆ.
  5. ಸಿಂಹ: ಸಿಂಹ ರಾಶಿಯ ಅಧಿಪತಿ ಸೂರ್ಯ. ಈ ರಾಶಿಯ ಜನರು ಅಕ್ಷಯ ತೃತೀಯ ದಿನದಂದು ತಾಮ್ರ ಅಥವಾ ಚಿನ್ನವನ್ನು ಖರೀದಿಸಬೇಕು.
  6. ಕನ್ಯಾ: ಕನ್ಯಾರಾಶಿಯ ಅಧಿಪತಿ ಗ್ರಹ ಬುಧ. ಈ ರಾಶಿಯ ಜನರು ಅಕ್ಷಯ ತೃತೀಯದಂದು ಕಂಚನ್ನು ಖರೀದಿಸುವುದು ಮಂಗಳಕರ.
  7. ತುಲಾ: ತುಲಾ ರಾಶಿಯ ಜನರು ಅಕ್ಷಯ ತೃತೀಯ ದಿನದಂದು ಬೆಳ್ಳಿಯನ್ನು ಖರೀದಿಸಬೇಕು. ಈ ರಾಶಿಯ ಅಧಿಪತಿ ಶುಕ್ರ.
  8. ವೃಶ್ಚಿಕ: ಅಕ್ಷಯ ತೃತೀಯದಂದು ವೃಶ್ಚಿಕ ರಾಶಿಯವರಿಗೆ ತಾಮ್ರವನ್ನು ಖರೀದಿಸುವುದು ಒಳ್ಳೆಯದು. ಈ ರಾಶಿಯ ಅಧಿಪತಿ ಮಂಗಳ ಗ್ರಹವಾಗಿದ್ದು, ಮಂಗಳಕರ ಲೋಹ ತಾಮ್ರವಾಗಿದೆ.
  9. ಧನು: ಧನು ರಾಶಿಯ ಅಧಿಪತಿ ಗುರು. ಅಕ್ಷಯ ತೃತೀಯ ದಿನದಂದು ನಿಮ್ಮ ರಾಶಿಯ ಜನರು ಹಿತ್ತಾಳೆ ಅಥವಾ ಚಿನ್ನವನ್ನು ಖರೀದಿಸುವುದು ಉತ್ತಮ.
  10. ಮಕರ: ಅಕ್ಷಯ ತೃತೀಯದಂದು ಮಕರ ರಾಶಿಯವರು ಸ್ಟೀಲ್ ಅಥವಾ ಕಬ್ಬಿಣ ಖರೀದಿಸುವುದು ಒಳ್ಳೆಯದು. ಏಕೆಂದರೆ ಈ ರಾಶಿಯ ಅಧಿಪತಿ ಶನೈಶ್ಚರ.
  11. ಕುಂಭ: ಈ ರಾಶಿಯ ಜನರು ಮಕರ ರಾಶಿಯಂತೆಯೇ ಸ್ಟೀಲ್ ಅಥವಾ ಕಬ್ಬಿಣ ಖರೀದಿಸಬೇಕು. ಈ ರಾಶಿಯ ಅಧಿಪತಿಯೂ ಶನಿಯೇ.
  12. ಮೀನ: ಈ ರಾಶಿಯ ಅಧಿಪತಿ ಗುರು. ಮೀನ ರಾಶಿಯವರಿಗೆ ಅಕ್ಷಯ ತೃತೀಯ ಸಂದರ್ಭದಲ್ಲಿ ಹಿತ್ತಾಳೆಯನ್ನು ಖರೀದಿಸುವುದು ಶುಭಕರ. ಅವರು ಬಯಸಿದರೆ ಚಿನ್ನವನ್ನೂ ಖರೀದಿಸಬಹುದು.

ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Akshaya Trutheeya: ಅನ್ನಪೂರ್ಣೇಶ್ವರಿ ಜನಿಸಿದ ದಿನ -ಅನಂತ ಶುಭವನ್ನು ತರುವ ಅಕ್ಷಯ ತದಿಗೆ ದಿನದ ನಾನಾ ಮಹತ್ವ, ವಿವರ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ