Adani Group: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಅದಾನಿ ಸಮೂಹ

ಮುಂವೈ ವಿಮಾನ ನಿಲ್ದಾಣದ ಆಡಳಿತ ಮಂಡಳಿಯನ್ನು ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಜುಲೈ 13, 2021ರಂದು ಸುಪರ್ದಿಗೆ ತೆಗೆದುಕೊಂಡಿದೆ.

Adani Group: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಅದಾನಿ ಸಮೂಹ
ಮುಂಬೈ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
Follow us
| Updated By: Srinivas Mata

Updated on:Jul 13, 2021 | 9:34 PM

ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಜುಲೈ 13, 2021ರಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಘೋಷಣೆ ಮಾಡಲಾಗಿದೆ. ಗೌತಮ್ ಅದಾನಿ ಮಾತನಾಡಿ, ವಿಶ್ವ ದರ್ಜೆಯ ಮುಂವೈ ವಿಮಾನ ನಿಲ್ದಾಣದ ಆಡಳಿತ ಮಂಡಳಿಯನ್ನು ಸುಪರ್ದಿಗೆ ತೆಗೆದುಕೊಳ್ಳುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಮುಂಬೈ ಹೆಮ್ಮೆ ಪಡುವಂತೆ ನಾವು ಮಾಡುತ್ತೇವೆ ಎಂದು ಮಾತು ಕೊಡುತ್ತೇವೆ. ಭವಿಷ್ಯದ ಉದ್ಯಮ, ಬಿಡುವು ಹಾಗೈ ಮನರಂಜನೆ ಇವೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅದಾನಿ ಸಮೂಹದಿಂದ ವಿಮಾನ ನಿಲ್ದಾಣದ ಎಕೋ ಸಿಸ್ಟಮ್ ರೂಪಿಸಲಾಗುವುದು. ನಾವು ಸಾವಿರಾರು ಸಂಖ್ಯೆಯಲ್ಲಿ ಸ್ಥಳೀಯ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ ಎಂದು ಹೇಳಿದ್ದಾರೆ.

ಅದಾನಿ ಎಂಟರ್​ಪ್ರೈಸಸ್​ನ ಸಂಪೂರ್ಣ ಒಡೆತನದಲ್ಲಿ ಇರುವ ಸಂಸ್ಥೆ ಅದಾನಿ ಏರ್​ಪೋರ್ಟ್ ಹೋಲ್ಡಿಂಗ್ಸ್ (AAHL). ಈ ವರ್ಷದ ಶುರುವಿನಲ್ಲಿ ಎಸಿಎಸ್​ಎ ಗ್ಲೋಬಲ್ (ACSA) ಮತ್ತು ಬಿಡ್ ಸರ್ವೀಸ್ ವಿಭಾಗ (ಮಾರಿಷಿಯಸ್) ಅಥವಾ ಬಿಡ್​ವೆಸ್ಟ್​ನಿಂದ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (MIAL) ಶೇ 23.5ರಷ್ಟು ಪಾಲನ್ನು 1,685.25 ಕೋಟಿ ರೂಪಾಯಿಗೆ ಖರೀದಿ ಮಾಡಿತು. MIALನ ಹತೋಟಿಯಲ್ಲಿ ಇಟ್ಟುಕೊಳ್ಳಬಹುದಾದಷ್ಟು ಷೇರು ಖರೀದಿಯ ಭಾಗವಾಗಿ ಈ ಮೇಲ್ಕಂಡ ಖರೀದಿ ಆಗಿತ್ತು.

ಲಖನೌ, ಜೈಪುರ್, ಗುವಾಹತಿ, ಅಹ್ಮದಾಬಾ್, ತಿರುವನಂತಪುರಂ ಮತ್ತು ಮಂಗಳೂರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಕಾರ್ಯ ನಿರ್ವಹಣೆ ಮಾಡುವುದಕ್ಕೆ ಈಚೆಗೆ ಅದಾನಿ ಸಮೂಹಕ್ಕೆ ಅನುಮತಿ ಸಿಕ್ಕಿದೆ. ಬಂದರಿನಿಂದ ವಿದ್ಯುಚ್ಛಕ್ತಿ ತನಕ ಅದಾನಿ ಸಮೂಹದಲ್ಲಿ ಎಲ್ಲ ಕಂಪೆನಿಗಳಿವೆ. ಕಳೆದ ತಿಂಗಳು ಎಂಎಸ್​ಸಿಐ ಇಂಕ್​ನಿಂದ ಅದಾನಿಯ ಮೂರು ಸಂಸ್ಥೆಗಳನ್ನು ಭಾರತದ ಬೆಂಚ್​ಮಾರ್ಕ್ ಸೂಚ್ಯಂಕಕ್ಕೆ ಮೇ ತಿಂಗಳಲ್ಲಿ ಸೇರ್ಪಡೆ ಮಾಡಲಾಯಿತು. ಇದೀಗ ವಿಮಾನ ನಿಲ್ದಾಣಗಳ ನಿರ್ವಹಣೆ ಜವಾಬ್ದಾರಿ ಸಹ ಅದಾನಿ ಕಂಪೆನಿಯ ಕೈ ಸೇರಿವೆ.

ಇದನ್ನೂ ಓದಿ: Fact Check | ಭಾರತೀಯ ರೈಲ್ವೆಯನ್ನು ಅದಾನಿ ಖರೀದಿಸಿದ್ದಾರೆ ಎಂಬ ವೈರಲ್ ವಿಡಿಯೊ ಹಿಂದಿನ ಮರ್ಮವೇನು?

(Gautam Adani led Adani group take over management of Mumbai International Airport Limited (MIAL) on July 13, 2021)

Published On - 9:33 pm, Tue, 13 July 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ