Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟ್ರಾನ್​ ಕಂಪನಿಗೆ ಕೊಡಲ್ಲ ಹೊಸ ಉತ್ಪಾದನಾ ಗುತ್ತಿಗೆಗಳು: ಆ್ಯಪಲ್ ಕಟು ನುಡಿ

ವಿಸ್ತ್ರಾನ್ ಕಂಪನಿಯು ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ಹೊಸ ಕೆಲಸಗಳನ್ನು ನೀಡುವುದಿಲ್ಲ ಎಂದು ಆ್ಯಪಲ್ ಕಂಪನಿ ತಿಳಿಸಿದೆ.

ವಿಸ್ಟ್ರಾನ್​ ಕಂಪನಿಗೆ ಕೊಡಲ್ಲ ಹೊಸ ಉತ್ಪಾದನಾ ಗುತ್ತಿಗೆಗಳು: ಆ್ಯಪಲ್ ಕಟು ನುಡಿ
ವಿಸ್ಟ್ರಾನ್​ ಕಂಪನಿಯಲ್ಲಿ ನಡೆದ ಗಲಾಟೆಯ ಪರಿಣಾಮದ ದೃಶ್ಯ
Follow us
guruganesh bhat
|

Updated on:Dec 21, 2020 | 11:52 AM

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಕಂಪನಿಯು ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ಹೊಸ ಉತ್ಪಾದನಾ ಯೋಜನೆಗಳನ್ನು ನೀಡುವುದಿಲ್ಲ. ಅಲ್ಲದೇ, ಈಗಾಗಲೇ ನೀಡಿರುವ ಉತ್ಪಾದನಾ ಯೋಜನೆಗಳನ್ನು ತಡೆಹಿಡಿಯಲಾಗುವುದು ಎಂದು ಅ್ಯಪಲ್ ಸ್ಪಷ್ಟಪಡಿಸಿದೆ. ವಿಸ್ಟ್ರಾನ್ ಕಂಪನಿಯು ಆ್ಯಪಲ್ ಕಂಪನಿಯ  iphone ಮತ್ತಿತರ ಉತ್ಪನ್ನಗಳ ಬಿಡಿಭಾಗಗಳ ತಯಾರಿಕೆ ಗುತ್ತಿಗೆ ಪಡೆದುಕೊಂಡಿದೆ.

ಭಾರತದ ಮೊದಲ ಆ್ಯಪಲ್ ಉತ್ಪನ್ನ ತಯಾರಕ ಕಂಪನಿಯೆಂಬ ಅಭಿದಾನಕ್ಕೂ ಪಾತ್ರವಾಗಿದ್ದ ಕೋಲಾರದಲ್ಲಿರುವ ವಿಸ್ಟ್ರಾನ್ ಘಟಕ, ಶಿಸ್ತುಕ್ರಮದ ಹೆಸರಲ್ಲಿ ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು. ಆದರೆ, ಇದೀಗ ತನ್ನ ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳದೇ ವಿಸ್ಟ್ರಾನ್​ಗೆ ಹೊಸ ಯೋಜನೆಗಳನ್ನು ನೀಡುವುದಿಲ್ಲ ಎಂದು ಆ್ಯಪಲ್ ಸ್ಪಷ್ಟಪಡಿಸಿದೆ.

ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಂಡ ನಂತರವೇ ವಿಸ್ಟ್ರಾನ್​ಗೆ ಹೊಸ ಯೋಜನೆಗಳನ್ನು ನೀಡಲಾಗುವುದು ಎಂದು ಆ್ಯಪಲ್ ತಿಳಿಸಿದೆ. ಕಳೆದ ಕೆಲವು ದಿನಗಳ ಹಿಂದೆ ಸರಿಯಾಗಿ ಸಂಬಳ ನೀಡಿಲ್ಲವೆಂದು ಜಿಲ್ಲೆಯ ನರಸಾಪುರದಲ್ಲಿರುವ ಆ್ಯಪಲ್ ಉತ್ಪನ್ನ ತಯಾರಕ ಕಂಪನಿಯಲ್ಲಿ ಕಾರ್ಮಿಕರು ದಾಂಧಲೆ ನಡೆಸಿದ್ದರು.

ಈ ವೇಳೆ, ಕಂಪನಿಯ ಆಸ್ತಿಪಾಸ್ತಿಗೆ ಬಹಳಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಅಟೆಂಡೆನ್ಸ್​ ಮೆಷಿನ್​ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದರಿಂದ ಕಾರ್ಮಿಕರ ಸಂಬಳವನ್ನು ಕಡಿತ ಮಾಡಲಾಗುತ್ತಿತ್ತು. ಜೊತೆಗೆ, ಕಾರ್ಮಿಕರ ಕೆಲಸದ ವೇಳೆಯನ್ನು 8 ಗಂಟೆಗಳಿಂದ 12 ಗಂಟೆಗೆ ಹೆಚ್ಚಿಸಲಾಗಿತ್ತು. ಆದ್ದರಿಂದ, ಕಾರ್ಮಿಕರು ಮನನೊಂದು ದಾಂಧಲೆ ನಡೆಸಿದ್ದರು ಎಂದು ರಾಜ್ಯ ಸರ್ಕಾರವು ಕೇಂದ್ರ ಕಾರ್ಮಿಕ ಇಲಾಖೆಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ.

ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ: ಕಂಪನಿಯ ಉಪಾಧ್ಯಕ್ಷ ವಿನ್ಸೆಂಟ್​​ ಲೀ ತಲೆದಂಡ

Published On - 3:47 pm, Sun, 20 December 20

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್