AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ

ಐಟಿ ಕಂಪನಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇವುಗಳೆಲ್ಲದರ ಹೊರತಾಗಿಯೂ ಉದ್ಯಮವು ಉತ್ತಮವಾಗಿ ಬೆಳವಣಿಗೆ ಹೊಂದುತ್ತಿವೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ತಿಳಿಸಿದ್ದಾರೆ

It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ
ಸಾಂದರ್ಭಿಕ ಚಿತ್ರImage Credit source: PTI
TV9 Web
| Edited By: |

Updated on:Nov 21, 2022 | 10:20 AM

Share

ಬೆಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ (Global recession), ಐಟಿ ಉದ್ಯಮಗಳ (IT Companies) ವಹಿವಾಟಿನಲ್ಲಿ ಕುಸಿತ, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗದಿಂದ ಬೇಸತ್ತಿರುವ ಯುವಕರಿಗೆ, ಅದರಲ್ಲೂ ಐಟಿ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಸದ್ಯದಲ್ಲೇ ಐಟಿ ಉದ್ದಿಮೆಗಳು (IT industry) ಸುಮಾರು 2 ಲಕ್ಷದಷ್ಟು ನೇಮಕಾತಿ ಮಾಡಿಕೊಳ್ಳಲಿವೆ ಎಂದು ಇನ್ಫೋಸಿಸ್ (Infosys) ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಇತ್ತೀಚೆಗೆ ತಿಳಿಸಿದ್ದಾರೆ. ನಗರದಲ್ಲಿ ನಡೆದ ತಂತ್ರಜ್ಞಾನ ಶೃಂಗಸಭೆಯಲ್ಲಿ ಮಾತನಾಡುತ್ತಿರುವಾಗ ಅವರು ಈ ಸುಳಿವು ನೀಡಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಡಿಜಿಟಲೈಸೇಷನ್​ಗೆ ಮತ್ತಷ್ಟು ವೇಗ ದೊರೆತಿದ್ದು ಭಾರತದ ಐಟಿ ಸೇವಾ ಕಂಪನಿಗಳಿಗೆ ನೆರವಾಗಿದೆ. ದೇಶದಲ್ಲಿರುವ ಜಾಗತಿಕ ಅಭಿವೃದ್ಧಿ ಕೇಂದ್ರಗಳು ಯಾವುದೇ ಹೊಡೆತವನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ ಎಂಬುದು ಸಾಂಕ್ರಾಮಿಕದ ವೇಳೆ ಸಾಬೀತಾಗಿದೆ. ಇದು ಜಾಗತಿಕ ಉದ್ದಿಮೆಗಳು ಭಾರತದ ಐಟಿ ಸೇವಾ ಕಂಪನಿಗಳತ್ತ ತಿರುಗಿ ನೋಡುವಂತೆ ಮಾಡಿದೆ ಎಂದು ಗೋಪಾಲಕೃಷ್ಣನ್ ಹೇಳಿದ್ದಾರೆ.

ಸವಾಲುಗಳ ನಡುವೆಯೂ ಬೆಳವಣಿಗೆ

ಐಟಿ ಕಂಪನಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಆರ್ಥಿಕ ಸಂಘರ್ಷಗಳು, ಮೂನ್​ಲೈಟಿಂಗ್ ಹಾಗೂ ಉದ್ಯೋಗಿಗಳನ್ನು ಕಚೇರಿಗೆ ವಾಪಸ್ ಕರೆಸಿಕೊಳ್ಳುವುದೂ ಸೇರಿದಂತೆ ಹಲವು ಸವಾಲುಗಳು ಐಟಿ ಉದ್ದಿಮೆ ಮುಂದಿವೆ. ಇವುಗಳೆಲ್ಲದರ ಹೊರತಾಗಿಯೂ ಉದ್ಯಮವು ಉತ್ತಮವಾಗಿ ಬೆಳವಣಿಗೆ ಹೊಂದುತ್ತಿವೆ ಎಂದು ಅವರು ಹೇಳಿದ್ದಾರೆ.

ಐಟಿ ಉದ್ಯಮವು ಶೀಘ್ರದಲ್ಲೇ ಕನಿಷ್ಠ 2 ಲಕ್ಷ ನೇಮಕಾತಿ ಮಾಡಿಕೊಳ್ಳಲಿದೆ ಎಂದು ಭಾವಿಸಿದ್ದೇನೆ. ಐಟಿ ಉದ್ಯಮದ ಮೇಲಿನ ಹೂಡಿಕೆ, ಡಿಜಿಟಲೈಸೇಷನ್ ಪ್ರಕ್ರಿಯೆ ಮುಂದಿನ ಕೆಲವು ವರ್ಷಗಳವರೆಗೆ ಮುಂದುವರಿಯಲಿವೆ. ಉದ್ಯಮದ ಏರಿಳಿತಗಳು ಸಹಜ. ಆದರೆ ಇವೆಲ್ಲ ತಾತ್ಕಾಲಿಕವಷ್ಟೇ ಎಂದು ಅವರು ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅನೇಕ ಐಟಿ ಉದ್ದಿಮೆಗಳು ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲೇ ಇನ್ಫೋಸಿಸ್ ಸಹ-ಸಂಸ್ಥಾಪಕರು ಈ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ. ಮೈಕ್ರೋಸಾಫ್ಟ್, ಫಿಲಿಪ್ಸ್, ಟ್ವಿಟರ್, ಮೆಟಾ ಸೇರಿದಂತೆ ಅನೇಕ ಕಂಪನಿಗಳು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿವೆ. ಅಮೆಜಾನ್ ಸಹ ಉದ್ಯೋಗಿಗಳ ವಜಾ ಪ್ರಕ್ರಿಯೆ ಆರಂಭಿಸಿದೆ. ಈ ಮಧ್ಯೆ, ಭಾರತದಲ್ಲಿಯೂ ವಿಪ್ರೋ, ಇನ್ಫೋಸಿಸ್​ನಂಥ ಕಂಪನಿಗಳು ನೇಮಕಾತಿ ಪ್ರಕ್ರಿಯೆ ಮುಂದೂಡಿಕೆ, ಸ್ಥಗಿತ ಇತ್ಯಾದಿ ಕ್ರಮಗಳನ್ನು ಅನುಸರಿಸುತ್ತಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಮತ್ತೆ ಐಟಿ ಕಂಪನಿಗಳು ನೇಮಕಾತಿ ಮುಂದುವರಿಸುವ ಸುಳಿವನ್ನು ಗೋಪಾಲಕೃಷ್ಣನ್ ಅವರು ನೀಡಿರುವುದು ಐಟಿ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ತುಸು ನಿರಾಳತೆ ಒದಗಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 21 November 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್