Sign In

By signing in or creating an account, you agree with Associated Broadcasting Company's Terms & Conditions and Privacy Policy.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200

ಭಾರತದ ಮೊದಲ ದೇಶೀ ಕೊರೊನಾ ಲಸಿಕೆಯಾದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ನೀಡಲಾಗುವುದು ಎಂದು ಹೇಳಿಕೆ ನೀಡಲಾಗಿದೆ.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200
ಪ್ರಾತಿನಿಧಿಕ ಚಿತ್ರ
Follow us
Srinivas Mata
|

Updated on: Apr 24, 2021 | 11:12 PM

ನವದೆಹಲಿ: ಭಾರತ್ ಬಯೋಟೆಕ್​ನಿಂದ ಪ್ರಮುಖ ಘೋಷಣೆ ಮಾಡಲಾಗಿದೆ. ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಕೊರೊನಾ ಅಲೆಯು ತೀವ್ರವಾಗಿರುವ ಹಿನ್ನೆಲೆಯಲ್ಲಿ ಕೋವ್ಯಾಕ್ಸಿನ್​ (COVAXIN) ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ಮತ್ತು ರಫ್ತು ಮಾಡುವುದಾದರೆ 15ರಿಂದ 20 ಡಾಲರ್​ಗೆ ಎಂದು ಭಾರತ ಸರ್ಕಾರದ ನಿರ್ದೇಶನದ ಅನುಸಾರವಾಗಿ ದರ ಘೋಷಣೆ ಮಾಡಲಾಗಿದೆ. ಒಂದು ಡೋಸ್​ಗೆ 150 ರೂಪಾಯಿ ತಗುಲುತ್ತದೆ. ಇದನ್ನು ಭಾರತ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಅಂದಹಾಗೆ ಕೋವ್ಯಾಕ್ಸಿನ್ ಎಂಬುದು ಭಾರತದ ಮೊದಲ ದೇಶೀ ಕೋವಿಡ್​-19 ಲಸಿಕೆಯಾಗಿದೆ. ಇನ್ನು ಇದೇ ವೇಳೆ ಕಂಪೆನಿಯು ಹೇಳಿಕೆ ನೀಡಿದ್ದು, ಉತ್ಪಾದನೆ ಮಾಡುವ ಲಸಿಕೆಯ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರಕ್ಕೆ ಪೂರೈಸುವುದಕ್ಕೆ ಮೀಸಲಿರಿಸುವುದಾಗಿ ಹೇಳಿದೆ.

ಕೋವ್ಯಾಕ್ಸಿನ್ ವೈಶಿಷ್ಟ್ಯಗಳೇನು ಎಂಬ ಬಗ್ಗೆ ಕೂಡ ಕಂಪೆನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. * ಕೋವ್ಯಾಕ್ಸಿನ್ ವಯಲ್ ಒಮ್ಮೆ ತೆರೆದರೆ ಅದನ್ನು 2ರಿಂದ 8 ಡಿಗ್ರಿ ತಾಪಮಾನದಲ್ಲಿ 28 ದಿನಗಳ ಕಾಲ ಸುರಕ್ಷಿತವಾಗಿ ಇಡಬಹುದು.

* ಮೂರನೇ ಹಂತದ ಅಧ್ಯಯನದ ವೇಳೆಯಲ್ಲಿ ಒಟ್ಟಾರೆಯಾಗಿ ಕೋವಿಡ್-19 ವಿರುದ್ಧ ಶೇ 78 ಪರಿಣಾಮಕಾರಿ ಮತ್ತು ಗಂಭೀರ ಕಾಯಿಲೆ ವಿರುದ್ಧ ಶೇ 100ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸೇರಬೇಕಾದ ಅಗತ್ಯವನ್ನು ಕಡಿಮೆ ಮಾಡುತ್ತದೆ.

* ಈಗಾಗಲೇ ಸಾಬೀತಾದ, ಪರೀಕ್ಷಿಸಲಾದ, ವೆರೋ- ಸೆಲ್ ತಂತ್ರಜ್ಞಾನ, ಹೋಲ್ ವಿರಿಯನ್, ಇನ್​ಆಕ್ಟಿವೇಟೆಡ್ ಲಸಿಕೆ.

ಇದರ ಜತೆಗೆ ಇನ್ನೂ ಕೆಲವು ಮಾಹಿತಿಗಳೊಂದಿಗೆ ಭಾರತ್ ಬಯೋಟೆಕ್ ಅದ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಕೃಷ್ಣ ಎಂ ಎಳ್ಳ ಅವರು ಸಾರ್ವಜನಿಕರ ಬೆಂಬಲವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

(Bharat Biotech’s Covaxin for state governments Rs 600 and for private hospitals Rs 1200)

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್