AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200

ಭಾರತದ ಮೊದಲ ದೇಶೀ ಕೊರೊನಾ ಲಸಿಕೆಯಾದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ನೀಡಲಾಗುವುದು ಎಂದು ಹೇಳಿಕೆ ನೀಡಲಾಗಿದೆ.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Apr 24, 2021 | 11:12 PM

Share

ನವದೆಹಲಿ: ಭಾರತ್ ಬಯೋಟೆಕ್​ನಿಂದ ಪ್ರಮುಖ ಘೋಷಣೆ ಮಾಡಲಾಗಿದೆ. ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಕೊರೊನಾ ಅಲೆಯು ತೀವ್ರವಾಗಿರುವ ಹಿನ್ನೆಲೆಯಲ್ಲಿ ಕೋವ್ಯಾಕ್ಸಿನ್​ (COVAXIN) ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ಮತ್ತು ರಫ್ತು ಮಾಡುವುದಾದರೆ 15ರಿಂದ 20 ಡಾಲರ್​ಗೆ ಎಂದು ಭಾರತ ಸರ್ಕಾರದ ನಿರ್ದೇಶನದ ಅನುಸಾರವಾಗಿ ದರ ಘೋಷಣೆ ಮಾಡಲಾಗಿದೆ. ಒಂದು ಡೋಸ್​ಗೆ 150 ರೂಪಾಯಿ ತಗುಲುತ್ತದೆ. ಇದನ್ನು ಭಾರತ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಅಂದಹಾಗೆ ಕೋವ್ಯಾಕ್ಸಿನ್ ಎಂಬುದು ಭಾರತದ ಮೊದಲ ದೇಶೀ ಕೋವಿಡ್​-19 ಲಸಿಕೆಯಾಗಿದೆ. ಇನ್ನು ಇದೇ ವೇಳೆ ಕಂಪೆನಿಯು ಹೇಳಿಕೆ ನೀಡಿದ್ದು, ಉತ್ಪಾದನೆ ಮಾಡುವ ಲಸಿಕೆಯ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರಕ್ಕೆ ಪೂರೈಸುವುದಕ್ಕೆ ಮೀಸಲಿರಿಸುವುದಾಗಿ ಹೇಳಿದೆ.

ಕೋವ್ಯಾಕ್ಸಿನ್ ವೈಶಿಷ್ಟ್ಯಗಳೇನು ಎಂಬ ಬಗ್ಗೆ ಕೂಡ ಕಂಪೆನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. * ಕೋವ್ಯಾಕ್ಸಿನ್ ವಯಲ್ ಒಮ್ಮೆ ತೆರೆದರೆ ಅದನ್ನು 2ರಿಂದ 8 ಡಿಗ್ರಿ ತಾಪಮಾನದಲ್ಲಿ 28 ದಿನಗಳ ಕಾಲ ಸುರಕ್ಷಿತವಾಗಿ ಇಡಬಹುದು.

* ಮೂರನೇ ಹಂತದ ಅಧ್ಯಯನದ ವೇಳೆಯಲ್ಲಿ ಒಟ್ಟಾರೆಯಾಗಿ ಕೋವಿಡ್-19 ವಿರುದ್ಧ ಶೇ 78 ಪರಿಣಾಮಕಾರಿ ಮತ್ತು ಗಂಭೀರ ಕಾಯಿಲೆ ವಿರುದ್ಧ ಶೇ 100ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸೇರಬೇಕಾದ ಅಗತ್ಯವನ್ನು ಕಡಿಮೆ ಮಾಡುತ್ತದೆ.

* ಈಗಾಗಲೇ ಸಾಬೀತಾದ, ಪರೀಕ್ಷಿಸಲಾದ, ವೆರೋ- ಸೆಲ್ ತಂತ್ರಜ್ಞಾನ, ಹೋಲ್ ವಿರಿಯನ್, ಇನ್​ಆಕ್ಟಿವೇಟೆಡ್ ಲಸಿಕೆ.

ಇದರ ಜತೆಗೆ ಇನ್ನೂ ಕೆಲವು ಮಾಹಿತಿಗಳೊಂದಿಗೆ ಭಾರತ್ ಬಯೋಟೆಕ್ ಅದ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಕೃಷ್ಣ ಎಂ ಎಳ್ಳ ಅವರು ಸಾರ್ವಜನಿಕರ ಬೆಂಬಲವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

(Bharat Biotech’s Covaxin for state governments Rs 600 and for private hospitals Rs 1200)

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು