AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200

ಭಾರತದ ಮೊದಲ ದೇಶೀ ಕೊರೊನಾ ಲಸಿಕೆಯಾದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ನೀಡಲಾಗುವುದು ಎಂದು ಹೇಳಿಕೆ ನೀಡಲಾಗಿದೆ.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Apr 24, 2021 | 11:12 PM

Share

ನವದೆಹಲಿ: ಭಾರತ್ ಬಯೋಟೆಕ್​ನಿಂದ ಪ್ರಮುಖ ಘೋಷಣೆ ಮಾಡಲಾಗಿದೆ. ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಕೊರೊನಾ ಅಲೆಯು ತೀವ್ರವಾಗಿರುವ ಹಿನ್ನೆಲೆಯಲ್ಲಿ ಕೋವ್ಯಾಕ್ಸಿನ್​ (COVAXIN) ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ಮತ್ತು ರಫ್ತು ಮಾಡುವುದಾದರೆ 15ರಿಂದ 20 ಡಾಲರ್​ಗೆ ಎಂದು ಭಾರತ ಸರ್ಕಾರದ ನಿರ್ದೇಶನದ ಅನುಸಾರವಾಗಿ ದರ ಘೋಷಣೆ ಮಾಡಲಾಗಿದೆ. ಒಂದು ಡೋಸ್​ಗೆ 150 ರೂಪಾಯಿ ತಗುಲುತ್ತದೆ. ಇದನ್ನು ಭಾರತ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಅಂದಹಾಗೆ ಕೋವ್ಯಾಕ್ಸಿನ್ ಎಂಬುದು ಭಾರತದ ಮೊದಲ ದೇಶೀ ಕೋವಿಡ್​-19 ಲಸಿಕೆಯಾಗಿದೆ. ಇನ್ನು ಇದೇ ವೇಳೆ ಕಂಪೆನಿಯು ಹೇಳಿಕೆ ನೀಡಿದ್ದು, ಉತ್ಪಾದನೆ ಮಾಡುವ ಲಸಿಕೆಯ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರಕ್ಕೆ ಪೂರೈಸುವುದಕ್ಕೆ ಮೀಸಲಿರಿಸುವುದಾಗಿ ಹೇಳಿದೆ.

ಕೋವ್ಯಾಕ್ಸಿನ್ ವೈಶಿಷ್ಟ್ಯಗಳೇನು ಎಂಬ ಬಗ್ಗೆ ಕೂಡ ಕಂಪೆನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. * ಕೋವ್ಯಾಕ್ಸಿನ್ ವಯಲ್ ಒಮ್ಮೆ ತೆರೆದರೆ ಅದನ್ನು 2ರಿಂದ 8 ಡಿಗ್ರಿ ತಾಪಮಾನದಲ್ಲಿ 28 ದಿನಗಳ ಕಾಲ ಸುರಕ್ಷಿತವಾಗಿ ಇಡಬಹುದು.

* ಮೂರನೇ ಹಂತದ ಅಧ್ಯಯನದ ವೇಳೆಯಲ್ಲಿ ಒಟ್ಟಾರೆಯಾಗಿ ಕೋವಿಡ್-19 ವಿರುದ್ಧ ಶೇ 78 ಪರಿಣಾಮಕಾರಿ ಮತ್ತು ಗಂಭೀರ ಕಾಯಿಲೆ ವಿರುದ್ಧ ಶೇ 100ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸೇರಬೇಕಾದ ಅಗತ್ಯವನ್ನು ಕಡಿಮೆ ಮಾಡುತ್ತದೆ.

* ಈಗಾಗಲೇ ಸಾಬೀತಾದ, ಪರೀಕ್ಷಿಸಲಾದ, ವೆರೋ- ಸೆಲ್ ತಂತ್ರಜ್ಞಾನ, ಹೋಲ್ ವಿರಿಯನ್, ಇನ್​ಆಕ್ಟಿವೇಟೆಡ್ ಲಸಿಕೆ.

ಇದರ ಜತೆಗೆ ಇನ್ನೂ ಕೆಲವು ಮಾಹಿತಿಗಳೊಂದಿಗೆ ಭಾರತ್ ಬಯೋಟೆಕ್ ಅದ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಕೃಷ್ಣ ಎಂ ಎಳ್ಳ ಅವರು ಸಾರ್ವಜನಿಕರ ಬೆಂಬಲವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

(Bharat Biotech’s Covaxin for state governments Rs 600 and for private hospitals Rs 1200)

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್