AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200

ಭಾರತದ ಮೊದಲ ದೇಶೀ ಕೊರೊನಾ ಲಸಿಕೆಯಾದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್​ ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ನೀಡಲಾಗುವುದು ಎಂದು ಹೇಳಿಕೆ ನೀಡಲಾಗಿದೆ.

COVAXIN ಲಸಿಕೆ ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ, ಖಾಸಗಿ ಆಸ್ಪತ್ರೆಗಳಿಗೆ ರೂ. 1200
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Apr 24, 2021 | 11:12 PM

Share

ನವದೆಹಲಿ: ಭಾರತ್ ಬಯೋಟೆಕ್​ನಿಂದ ಪ್ರಮುಖ ಘೋಷಣೆ ಮಾಡಲಾಗಿದೆ. ಭಾರತ ಸೇರಿದಂತೆ ಇಡೀ ವಿಶ್ವದಲ್ಲೇ ಕೊರೊನಾ ಅಲೆಯು ತೀವ್ರವಾಗಿರುವ ಹಿನ್ನೆಲೆಯಲ್ಲಿ ಕೋವ್ಯಾಕ್ಸಿನ್​ (COVAXIN) ಅನ್ನು ರಾಜ್ಯ ಸರ್ಕಾರಗಳಿಗೆ ರೂ. 600ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೂ. 1200ಕ್ಕೆ ಮತ್ತು ರಫ್ತು ಮಾಡುವುದಾದರೆ 15ರಿಂದ 20 ಡಾಲರ್​ಗೆ ಎಂದು ಭಾರತ ಸರ್ಕಾರದ ನಿರ್ದೇಶನದ ಅನುಸಾರವಾಗಿ ದರ ಘೋಷಣೆ ಮಾಡಲಾಗಿದೆ. ಒಂದು ಡೋಸ್​ಗೆ 150 ರೂಪಾಯಿ ತಗುಲುತ್ತದೆ. ಇದನ್ನು ಭಾರತ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಅಂದಹಾಗೆ ಕೋವ್ಯಾಕ್ಸಿನ್ ಎಂಬುದು ಭಾರತದ ಮೊದಲ ದೇಶೀ ಕೋವಿಡ್​-19 ಲಸಿಕೆಯಾಗಿದೆ. ಇನ್ನು ಇದೇ ವೇಳೆ ಕಂಪೆನಿಯು ಹೇಳಿಕೆ ನೀಡಿದ್ದು, ಉತ್ಪಾದನೆ ಮಾಡುವ ಲಸಿಕೆಯ ಶೇಕಡಾ 50ರಷ್ಟನ್ನು ಕೇಂದ್ರ ಸರ್ಕಾರಕ್ಕೆ ಪೂರೈಸುವುದಕ್ಕೆ ಮೀಸಲಿರಿಸುವುದಾಗಿ ಹೇಳಿದೆ.

ಕೋವ್ಯಾಕ್ಸಿನ್ ವೈಶಿಷ್ಟ್ಯಗಳೇನು ಎಂಬ ಬಗ್ಗೆ ಕೂಡ ಕಂಪೆನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. * ಕೋವ್ಯಾಕ್ಸಿನ್ ವಯಲ್ ಒಮ್ಮೆ ತೆರೆದರೆ ಅದನ್ನು 2ರಿಂದ 8 ಡಿಗ್ರಿ ತಾಪಮಾನದಲ್ಲಿ 28 ದಿನಗಳ ಕಾಲ ಸುರಕ್ಷಿತವಾಗಿ ಇಡಬಹುದು.

* ಮೂರನೇ ಹಂತದ ಅಧ್ಯಯನದ ವೇಳೆಯಲ್ಲಿ ಒಟ್ಟಾರೆಯಾಗಿ ಕೋವಿಡ್-19 ವಿರುದ್ಧ ಶೇ 78 ಪರಿಣಾಮಕಾರಿ ಮತ್ತು ಗಂಭೀರ ಕಾಯಿಲೆ ವಿರುದ್ಧ ಶೇ 100ರಷ್ಟು ಪರಿಣಾಮಕಾರಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸೇರಬೇಕಾದ ಅಗತ್ಯವನ್ನು ಕಡಿಮೆ ಮಾಡುತ್ತದೆ.

* ಈಗಾಗಲೇ ಸಾಬೀತಾದ, ಪರೀಕ್ಷಿಸಲಾದ, ವೆರೋ- ಸೆಲ್ ತಂತ್ರಜ್ಞಾನ, ಹೋಲ್ ವಿರಿಯನ್, ಇನ್​ಆಕ್ಟಿವೇಟೆಡ್ ಲಸಿಕೆ.

ಇದರ ಜತೆಗೆ ಇನ್ನೂ ಕೆಲವು ಮಾಹಿತಿಗಳೊಂದಿಗೆ ಭಾರತ್ ಬಯೋಟೆಕ್ ಅದ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಕೃಷ್ಣ ಎಂ ಎಳ್ಳ ಅವರು ಸಾರ್ವಜನಿಕರ ಬೆಂಬಲವನ್ನು ಕೋರಿದ್ದಾರೆ.

ಇದನ್ನೂ ಓದಿ: ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

(Bharat Biotech’s Covaxin for state governments Rs 600 and for private hospitals Rs 1200)

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್