Sign In

By signing in or creating an account, you agree with Associated Broadcasting Company's Terms & Conditions and Privacy Policy.

Covaxin Production in Kolar: ಕೋಲಾರದಲ್ಲಿ ಕೊವ್ಯಾಕ್ಸಿನ್ ಘಟಕ! ಹೈದರಾಬಾದ್​ ಘಟಕಕ್ಕಿಂತ 5 ಪಟ್ಟು ಹೆಚ್ಚು ಲಸಿಕೆ ತಯಾರಿ

ಸದ್ಯ ತೆಲಂಗಾಣದ ಹೈದರಾಬಾದ್ ಬಳಿ ಮಾತ್ರ ಉತ್ಪಾದನಾ ಘಟಕ ಹೊಂದಿರುವ ಸಂಸ್ಥೆ ಪ್ರತಿ ತಿಂಗಳು 40 ಲಕ್ಷ ಡೋಸ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಕೋಲಾರದಲ್ಲಿ ಆರಂಭವಾಗಲಿರುವ ಘಟಕ ಅದಕ್ಕಿಂತ ಐದು ಪಟ್ಟು ಹೆಚ್ಚಿನ ಲಸಿಕೆ ಉತ್ಪಾದಿಸಲಿದೆ ಎಂಬ ಮಾಹಿತಿ ಸಿಕ್ಕಿದೆ.

Covaxin Production in Kolar: ಕೋಲಾರದಲ್ಲಿ ಕೊವ್ಯಾಕ್ಸಿನ್ ಘಟಕ! ಹೈದರಾಬಾದ್​ ಘಟಕಕ್ಕಿಂತ 5 ಪಟ್ಟು ಹೆಚ್ಚು ಲಸಿಕೆ ತಯಾರಿ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on:Apr 05, 2021 | 2:53 PM

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಈಗಾಗಲೇ ಹೆಚ್ಚಿದ್ದು ಬಹುತೇಕ ರಾಜ್ಯಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿವೆ. ಜೊತೆಗೆ, ಕೊರೊನಾ ಲಸಿಕೆ ವಿತರಣೆ ವೇಗವನ್ನೂ ಹೆಚ್ಚಿಸಲಾಗುತ್ತಿದ್ದು ಲಸಿಕೆ ನೀಡುವ ಮೂಲಕ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲೇ ಕರ್ನಾಟಕದ ಪಾಲಿಗೆ ಶುಭಸುದ್ದಿಯೊಂದು ಸಿಕ್ಕಿದ್ದು ಭಾರತ್ ಬಯೋಟೆಕ್​ ಸಂಸ್ಥೆಯ ಸ್ವದೇಶಿ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಉತ್ಪಾದನಾ ಘಟಕ ಅತೀ ಶೀಘ್ರದಲ್ಲಿ ಕರ್ನಾಟಕದಲ್ಲೇ ಆರಂಭವಾಗಲಿದೆ.

ಕರ್ನಾಟಕದ ಕೋಲಾರ ತಾಲ್ಲೂಕಿನ ಮಾಲೂರಿನಲ್ಲಿ ಕೊವ್ಯಾಕ್ಸಿನ್​ ಲಸಿಕೆ ಉತ್ಪಾದನೆ ಘಟಕ ಈಗಾಗಲೇ ನಿರ್ಮಾಣ ಹಂತದಲ್ಲಿದ್ದು ಸದ್ಯದಲ್ಲೇ ಆರಂಭಗೊಳ್ಳಲಿದೆ. ಸದ್ಯ ತೆಲಂಗಾಣದ ಹೈದರಾಬಾದ್ ಬಳಿ ಮಾತ್ರ ಉತ್ಪಾದನಾ ಘಟಕ ಹೊಂದಿರುವ ಸಂಸ್ಥೆ ಪ್ರತಿ ತಿಂಗಳು 40 ಲಕ್ಷ ಡೋಸ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಕೋಲಾರದಲ್ಲಿ ಆರಂಭವಾಗಲಿರುವ ಘಟಕ ಅದಕ್ಕಿಂತ ಐದು ಪಟ್ಟು ಹೆಚ್ಚಿನ ಲಸಿಕೆ ಉತ್ಪಾದಿಸಲಿದೆ ಎಂಬ ಮಾಹಿತಿ ಸಿಕ್ಕಿದೆ.

ಕೊವ್ಯಾಕ್ಸಿನ್ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪೂರೈಕೆಯನ್ನು ಹೆಚ್ಚು ಮಾಡಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಭಾರತ್ ಬಯೋಟೆಕ್​ ಸಂಸ್ಥೆ ತಿಳಿಸಿದೆ. ಈ ಸಂಸ್ಥೆಯ ಸಿಇಓ ಕೃಷ್ಣ ಎಲ್ಲಾ ಹಾಗೂ ಜಂಟಿ ಎಂ.ಡಿ ಸುಚಿತ್ರಾ ಇಬ್ಬರೂ ಕರ್ನಾಟಕದಲ್ಲೇ ವ್ಯಾಸಂಗ ಮಾಡಿದವರಾಗಿದ್ದು, ಸಂಸ್ಥೆಯ ಉತ್ಪಾದನಾ ಘಟಕ ಕರ್ನಾಟಕದಲ್ಲಿ ಆರಂಭವಾಗುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​ 

Tv9 Kannada Digital Live | ಕೊವ್ಯಾಕ್ಸಿನ್​ – ಕೊವಿಶೀಲ್ಡ್​ ಯಾವ ಲಸಿಕೆ ಹಿತ? ವಿಷಯ ತಜ್ಞರೊಂದಿಗೆ ಟಿವಿ9 ಡಿಜಿಟಲ್​ ಚರ್ಚೆ

Published On - 2:50 pm, Mon, 5 April 21

ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ