Covaxin Production in Kolar: ಕೋಲಾರದಲ್ಲಿ ಕೊವ್ಯಾಕ್ಸಿನ್ ಘಟಕ! ಹೈದರಾಬಾದ್​ ಘಟಕಕ್ಕಿಂತ 5 ಪಟ್ಟು ಹೆಚ್ಚು ಲಸಿಕೆ ತಯಾರಿ

ಸದ್ಯ ತೆಲಂಗಾಣದ ಹೈದರಾಬಾದ್ ಬಳಿ ಮಾತ್ರ ಉತ್ಪಾದನಾ ಘಟಕ ಹೊಂದಿರುವ ಸಂಸ್ಥೆ ಪ್ರತಿ ತಿಂಗಳು 40 ಲಕ್ಷ ಡೋಸ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಕೋಲಾರದಲ್ಲಿ ಆರಂಭವಾಗಲಿರುವ ಘಟಕ ಅದಕ್ಕಿಂತ ಐದು ಪಟ್ಟು ಹೆಚ್ಚಿನ ಲಸಿಕೆ ಉತ್ಪಾದಿಸಲಿದೆ ಎಂಬ ಮಾಹಿತಿ ಸಿಕ್ಕಿದೆ.

Covaxin Production in Kolar: ಕೋಲಾರದಲ್ಲಿ ಕೊವ್ಯಾಕ್ಸಿನ್ ಘಟಕ! ಹೈದರಾಬಾದ್​ ಘಟಕಕ್ಕಿಂತ 5 ಪಟ್ಟು ಹೆಚ್ಚು ಲಸಿಕೆ ತಯಾರಿ
ಪ್ರಾತಿನಿಧಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on:Apr 05, 2021 | 2:53 PM

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಈಗಾಗಲೇ ಹೆಚ್ಚಿದ್ದು ಬಹುತೇಕ ರಾಜ್ಯಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿವೆ. ಜೊತೆಗೆ, ಕೊರೊನಾ ಲಸಿಕೆ ವಿತರಣೆ ವೇಗವನ್ನೂ ಹೆಚ್ಚಿಸಲಾಗುತ್ತಿದ್ದು ಲಸಿಕೆ ನೀಡುವ ಮೂಲಕ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲೇ ಕರ್ನಾಟಕದ ಪಾಲಿಗೆ ಶುಭಸುದ್ದಿಯೊಂದು ಸಿಕ್ಕಿದ್ದು ಭಾರತ್ ಬಯೋಟೆಕ್​ ಸಂಸ್ಥೆಯ ಸ್ವದೇಶಿ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಉತ್ಪಾದನಾ ಘಟಕ ಅತೀ ಶೀಘ್ರದಲ್ಲಿ ಕರ್ನಾಟಕದಲ್ಲೇ ಆರಂಭವಾಗಲಿದೆ.

ಕರ್ನಾಟಕದ ಕೋಲಾರ ತಾಲ್ಲೂಕಿನ ಮಾಲೂರಿನಲ್ಲಿ ಕೊವ್ಯಾಕ್ಸಿನ್​ ಲಸಿಕೆ ಉತ್ಪಾದನೆ ಘಟಕ ಈಗಾಗಲೇ ನಿರ್ಮಾಣ ಹಂತದಲ್ಲಿದ್ದು ಸದ್ಯದಲ್ಲೇ ಆರಂಭಗೊಳ್ಳಲಿದೆ. ಸದ್ಯ ತೆಲಂಗಾಣದ ಹೈದರಾಬಾದ್ ಬಳಿ ಮಾತ್ರ ಉತ್ಪಾದನಾ ಘಟಕ ಹೊಂದಿರುವ ಸಂಸ್ಥೆ ಪ್ರತಿ ತಿಂಗಳು 40 ಲಕ್ಷ ಡೋಸ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಕೋಲಾರದಲ್ಲಿ ಆರಂಭವಾಗಲಿರುವ ಘಟಕ ಅದಕ್ಕಿಂತ ಐದು ಪಟ್ಟು ಹೆಚ್ಚಿನ ಲಸಿಕೆ ಉತ್ಪಾದಿಸಲಿದೆ ಎಂಬ ಮಾಹಿತಿ ಸಿಕ್ಕಿದೆ.

ಕೊವ್ಯಾಕ್ಸಿನ್ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪೂರೈಕೆಯನ್ನು ಹೆಚ್ಚು ಮಾಡಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಭಾರತ್ ಬಯೋಟೆಕ್​ ಸಂಸ್ಥೆ ತಿಳಿಸಿದೆ. ಈ ಸಂಸ್ಥೆಯ ಸಿಇಓ ಕೃಷ್ಣ ಎಲ್ಲಾ ಹಾಗೂ ಜಂಟಿ ಎಂ.ಡಿ ಸುಚಿತ್ರಾ ಇಬ್ಬರೂ ಕರ್ನಾಟಕದಲ್ಲೇ ವ್ಯಾಸಂಗ ಮಾಡಿದವರಾಗಿದ್ದು, ಸಂಸ್ಥೆಯ ಉತ್ಪಾದನಾ ಘಟಕ ಕರ್ನಾಟಕದಲ್ಲಿ ಆರಂಭವಾಗುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​ 

Tv9 Kannada Digital Live | ಕೊವ್ಯಾಕ್ಸಿನ್​ – ಕೊವಿಶೀಲ್ಡ್​ ಯಾವ ಲಸಿಕೆ ಹಿತ? ವಿಷಯ ತಜ್ಞರೊಂದಿಗೆ ಟಿವಿ9 ಡಿಜಿಟಲ್​ ಚರ್ಚೆ

Published On - 2:50 pm, Mon, 5 April 21

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ