Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲಾ, ಎರಡಲ್ಲಾ, ₹3,269 ಕೋಟಿ ಹಗರಣ: ಎಸ್​ಬಿಐನಿಂದ ದೂರು ದಾಖಲು

ಸುಮಾರು 24 ವರ್ಷಗಳ ಹಿಂದೆ ಸ್ಥಾಪನೆಯಾದ ಆಹಾರ ಉತ್ಪಾದನಾ ಮತ್ತು ಮಾರಾಟ ಸಂಸ್ಥೆ ಶಕ್ತಿಭೋಗ್​ ಉತ್ತರ ಭಾರತ ಪ್ರಾಂತ್ಯದಲ್ಲಿ ಗೋಧಿಹಿಟ್ಟು, ಅಕ್ಕಿ, ಬಿಸ್ಕತ್ ಮತ್ತು ಕುಕ್ಕೀಸ್ ಮಾರಾಟದಲ್ಲಿ ದೊಡ್ಡ ಹೆಸರು ಮಾಡಿದೆ. ಭಾರತದ ಇತರೆ ರಾಜ್ಯಗಳಲ್ಲಿ ಬೇರೆ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ವಹಿವಾಟು ನಡೆಸುತ್ತಿದೆ.

ಒಂದಲ್ಲಾ, ಎರಡಲ್ಲಾ, ₹3,269 ಕೋಟಿ ಹಗರಣ: ಎಸ್​ಬಿಐನಿಂದ ದೂರು ದಾಖಲು
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ರಾಜೇಶ್ ದುಗ್ಗುಮನೆ

Updated on: Jan 02, 2021 | 6:58 PM

ದೆಹಲಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಮುಂದಾಳತ್ವದ 10 ಬ್ಯಾಂಕ್​ಗಳಿಗೆ ₹3,269.42 ಕೋಟಿ ವಂಚಿಸಿರುವ ಆರೋಪದ ಮೇಲೆ ದೆಹಲಿ ಮೂಲದ ಶಕ್ತಿಭೋಗ್ ಆಹಾರ ನಿಗಮ ಮತ್ತು ಇನ್ನಿತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಶಕ್ತಿಭೋಗ್​ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೇವಲ್​ ಕೃಷ್ಣನ್ ಕುಮಾರ್​, ನಿರ್ದೇಶಕ ಸಿದ್ಧಾರ್ಥ್​ ಕುಮಾರ್ ಮತ್ತು ಸುನಂದಾ ಕುಮಾರ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಸುಮಾರು 24 ವರ್ಷಗಳ ಹಿಂದೆ ಸ್ಥಾಪನೆಯಾದ ಆಹಾರ ಉತ್ಪಾದನಾ ಮತ್ತು ಮಾರಾಟ ಸಂಸ್ಥೆ ಶಕ್ತಿಭೋಗ್​ ಉತ್ತರ ಭಾರತ ಪ್ರಾಂತ್ಯದಲ್ಲಿ ಗೋಧಿಹಿಟ್ಟು, ಅಕ್ಕಿ, ಬಿಸ್ಕತ್ ಮತ್ತು ಕುಕ್ಕೀಸ್ ಮಾರಾಟದಲ್ಲಿ ದೊಡ್ಡ ಹೆಸರು ಮಾಡಿದೆ. ಭಾರತದ ಇತರೆ ರಾಜ್ಯಗಳಲ್ಲಿ ಬೇರೆ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ವಹಿವಾಟು ನಡೆಸುತ್ತಿದೆ.

ಎಫ್​ಐಆರ್​ ಪ್ರಕಾರ ವಿಧಿವಿಜ್ಞಾನ ಲೆಕ್ಕ ಪರಿಶೋಧಕರು 2019ನೇ ಇಸವಿಯ ಜೂನ್​ ತಿಂಗಳಲ್ಲಿ ಒಪ್ಪಿಸಿದ ವರದಿಯಿಂದಾಗಿ ಅಕ್ರಮ ವಹಿವಾಟು ಬೆಳಕಿಗೆ ಬಂದಿದೆ. ಏಪ್ರಿಲ್​ 2013ರಿಂದ ಮಾರ್ಚ್​ 2017ರ ನಡುವೆ ನಡೆದಿರುವ ವ್ಯವಹಾರದ ಲೆಕ್ಕಾಚಾರ ಮಾಡಿದಾಗ ಲೋಪ ಪತ್ತೆಯಾಗಿದೆ.

ಒಟ್ಟು ₹2,016 ಕೋಟಿ ವಹಿವಾಟು ನಡೆಸುತ್ತಿದ್ದ ಖಾತೆ ಮಾರ್ಚ್​ 2015ರ ವೇಳೆಗೆ ಅನುತ್ಪಾದಕ ಆಸ್ತಿಯಾಗಿ ಬದಲಾಗಿದೆ. ವಿಧಿವಿಜ್ಞಾನ ಲೆಕ್ಕ ಪರಿಶೋಧನಾ ವರದಿಯಲ್ಲಿ ಖಾತೆಗೆ ಸಂಬಂಧಿಸಿದ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿವೆ.

ಕೆಲವೊಂದು ಕಾರಣಕ್ಕಾಗಿ ವಿಮೆ ಮಾಡಿಸಿದ್ದು,  ಅದಕ್ಕಾಗಿ ಸಲ್ಲಿಸಿರುವ ದಾಖಲೆ ಸುಳ್ಳು. ಅಷ್ಟೇ ಅಲ್ಲದೇ ಸಹಿ ವಿಚಾರದಲ್ಲಿಯೂ ಅಕ್ರಮ ನಡೆದಿದ್ದು ಯಾರದ್ದೋ ಹೆಸರಿನಲ್ಲಿ ಇನ್ಯಾರೋ ಸಹಿ ಮಾಡಿರುವುದು ಸಹ ಪತ್ತೆಯಾಗಿದೆ. ಈ ಎಲ್ಲಾ ವಿಚಾರವನ್ನು ಪರಿಶೀಲಿಸಿದ ಸಿಬಿಐ ಶಕ್ತಿಭೋಗ್​ ಆಹಾರ ನಿಗಮದ ವಿರುದ್ಧ ಪ್ರಕರಣ ದಾಖಲಿಸಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ