AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privitisation: ಎರಡು ಪಿಎಸ್​ಯು ಬ್ಯಾಂಕ್​ಗಳ ಖಾಸಗೀಕರಣ ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಿಕೆ ಸಾಧ್ಯತೆ

ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣವನ್ನು 2023ರ ಹಣಕಾಸು ವರ್ಷಕ್ಕೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

PSU Privitisation: ಎರಡು ಪಿಎಸ್​ಯು ಬ್ಯಾಂಕ್​ಗಳ ಖಾಸಗೀಕರಣ ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಿಕೆ ಸಾಧ್ಯತೆ
ಸಂಸತ್ ಭವನ (ಸಾಂದರ್ಭಿಕ ಚಿತ್ರ)
TV9 Web
| Updated By: Srinivas Mata|

Updated on: Aug 02, 2021 | 6:19 PM

Share

ಭಾರತ ಸರ್ಕಾರವು ಮಾಡಬೇಕು ಎಂದುಕೊಂಡಿದ್ದ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಷೇರಿನ ಪಾಲು ಮಾರಾಟವನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಬಹುದು ಎನ್ನಲಾಗಿದೆ. ಈ ವಹಿವಾಟಿಗೆ ಸಂಬಂಧಿಸಿದಂತೆ ಕಾನೂನು ಬದಲಾವಣೆಗಳಿಗಾಗಿ ಸಂಸತ್​ನಿಂದ ಸರ್ಕಾರವು ಅನುಮತಿ ಪಡೆಯಬೇಕಿದೆ ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಇರುವವರು ತಿಳಿಸಿದ್ದಾರೆ ಎಂದು ಪ್ರಮುಖ ಇಂಗ್ಲಿಷ್ ವಾಣಿಜ್ಯ ಮಾಧ್ಯಮ ವರದಿ ಮಾಡಿದೆ. ಈ ಮಾರಾಟಕ್ಕೆ ಸಂಬಂಧಿಸಿದಂತೆ ಅಂತಿಮ ವಿಧಿ-ವಿಧಾನಗಳಿಗೆ ಜನಪ್ರತಿನಿಧಿಗಳಿಂದ ಅಂತಿಮ ಮುದ್ರೆ ಪಡೆಯಬೇಕಿದೆ. ಇದಕ್ಕಾಗಿ ಸ್ವಲ್ಪ ಸಮಯ ಹಿಡಿಯಲಿದ್ದು, ಈ ವರ್ಷದಲ್ಲಿ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ಇನ್ನೂ ಬಹಿರಂಗ ಆಗದ ಹಿನ್ನೆಲೆಯಲ್ಲಿ ಮೂಲಗಳು ಸಹ ತಮ್ಮ ಗುರುತು ಹೊರಬರಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

2022ರ ಮಾರ್ಚ್​ ಹೊತ್ತಿಗೆ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್​ಗಳು ಖರೀದಿದಾರರನ್ನು ಕೇಳಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿಯಲ್ಲಿ ಹೇಳಿರುವಂತೆ, ಏಪ್ರಿಲ್​ 1ನೇ ತಾರೀಕಿನಿಂದ ಶುರುವಾಗುವ ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಸಿದ್ಧಪಡಿಸುವ ವೇಳೆ ತಿಳಿಸಿದ್ದರು. ಇನ್ನು ಹಣಕಾಸು ಸಚಿವಾಲಯದ ವಕ್ತಾರರು ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ಪಡೆಯುವುದಕ್ಕೆ ಲಭ್ಯರಾಗಿಲ್ಲ ಎಂದು ತಿಳಿದುಬಂದಿದೆ.

ದೇಶದ ಎರಡನೇ ಅತಿದೊಡ್ಡ ಸರ್ಕಾರಿ ರಿಫೈನರ್​ನಲ್ಲಿನ ಪ್ರಮುಖ ಷೇರಿನ ಪಾಲನ್ನು ಮಾರಾಟ ಮಾಡುವು ಯೋಜನೆ ಹಾಕಿಕೊಂಡಿತ್ತು. ಅದು ಕೂಡ ಈಗ ನಿಧಾನ ಆಗುತ್ತಿದೆ. ಈ ವಹಿವಾಟು 2021ರಲ್ಲಿ ನಡೆಯುವ ಸಾಧ್ಯತೆ ಇಲ್ಲ. ಬದಲಿಗೆ ಮುಂದಿನ ವರ್ಷದ ಆರಂಭದಲ್ಲಿ ಆಗಬಹುದು ಎಂದು ಬ್ಲೂಮ್​ಬರ್ಗ್ ನ್ಯೂಸ್​ನಿಂದ ಜುಲೈನಲ್ಲಿ ವರದಿ ಮಾಡಲಾಗಿದೆ. ಲೈಫ್​ ಇನ್ಷೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ಪಬ್ಲಿಕ್ ಆಫರ್ ಸೇರಿದಂತೆ ಇತರ ಆಸ್ತಿಗಳ ಮಾರಾಟಕ್ಕೆ ಮುಂದಾಗಲಿದೆ. ಇದರಿಂದಾಗಿ ಈ ವರ್ಷ ತೆರಿಗೆ ಸಂಗ್ರಹದಲ್ಲಿ ಆಗುವ ಕೊರತೆಯನ್ನು ಆ ಮೂಲಕ ಸರಿತೂಗಿಸುವ ಪ್ರಯತ್ನಕ್ಕೆ ಸಹಾಯ ಆಗುತ್ತದೆ.

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಖಾಸಗೀಕರಣಗೊಳ್ಳುವುದು ಹೆಚ್ಚುಕಡಿಮೆ ಖಚಿತ

(Central Government May Defer Privatisation Of 2 PSU Banks To FY23)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ