AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privitisation: ಎರಡು ಪಿಎಸ್​ಯು ಬ್ಯಾಂಕ್​ಗಳ ಖಾಸಗೀಕರಣ ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಿಕೆ ಸಾಧ್ಯತೆ

ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣವನ್ನು 2023ರ ಹಣಕಾಸು ವರ್ಷಕ್ಕೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

PSU Privitisation: ಎರಡು ಪಿಎಸ್​ಯು ಬ್ಯಾಂಕ್​ಗಳ ಖಾಸಗೀಕರಣ ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಿಕೆ ಸಾಧ್ಯತೆ
ಸಂಸತ್ ಭವನ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Aug 02, 2021 | 6:19 PM

Share

ಭಾರತ ಸರ್ಕಾರವು ಮಾಡಬೇಕು ಎಂದುಕೊಂಡಿದ್ದ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಷೇರಿನ ಪಾಲು ಮಾರಾಟವನ್ನು ಮುಂದಿನ ಹಣಕಾಸು ವರ್ಷಕ್ಕೆ ಮುಂದೂಡಬಹುದು ಎನ್ನಲಾಗಿದೆ. ಈ ವಹಿವಾಟಿಗೆ ಸಂಬಂಧಿಸಿದಂತೆ ಕಾನೂನು ಬದಲಾವಣೆಗಳಿಗಾಗಿ ಸಂಸತ್​ನಿಂದ ಸರ್ಕಾರವು ಅನುಮತಿ ಪಡೆಯಬೇಕಿದೆ ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಇರುವವರು ತಿಳಿಸಿದ್ದಾರೆ ಎಂದು ಪ್ರಮುಖ ಇಂಗ್ಲಿಷ್ ವಾಣಿಜ್ಯ ಮಾಧ್ಯಮ ವರದಿ ಮಾಡಿದೆ. ಈ ಮಾರಾಟಕ್ಕೆ ಸಂಬಂಧಿಸಿದಂತೆ ಅಂತಿಮ ವಿಧಿ-ವಿಧಾನಗಳಿಗೆ ಜನಪ್ರತಿನಿಧಿಗಳಿಂದ ಅಂತಿಮ ಮುದ್ರೆ ಪಡೆಯಬೇಕಿದೆ. ಇದಕ್ಕಾಗಿ ಸ್ವಲ್ಪ ಸಮಯ ಹಿಡಿಯಲಿದ್ದು, ಈ ವರ್ಷದಲ್ಲಿ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ಇನ್ನೂ ಬಹಿರಂಗ ಆಗದ ಹಿನ್ನೆಲೆಯಲ್ಲಿ ಮೂಲಗಳು ಸಹ ತಮ್ಮ ಗುರುತು ಹೊರಬರಬಾರದು ಎಂದು ಮನವಿ ಮಾಡಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

2022ರ ಮಾರ್ಚ್​ ಹೊತ್ತಿಗೆ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್​ಗಳು ಖರೀದಿದಾರರನ್ನು ಕೇಳಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿಯಲ್ಲಿ ಹೇಳಿರುವಂತೆ, ಏಪ್ರಿಲ್​ 1ನೇ ತಾರೀಕಿನಿಂದ ಶುರುವಾಗುವ ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಸಿದ್ಧಪಡಿಸುವ ವೇಳೆ ತಿಳಿಸಿದ್ದರು. ಇನ್ನು ಹಣಕಾಸು ಸಚಿವಾಲಯದ ವಕ್ತಾರರು ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ಪಡೆಯುವುದಕ್ಕೆ ಲಭ್ಯರಾಗಿಲ್ಲ ಎಂದು ತಿಳಿದುಬಂದಿದೆ.

ದೇಶದ ಎರಡನೇ ಅತಿದೊಡ್ಡ ಸರ್ಕಾರಿ ರಿಫೈನರ್​ನಲ್ಲಿನ ಪ್ರಮುಖ ಷೇರಿನ ಪಾಲನ್ನು ಮಾರಾಟ ಮಾಡುವು ಯೋಜನೆ ಹಾಕಿಕೊಂಡಿತ್ತು. ಅದು ಕೂಡ ಈಗ ನಿಧಾನ ಆಗುತ್ತಿದೆ. ಈ ವಹಿವಾಟು 2021ರಲ್ಲಿ ನಡೆಯುವ ಸಾಧ್ಯತೆ ಇಲ್ಲ. ಬದಲಿಗೆ ಮುಂದಿನ ವರ್ಷದ ಆರಂಭದಲ್ಲಿ ಆಗಬಹುದು ಎಂದು ಬ್ಲೂಮ್​ಬರ್ಗ್ ನ್ಯೂಸ್​ನಿಂದ ಜುಲೈನಲ್ಲಿ ವರದಿ ಮಾಡಲಾಗಿದೆ. ಲೈಫ್​ ಇನ್ಷೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ಪಬ್ಲಿಕ್ ಆಫರ್ ಸೇರಿದಂತೆ ಇತರ ಆಸ್ತಿಗಳ ಮಾರಾಟಕ್ಕೆ ಮುಂದಾಗಲಿದೆ. ಇದರಿಂದಾಗಿ ಈ ವರ್ಷ ತೆರಿಗೆ ಸಂಗ್ರಹದಲ್ಲಿ ಆಗುವ ಕೊರತೆಯನ್ನು ಆ ಮೂಲಕ ಸರಿತೂಗಿಸುವ ಪ್ರಯತ್ನಕ್ಕೆ ಸಹಾಯ ಆಗುತ್ತದೆ.

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಖಾಸಗೀಕರಣಗೊಳ್ಳುವುದು ಹೆಚ್ಚುಕಡಿಮೆ ಖಚಿತ

(Central Government May Defer Privatisation Of 2 PSU Banks To FY23)

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ