AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ದಿವಾಳಿ ಎದ್ದ ಚೀನಾ: ಡ್ರ್ಯಾಗನ್​ಗೆ 40,000 ಕೋಟಿ ನಷ್ಟ!, ಹೇಗೆ?

ದೆಹಲಿ: ಕೊರೊನಾದಿಂದ ಕುಸಿದಿದ್ದ ದೇಶದ ವ್ಯಾಪಾರ ವಹಿವಾಟು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಅದರಲ್ಲೂ, ಈ ಬಾರಿ ದೀಪಾವಳಿ ನಿಜಕ್ಕೂ ಭರವಸೆಯ ಬೆಳಕನ್ನು ಮೂಡಿಸಿದೆ. ದೀಪಾವಳಿ ಹಬ್ಬಕ್ಕೆ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ಸುಮಾರು 72,000 ಕೋಟಿ ರೂ.ಗಳ ವಹಿವಾಟು ದಾಖಲಾಗಿದೆ ಎಂದು ಭಾರತೀಯ ವರ್ತಕರ ಒಕ್ಕೂಟ (CAIT) ಮಾಹಿತಿ ನೀಡಿದೆ. CAIT ಪ್ರಕಾರ, ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಚೀನಾದ ಸರಕುಗಳನ್ನು ಬಹಿಷ್ಕರಿಸುವ CAIT ಕರೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು,  ಯಾವುದೇ ಚೀನಿ ಸರಕುಗಳು ಮಾರಾಟವಾಗಿಲ್ಲ. ಭಾರತದ ಪ್ರಮುಖ […]

ದೀಪಾವಳಿಯಂದು.. ದಿವಾಳಿ ಎದ್ದ ಚೀನಾ: ಡ್ರ್ಯಾಗನ್​ಗೆ 40,000 ಕೋಟಿ ನಷ್ಟ!, ಹೇಗೆ?
ಆಯೇಷಾ ಬಾನು
|

Updated on:Nov 24, 2020 | 9:01 AM

Share

ದೆಹಲಿ: ಕೊರೊನಾದಿಂದ ಕುಸಿದಿದ್ದ ದೇಶದ ವ್ಯಾಪಾರ ವಹಿವಾಟು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಅದರಲ್ಲೂ, ಈ ಬಾರಿ ದೀಪಾವಳಿ ನಿಜಕ್ಕೂ ಭರವಸೆಯ ಬೆಳಕನ್ನು ಮೂಡಿಸಿದೆ. ದೀಪಾವಳಿ ಹಬ್ಬಕ್ಕೆ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ಸುಮಾರು 72,000 ಕೋಟಿ ರೂ.ಗಳ ವಹಿವಾಟು ದಾಖಲಾಗಿದೆ ಎಂದು ಭಾರತೀಯ ವರ್ತಕರ ಒಕ್ಕೂಟ (CAIT) ಮಾಹಿತಿ ನೀಡಿದೆ.

CAIT ಪ್ರಕಾರ, ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಚೀನಾದ ಸರಕುಗಳನ್ನು ಬಹಿಷ್ಕರಿಸುವ CAIT ಕರೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು,  ಯಾವುದೇ ಚೀನಿ ಸರಕುಗಳು ಮಾರಾಟವಾಗಿಲ್ಲ. ಭಾರತದ ಪ್ರಮುಖ ವಿತರಣಾ ಕೇಂದ್ರಗಳೆಂದು ಪರಿಗಣಿಸಲ್ಪಟ್ಟ 20 ವಿವಿಧ ನಗರಗಳಿಂದ ಸಂಗ್ರಹಿಸಲಾದ ವರದಿಗಳ ಪ್ರಕಾರ, ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ವಹಿವಾಟಿನಲ್ಲಿ ಸುಮಾರು 72,000 ಕೋಟಿ ರೂ.ಗಳ ಆದಾಯ ಬಂದಿದ್ದು ಚೀನಾಕ್ಕೆ 40,000 ಕೋಟಿ ರೂ.ಗಳ ನಷ್ಟವಾಗಿದೆ ಎಂದು ತಿಳಿಸಿದೆ.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಕೋಲ್ಕತಾ, ನಾಗ್ಪುರ, ರಾಯ್‌ಪುರ, ಭುವನೇಶ್ವರ, ರಾಂಚಿ, ಭೋಪಾಲ್, ಲಕ್ನೋ, ಕಾನ್ಪುರ್, ನೋಯ್ಡಾ, ಜಮ್ಮು, ಅಹ್ಮದಾಬಾದ್, ಸೂರತ್, ಕೊಚ್ಚಿನ್, ಜೈಪುರ, ಚಂಡೀಗಢ ಸೇರಿದಂತೆ 20 ನಗರಗಳಲ್ಲಿ CAIT ತನ್ನ ಸಮೀಕ್ಷೆ ನಡೆಸಿ ವರದಿಯನ್ನು ನೀಡಿದೆ.

ಇನ್ನು, ದೀಪಾವಳಿ ಹಬ್ಬದ ಅವಧಿಯಲ್ಲಿ ವಾಣಿಜ್ಯ ಮಾರುಕಟ್ಟೆಗಳಲ್ಲಿ ನಡೆದ ಮಾರಾಟವು ಭವಿಷ್ಯದಲ್ಲಿ ಉತ್ತಮ ವ್ಯಾಪಾರ ಭವಿಷ್ಯವನ್ನು ಸೂಚಿಸುತ್ತದೆ. ಜೊತೆಗೆ, ವ್ಯಾಪಾರಿಗಳ ಮುಖದಲ್ಲಿ ಸ್ವಲ್ಪ ಮಂದಹಾಸವನ್ನು ತಂದಿದೆ ಎಂದು ಹೇಳಲಾಗುತ್ತಿದೆ. ದಿನ ಬಳಕೆಯ ವಸ್ತುಗಳು (FMCG), ಆಟಿಕೆಗಳು, ವಿದ್ಯುತ್ ಉಪಕರಣಗಳು, ಗೃಹ ಬಳಕೆ ವಸ್ತುಗಳು, ಉಡುಗೊರೆಗಳು, ಸಿಹಿ ತಿಂಡಿ, ಚಿನ್ನ ಮತ್ತು ಆಭರಣಗಳು, ಪಾದರಕ್ಷೆ, ಕೈಗಡಿಯಾರ, ಪೀಠೋಪಕರಣಗಳು ಸೇರಿದಂತೆ ಫ್ಯಾಷನ್ ಉಡುಪುಗಳು,  ಮನೆ ಅಲಂಕಾರಕ್ಕೆ ಬಳಸುವ ವಸ್ತುಗಳನ್ನು ಹೆಚ್ಚಾಗಿ ಈ ದೀಪಾವಳಿಯಲ್ಲಿ ಜನ ಖರೀದಿಸಿದ್ದಾರೆ ಎಂದು ಹೇಳಲಾಗಿದೆ.

CAIT ದೇಶದಲ್ಲಿ ಚೀನಾದ ಸರಕುಗಳನ್ನು ಬಹಿಷ್ಕರಿಸುವ ಅಭಿಯಾನವನ್ನು ನಡೆಸುತ್ತಿದೆ. ಕಳೆದ ಜೂನ್‌ನಲ್ಲಿ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಾದ ಕೆಲವೇ ದಿನಗಳ ನಂತರ, CAIT  ಸಾರ್ವಜನಿಕರಿಗೆ ಎಲ್ಲಾ ಚೀನಾ ಕಂಪನಿಗಳನ್ನು ಬಹಿಷ್ಕರಿಸುವಂತೆ ಒತ್ತಾಯಿಸಿತ್ತು. ಹೀಗಾಗಿ ಒಕ್ಕೂಟ, ಈ ವರದಿಯನ್ನು ಕೈಗೊಂಡಿತ್ತು.

Published On - 3:37 pm, Mon, 16 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್