AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಡಿಸೆಂಬರ್ ಚಿಲ್ಲರೆ ಹಣದುಬ್ಬರ ದರ ಶೇ 5.59, ನವೆಂಬರ್ ಐಐಪಿ ಶೇ 1.4 ಬೆಳವಣಿಗೆ

ಡಿಸೆಂಬರ್ ತಿಂಗಳ ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ದರವು ಶೇ 5.59ಕ್ಕೆ ಏರಿಕೆ ಆಗಿದ್ದು, ನವೆಂಬರ್​ ತಿಂಗಳ ಐಐಪಿ ಶೇ 1.4ರಷ್ಟು ಬೆಳವಣಿಗೆ ದಾಖಲಿಸಿದೆ.

Retail Inflation: ಡಿಸೆಂಬರ್ ಚಿಲ್ಲರೆ ಹಣದುಬ್ಬರ ದರ ಶೇ 5.59, ನವೆಂಬರ್ ಐಐಪಿ ಶೇ 1.4 ಬೆಳವಣಿಗೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jan 12, 2022 | 7:18 PM

ಭಾರತದ ಚಿಲ್ಲರೆ ಹಣದುಬ್ಬರವು (Retail Inflation) ನವೆಂಬರ್‌ನಲ್ಲಿ ಶೇ 4.91ರಷ್ಟು ಇದ್ದದ್ದು ಅಲ್ಲಿಂದ ಡಿಸೆಂಬರ್‌ನಲ್ಲಿ ಶೇ 5.59ಕ್ಕೆ ತೀವ್ರವಾಗಿ ಏರಿದ್ದು, ಉತ್ಪಾದನಾ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಈ ಏರಿಕೆಯಾಗಿದೆ ಎಂದು ಸರ್ಕಾರವು ಬುಧವಾರ ಬಿಡುಗಡೆ ಮಾಡಿದ ಅಂಕಿ-ಅಂಶಗಳು ತೋರಿಸಿವೆ. ಗ್ರಾಹಕ ಬೆಲೆ ಸೂಚ್ಯಂಕದಿಂದ (CPI) ಅಳೆಯಲಾದ ಹಣದುಬ್ಬರವು ವರ್ಷದ ಹಿಂದಿನ ಅವಧಿಯಲ್ಲಿ ಶೇ 4.59 ಇತ್ತು. ಆಹಾರ ಹಣದುಬ್ಬರವು ನವೆಂಬರ್‌ನಲ್ಲಿ ಶೇ 1.87ರಿಂದ ಡಿಸೆಂಬರ್‌ನಲ್ಲಿ ಶೇ 4.05ಕ್ಕೆ ಏರಿದೆ. ರಾಯಿಟರ್ಸ್ ಸಮೀಕ್ಷೆಯ ಪ್ರಕಾರ ವಿಶ್ಲೇಷಕರು ವಾರ್ಷಿಕ ಹಣದುಬ್ಬರವನ್ನು ಶೇ 5.8 ಎಂದು ಊಹಿಸಿದ್ದರು. ಹಣದುಬ್ಬರ ತೀವ್ರವಾಗಿ ಹೆಚ್ಚಿದ್ದರೂ ಇದು ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾದ (RBI) ಶೇ 2ರಿಂದ ಶೇ 6ರ ಗುರಿಯ ವ್ಯಾಪ್ತಿಯಲ್ಲಿದೆ.

“ಇಂದಿನ CPIನಿಂದ ಆಹಾರದ ಬೆಲೆಗಳಲ್ಲಿನ ಆಯಾ ಋತುವಿನ ಕುಸಿತವು ಅಂತಿಮವಾಗಿ ಕಾರ್ಯರೂಪಕ್ಕೆ ಬರಲು ಪ್ರಾರಂಭಿಸಿದೆ ಎಂದು ಸೂಚಿಸುತ್ತದೆ. ಪ್ರತಿಕೂಲವಾದ ಮೂಲ ಮತ್ತು ಒಮಿಕ್ರಾನ್ ಕಾರಣದಿಂದಾಗಿ ಮುಂದುವರಿದ ಪೂರೈಕೆ ಅಡ್ಡಿ- ಅಡಚಣೆಗಳ ಮಧ್ಯೆ ಗರಿಷ್ಠದ ಕೋರ್ ಹಣದುಬ್ಬರವು ಮುಂದಿನ ಎರಡು ತಿಂಗಳಲ್ಲಿ ಶೀರ್ಷಿಕೆ ​​ಮುದ್ರಣವನ್ನು ಶೇ 5ರಷ್ಟು ಹೆಚ್ಚಿಸಲಿದೆ,” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಈ ಮಧ್ಯೆ, ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ನವೆಂಬರ್ ತಿಂಗಳ ಕೈಗಾರಿಕಾ ಉತ್ಪಾದನೆಯು ಕಳೆದ ವರ್ಷ ಇದೇ ತಿಂಗಳಿನಲ್ಲಿ (-)1.6ಕ್ಕೆ ಹೋಲಿಸಿದರೆ ಶೇ 1.4ರಷ್ಟು ಹೆಚ್ಚಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ IIP ಶೇ 3.2 ಏರಿಕೆಯಾಗಿದೆ. ಕಳೆದ ವರ್ಷ ಇದೇ ತಿಂಗಳಿನಲ್ಲಿ ಶೇ 5.4ರಷ್ಟು ಕುಗ್ಗಿದ್ದನ್ನು ಹೋಲಿಸಿದರೆ ಗಣಿಗಾರಿಕೆ ವಲಯವು ನವೆಂಬರ್‌ನಲ್ಲಿ ಶೇ 5ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಉತ್ಪಾದನಾ ವಲಯದ ಬೆಳವಣಿಗೆಯು ನವೆಂಬರ್‌ನಲ್ಲಿ ಶೇ 0.9ರಷ್ಟು ದುರ್ಬಲವಾಗಿತ್ತು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 1.6ರ ಬೆಳವಣಿಗೆ ಕುಸಿತವಾಗಿತ್ತು.

ಇದನ್ನೂ ಓದಿ: Price hike: ಎಲೆಕ್ಟ್ರಾನಿಕ್ಸ್​ನಿಂದ ಕಾರಿನ ತನಕ ಹೊಸ ವರ್ಷದಲ್ಲಿ ಬೆಲೆ ಏರಿಕೆಗೆ ಸಿದ್ಧತೆ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್