AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ, ಬಾಲಕ ಸಾವು

ಮನೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಚಾರ್ಜ್ ಮಾಡುತ್ತಿದ್ದ ವೇಳೆ ಬ್ಯಾಟರಿ ಸ್ಫೋಟಗೊಂಡು 7 ವರ್ಷದ ಬಾಲಕ ಸಾವನ್ನಪ್ಪಿರುವ ಪ್ರಕರಣ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ. ಘಟನೆ ಸಂಬಂಧ ತನಿಖೆ ಆರಂಭಗೊಂಡಿದೆ.

ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ, ಬಾಲಕ ಸಾವು
ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟಗೊಂಡು ಬಾಲಕ ಸಾವು
TV9 Web
| Updated By: Rakesh Nayak Manchi|

Updated on:Oct 03, 2022 | 2:52 PM

Share

ಮನೆಯಲ್ಲಿ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ (Electric scooter battery explodes)ಗೊಂಡ ಘಟನೆ ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಶೇ 70ರಷ್ಟು ಗಂಭೀರವಾಗಿ ಗಾಯಗಂಡಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಎಎನ್‌ಐ ಪ್ರಕಾರ, ಪಾಲ್ಘರ್‌ನ ವಸಾಯ್‌ನಲ್ಲಿ ಚಾರ್ಜ್ ಆಗುತ್ತಿರುವಾಗ ಸಂಭವಿಸಿದ ಇ-ಸ್ಕೂಟರ್ (E-Scooter) ಬ್ಯಾಟರಿ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕ ಚಿಕಿತ್ಸೆಯ ಸಮಯದಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿದ ಮಾಣಿಕಪುರ ಠಾಣಾ ಪೊಲೀಸರು, ಘಟೆನೆ ಸಂಬಂಧ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಶಬ್ಬೀರ್ ಅನ್ಸಾರಿ ತನ್ನ ಮನೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ನ ಬ್ಯಾಟರಿ ಸ್ಫೋಟಗೊಂಡು ಶೇಕಡಾ 70 ಕ್ಕೂ ಹೆಚ್ಚು ಸುಟ್ಟಗಾಯಗಳಿಂದ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಸೆ.23ರ ಮುಂಜಾನೆ ಅನ್ಸಾರಿ ತಂದೆ ಸ್ಕೂಟರ್​ನ ಬ್ಯಾಟರಿಯನ್ನು ಮನೆಯ ಹಾಲ್​ನಲ್ಲಿ ಜಾರ್ಜ್​ಗೆ ಇಟ್ಟಿದ್ದರು. ಆದರೆ ಮುಂಜಾನೆ 4.30ರ ಸುಮಾರಿಗೆ ಬ್ಯಾಟರಿ ಸ್ಫೋಟಗೊಂಡಿದ್ದು, ಈ ವೇಳೆ ಹಾಲ್​ನಲ್ಲಿ ಮಲಗಿದ್ದ ಬಾಲಕ ಅನ್ಸಾರಿ ಮತ್ತು ಆತನ ಅಜ್ಜಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅಜ್ಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ ಅನ್ಸಾರಿಗೆ ಶೇಕಡಾ 70 ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತೀವ್ರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅನ್ಸಾರಿ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಇದು ಡಿಟ್ಯಾಚೇಬಲ್ 24 ಎಎಚ್ ಲಿಥಿಯಂ ಫೆರೋ ಫಾಸ್ಫೇಟ್ (ಎಲ್‌ಎಫ್‌ಪಿ) ಬ್ಯಾಟರಿ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಈ ಬ್ಯಾಟರಿ ಅತಿಯಾಗಿ ಬಿಸಿಯಾದ ಹಿನ್ನೆಲೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಆದಾಗ್ಯೂ ‘ದೋಷಪೂರಿತ’ ಬ್ಯಾಟರಿಗೆ ಇ-ಸ್ಕೂಟರ್ ತಯಾರಕರನ್ನು ಅನ್ಸಾರಿ ಕುಟುಂಬ ದೂಷಿಸಿದೆ.

2022ರ ಆರಂಭದಿಂದಲೂ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಗಳು ಅಲ್ಲೊಂದು ಇಲ್ಲೊಂದು ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ನಡೆದಿವೆ. ಕೆಲವು ತಿಂಗಳ ಹಿಂದೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಎಲೆಕ್ಟ್ರಿಕ್ ವೆಹಿಕಲ್​ಗೆ ಬೆಂಕಿ ಹತ್ತಿಕೊಂಡಿತ್ತು. ದ್ವಿಚಕ್ರ ವಾಹನದ ಬ್ಯಾಟರಿ ಮನೆಯಲ್ಲಿ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು. ವಾಹನದ ಡಿಟ್ಯಾಚೇಬಲ್ ಬ್ಯಾಟರಿಯನ್ನು ಮಲಗುವ ಕೋಣೆಯಲ್ಲಿ ಚಾರ್ಜ್‌ನಲ್ಲಿ ಇರಿಸಲಾಗಿತ್ತು. ಆದರೆ ಎಲ್ಲರೂ ಗಾಢ ನಿದ್ದೆಯಲ್ಲಿದ್ದಾಗ ಮುಂಜಾನೆ ವೇಳೆ ಸ್ಫೋಟಗೊಂಡು ದುರಂತ ಸಂಭವಿಸಿತ್ತು.

ಮತ್ತಷ್ಟು ಉದ್ಯಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 3 October 22

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ