AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ratan Tata: ಉದ್ಯಮಿ ರತನ್ ಟಾಟಾಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಪ್ರದಾನ

ಅಸ್ಸಾಂನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಅಸ್ಸಾಂ ಬೈಭವ್​ ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರದಂದು ಮುಂಬೈನ ಕೊಲಾಬದಲ್ಲಿ ಪ್ರಮುಖ ಉದ್ಯಮಿ ರತನ್​ ಟಾಟಾಗೆ ಪ್ರದಾನ ಮಾಡಿದರು.

Ratan Tata: ಉದ್ಯಮಿ ರತನ್ ಟಾಟಾಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಪ್ರದಾನ
ಉದ್ಯಮಿ ರತನ್​ ಟಾಟಾಗೆ ಪ್ರಶಸ್ತಿ ಪ್ರದಾನ
TV9 Web
| Updated By: Srinivas Mata|

Updated on: Feb 17, 2022 | 8:07 AM

Share

ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್​ನ ಅಧ್ಯಕ್ಷರಾದ ರತನ್ ಟಾಟಾ (Ratan Tata) ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ “ಅಸ್ಸಾಂ ಬೈಭವ್” ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್​ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು ಫಲಕ, ನಗದು ಮೊತ್ತವಾದ 5 ಲಕ್ಷ ರೂಪಾಯಿ ಹಾಗೂ ಪದಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಜನವರಿ 24ರಂದು ಸಮಾರಂಭವೊಂದರಲ್ಲಿ ನೀಡಬೇಕಾಗಿತ್ತು. ಆದರೆ ವೈಯಕ್ತಿಕ ಕಾರಣಗಳಿಗಾಗಿ ರತನ್​ ಟಾಟಾ ಅವರಿಗೆ ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

“ಉದ್ಯಮಿಯಾಗಿ ಹಾಗೂ ದಾನಿಯಾಗಿ ರತನ್​ ಟಾಟಾ ಅವರು ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ,” ಎಂದು ಶರ್ಮಾ ಹೇಳಿದ್ದಾರೆ. ಜನವರಿ 24ನೇ ತಾರೀಕಿನಂದೇ ಅಸ್ಸಾಂ ರಾಜ್ಯಪಾಲರು ರಾಜ್ಯದ ಇತರ ಎರಡು ನಾಗರಿಕ ಪ್ರಶಸ್ತಿಗಳಾದ “ಅಸ್ಸಾಂ ಸೌರವ್” ಮತ್ತು “ಅಸ್ಸಾಂ ಗೌರವ್” ಅನ್ನು ವಿವಿಧ ಕ್ಷೇತ್ರದ 18 ಮಂದಿಗೆ ವಿತರಣೆ ಮಾಡಿದ್ದರು.

ಇದಕ್ಕೂ ಮುನ್ನ ಅಸ್ಸಾಂ ಸರ್ಕಾರವು ವಿವಿಧ ಕ್ಷೇತ್ರದ 18 ವಿವಿಧ ವ್ಯಕ್ತಿಗಳಿಗೆ ರಾಜ್ಯದ ಅತ್ಯುನ್ನತ ಮೂರು ನಾಗರಿಕ ಪ್ರಶಸ್ತಿಗಳನ್ನು ನೀಡಿದೆ. ಜನವರಿ 24ರಂದು ಗುವಾಹತಿಯ ಶ್ರೀಮಂತ ಶಂಕರ್​ದೇವ್ ಕಲಾಕ್ಷೇತ್ರದಲ್ಲಿ ನಡೆದ ಅಧಿಕೃತ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರತನ್​ ಟಾಟಾ ಅವರು ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ನಮ್ಮ ಮೇಲಿನ ವಿಶ್ವಾಸವೇ ನಮ್ಮನ್ನು ಕಾಪಾಡುತ್ತದೆ: ಹೆಸರಾಂತ ಉದ್ಯಮಿ ರತನ್ ಟಾಟಾ ಹಿತವಚನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ