AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ratan Tata: ಉದ್ಯಮಿ ರತನ್ ಟಾಟಾಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಪ್ರದಾನ

ಅಸ್ಸಾಂನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಅಸ್ಸಾಂ ಬೈಭವ್​ ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರದಂದು ಮುಂಬೈನ ಕೊಲಾಬದಲ್ಲಿ ಪ್ರಮುಖ ಉದ್ಯಮಿ ರತನ್​ ಟಾಟಾಗೆ ಪ್ರದಾನ ಮಾಡಿದರು.

Ratan Tata: ಉದ್ಯಮಿ ರತನ್ ಟಾಟಾಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಪ್ರದಾನ
ಉದ್ಯಮಿ ರತನ್​ ಟಾಟಾಗೆ ಪ್ರಶಸ್ತಿ ಪ್ರದಾನ
TV9 Web
| Edited By: |

Updated on: Feb 17, 2022 | 8:07 AM

Share

ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್​ನ ಅಧ್ಯಕ್ಷರಾದ ರತನ್ ಟಾಟಾ (Ratan Tata) ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ “ಅಸ್ಸಾಂ ಬೈಭವ್” ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್​ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು ಫಲಕ, ನಗದು ಮೊತ್ತವಾದ 5 ಲಕ್ಷ ರೂಪಾಯಿ ಹಾಗೂ ಪದಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಜನವರಿ 24ರಂದು ಸಮಾರಂಭವೊಂದರಲ್ಲಿ ನೀಡಬೇಕಾಗಿತ್ತು. ಆದರೆ ವೈಯಕ್ತಿಕ ಕಾರಣಗಳಿಗಾಗಿ ರತನ್​ ಟಾಟಾ ಅವರಿಗೆ ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

“ಉದ್ಯಮಿಯಾಗಿ ಹಾಗೂ ದಾನಿಯಾಗಿ ರತನ್​ ಟಾಟಾ ಅವರು ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ,” ಎಂದು ಶರ್ಮಾ ಹೇಳಿದ್ದಾರೆ. ಜನವರಿ 24ನೇ ತಾರೀಕಿನಂದೇ ಅಸ್ಸಾಂ ರಾಜ್ಯಪಾಲರು ರಾಜ್ಯದ ಇತರ ಎರಡು ನಾಗರಿಕ ಪ್ರಶಸ್ತಿಗಳಾದ “ಅಸ್ಸಾಂ ಸೌರವ್” ಮತ್ತು “ಅಸ್ಸಾಂ ಗೌರವ್” ಅನ್ನು ವಿವಿಧ ಕ್ಷೇತ್ರದ 18 ಮಂದಿಗೆ ವಿತರಣೆ ಮಾಡಿದ್ದರು.

ಇದಕ್ಕೂ ಮುನ್ನ ಅಸ್ಸಾಂ ಸರ್ಕಾರವು ವಿವಿಧ ಕ್ಷೇತ್ರದ 18 ವಿವಿಧ ವ್ಯಕ್ತಿಗಳಿಗೆ ರಾಜ್ಯದ ಅತ್ಯುನ್ನತ ಮೂರು ನಾಗರಿಕ ಪ್ರಶಸ್ತಿಗಳನ್ನು ನೀಡಿದೆ. ಜನವರಿ 24ರಂದು ಗುವಾಹತಿಯ ಶ್ರೀಮಂತ ಶಂಕರ್​ದೇವ್ ಕಲಾಕ್ಷೇತ್ರದಲ್ಲಿ ನಡೆದ ಅಧಿಕೃತ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರತನ್​ ಟಾಟಾ ಅವರು ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ನಮ್ಮ ಮೇಲಿನ ವಿಶ್ವಾಸವೇ ನಮ್ಮನ್ನು ಕಾಪಾಡುತ್ತದೆ: ಹೆಸರಾಂತ ಉದ್ಯಮಿ ರತನ್ ಟಾಟಾ ಹಿತವಚನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು