AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಾದಾಮಿ ಸೇವನೆಯ 5 ಆರೋಗ್ಯಕಾರಿ ಪ್ರಯೋಜನಗಳು

ಬಾದಾಮಿ ಸೇವನೆಯು ತೂಕ ನಿರ್ವಹಣೆ, ಕೊಲೆಸ್ಟ್ರಾಲ್ ನಿಯಂತ್ರಣ ಸೇರಿದಂತೆ ರೋಗಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ.

Health Tips: ಬಾದಾಮಿ ಸೇವನೆಯ 5 ಆರೋಗ್ಯಕಾರಿ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Jun 03, 2021 | 3:14 PM

Share

ಉತ್ತಮ ಆರೋಗ್ಯವನ್ನು ಹೊಂದಲು ಮಿತವಾಗಿ ಬಾದಾಮಿ ಸೇವನೆ ಮಾಡಲಾಗುವುದು. ಭಾರತೀಯರು ಬಾದಾಮಿಯನ್ನು ಹೇರಳವಾಗಿ ಬಳಸುತ್ತಾರೆ. ಹೃದಯ ಆರೋಗ್ಯಕ್ಕೂ ಬಾದಾಮಿ ಸೇವನೆ ಅತ್ಯತ್ತಮ. ಹಾಗಾದರೆ ಬಾದಮಿಯಿಂದ ಏನೇನು ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳೋಣ.

ಒಂದು ಕಪ್​ ಬಾದಾಮಿಯಲ್ಲಿ ಅಂದರೆ ಸುಮಾರು 20 ಬಾದಾಮಿ ಬೀಜಗಳಲ್ಲಿ ಶೇ.16 ರಷ್ಟು ಫೈಬರ್​ ಅಂಶ, ವಿಟಮಿನ್ ಇ ಗುಣ, ಶೇ.20ರಷ್ಟು ಮೆಗ್ನೀಶಿಯಂ ಹಾಗೂ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಪೊಟ್ಯಾಷಿಯಮ್​ ಅಂಶಗಳನ್ನು ಒಳಗೊಂಡಿರುತ್ತದೆ.

ರೋಗನಿರೋಧಕ ಶಕ್ತಿ, ಊರಿಯೂತ ಸಮಸ್ಯೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಬಾದಾಮಿ ಸೇವನೆ ಸಹಾಯವಾಗುತ್ತದೆ. ಕರುಳಿನಲ್ಲಿರುವ ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳಿಗೆ ಆಹಾರವಾಗಿ ಕೆಲಸ ಮಾಡುತ್ತದೆ. ತೂಕ ನಿರ್ವಹಣೆ, ಕೊಲೆಸ್ಟ್ರಾಲ್ ನಿಯಂತ್ರಣ ಸೇರಿದಂತೆ ರೋಗಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ.

ಹೃದಯ ರಕ್ಷಣೆಗೆ ಬೇಕಾದ ಎಚ್​ಡಿಎಲ್​ ಕೊಲೆಸ್ಟ್ರಾಲ್​ಅನ್ನು ಕಾಪಾಡಿಕೊಳ್ಳಲು ಅಥವಾ ಹೆಚ್ಚಿಸಲು ಬಾದಾಮಿ ಸೇವನೆ ಉತ್ತಮ. ಹಾಗೂ ದೇಹಕ್ಕೆ ಬೇಡದ ಎಲ್​ಡಿಎಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ರಕ್ತದೊತ್ತಡದಂಥಹ ಸಮಸ್ಯೆಯನ್ನು ನಿಭಾಯಿಸಲು ಬಾದಾಮಿ ಸೇವನೆ ಉತ್ತಮ.

ಬಾದಾಮಿ ಸೇವನೆಯು ತೂಕದ ನಿಯಂತ್ರಣ ಮಾಡಲು ಸಹಾಯಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆಯನ್ನು ಬಾದಾಮಿ ಹೊಂದಿರುವ ಕೊಬ್ಬು ಮತ್ತು ನಾರಿನಂಶದೊಂದಿಗೆ ಸಮತೋಲನದಲ್ಲಿರಿಸಲು ಸಹಾಯಕವಾಗಿದೆ. ಇದೊಂದೇ ಅಲ್ಲದೇ ಮಲಬದ್ಧತೆಯನ್ನು ಕಡಿಮೆ ಮಾಡಲು ಹಾಗೂ ತೂಕ ನಿಯಂತ್ರಿಸಿಕೊಳ್ಳಲು ಸಹಾಯಕಾರಿಯಾಗಿದೆ.

ಬಾದಾಮಿಯಲ್ಲಿ ಕಂಡು ಬರುವ ಖನಿಜ ಅಂಶವು ಮೂಳಗಳನ್ನು ಬಲಿಷ್ಠಗೊಳಿಸುತ್ತದೆ. ಹಾಗೂ ದವಡೆ, ಹಲ್ಲಿನಂತಹ ಭಾಗವನ್ನು ಗಟ್ಟಿ ಮಾಡುತ್ತದೆ. ಮೂಳೆಗಳ ಬಲಿಷ್ಠದ ಜತೆಗೆ ರಕ್ತದೊತ್ತಡದಂತಹ ಸಮಸ್ಯೆಗೆ ಪರಿಹಾರವನ್ನು ಪಡೆಯಲು ಸಾಧ್ಯ ಹಾಗೂ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಬಾದಾಮಿ ಸೇವನೆ ಸಹಾಯಕವಾಗಿದೆ. ಹಿತಮಿತವಾದ ಸೇವನೆಯಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಿ.

ಇದನ್ನೂ ಓದಿ: 

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು