Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಾದಾಮಿ ಸೇವನೆಯ 5 ಆರೋಗ್ಯಕಾರಿ ಪ್ರಯೋಜನಗಳು

ಬಾದಾಮಿ ಸೇವನೆಯು ತೂಕ ನಿರ್ವಹಣೆ, ಕೊಲೆಸ್ಟ್ರಾಲ್ ನಿಯಂತ್ರಣ ಸೇರಿದಂತೆ ರೋಗಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ.

Health Tips: ಬಾದಾಮಿ ಸೇವನೆಯ 5 ಆರೋಗ್ಯಕಾರಿ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jun 03, 2021 | 3:14 PM

ಉತ್ತಮ ಆರೋಗ್ಯವನ್ನು ಹೊಂದಲು ಮಿತವಾಗಿ ಬಾದಾಮಿ ಸೇವನೆ ಮಾಡಲಾಗುವುದು. ಭಾರತೀಯರು ಬಾದಾಮಿಯನ್ನು ಹೇರಳವಾಗಿ ಬಳಸುತ್ತಾರೆ. ಹೃದಯ ಆರೋಗ್ಯಕ್ಕೂ ಬಾದಾಮಿ ಸೇವನೆ ಅತ್ಯತ್ತಮ. ಹಾಗಾದರೆ ಬಾದಮಿಯಿಂದ ಏನೇನು ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳೋಣ.

ಒಂದು ಕಪ್​ ಬಾದಾಮಿಯಲ್ಲಿ ಅಂದರೆ ಸುಮಾರು 20 ಬಾದಾಮಿ ಬೀಜಗಳಲ್ಲಿ ಶೇ.16 ರಷ್ಟು ಫೈಬರ್​ ಅಂಶ, ವಿಟಮಿನ್ ಇ ಗುಣ, ಶೇ.20ರಷ್ಟು ಮೆಗ್ನೀಶಿಯಂ ಹಾಗೂ ಕ್ಯಾಲ್ಸಿಯಂ, ಕಬ್ಬಿಣ ಮತ್ತು ಪೊಟ್ಯಾಷಿಯಮ್​ ಅಂಶಗಳನ್ನು ಒಳಗೊಂಡಿರುತ್ತದೆ.

ರೋಗನಿರೋಧಕ ಶಕ್ತಿ, ಊರಿಯೂತ ಸಮಸ್ಯೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಬಾದಾಮಿ ಸೇವನೆ ಸಹಾಯವಾಗುತ್ತದೆ. ಕರುಳಿನಲ್ಲಿರುವ ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳಿಗೆ ಆಹಾರವಾಗಿ ಕೆಲಸ ಮಾಡುತ್ತದೆ. ತೂಕ ನಿರ್ವಹಣೆ, ಕೊಲೆಸ್ಟ್ರಾಲ್ ನಿಯಂತ್ರಣ ಸೇರಿದಂತೆ ರೋಗಕಾರಕ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ.

ಹೃದಯ ರಕ್ಷಣೆಗೆ ಬೇಕಾದ ಎಚ್​ಡಿಎಲ್​ ಕೊಲೆಸ್ಟ್ರಾಲ್​ಅನ್ನು ಕಾಪಾಡಿಕೊಳ್ಳಲು ಅಥವಾ ಹೆಚ್ಚಿಸಲು ಬಾದಾಮಿ ಸೇವನೆ ಉತ್ತಮ. ಹಾಗೂ ದೇಹಕ್ಕೆ ಬೇಡದ ಎಲ್​ಡಿಎಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ರಕ್ತದೊತ್ತಡದಂಥಹ ಸಮಸ್ಯೆಯನ್ನು ನಿಭಾಯಿಸಲು ಬಾದಾಮಿ ಸೇವನೆ ಉತ್ತಮ.

ಬಾದಾಮಿ ಸೇವನೆಯು ತೂಕದ ನಿಯಂತ್ರಣ ಮಾಡಲು ಸಹಾಯಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆಯನ್ನು ಬಾದಾಮಿ ಹೊಂದಿರುವ ಕೊಬ್ಬು ಮತ್ತು ನಾರಿನಂಶದೊಂದಿಗೆ ಸಮತೋಲನದಲ್ಲಿರಿಸಲು ಸಹಾಯಕವಾಗಿದೆ. ಇದೊಂದೇ ಅಲ್ಲದೇ ಮಲಬದ್ಧತೆಯನ್ನು ಕಡಿಮೆ ಮಾಡಲು ಹಾಗೂ ತೂಕ ನಿಯಂತ್ರಿಸಿಕೊಳ್ಳಲು ಸಹಾಯಕಾರಿಯಾಗಿದೆ.

ಬಾದಾಮಿಯಲ್ಲಿ ಕಂಡು ಬರುವ ಖನಿಜ ಅಂಶವು ಮೂಳಗಳನ್ನು ಬಲಿಷ್ಠಗೊಳಿಸುತ್ತದೆ. ಹಾಗೂ ದವಡೆ, ಹಲ್ಲಿನಂತಹ ಭಾಗವನ್ನು ಗಟ್ಟಿ ಮಾಡುತ್ತದೆ. ಮೂಳೆಗಳ ಬಲಿಷ್ಠದ ಜತೆಗೆ ರಕ್ತದೊತ್ತಡದಂತಹ ಸಮಸ್ಯೆಗೆ ಪರಿಹಾರವನ್ನು ಪಡೆಯಲು ಸಾಧ್ಯ ಹಾಗೂ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಬಾದಾಮಿ ಸೇವನೆ ಸಹಾಯಕವಾಗಿದೆ. ಹಿತಮಿತವಾದ ಸೇವನೆಯಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಿ.

ಇದನ್ನೂ ಓದಿ: 

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್