AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

How to book gas cylinder: ವಾಟ್ಸಾಪ್ ಮೂಲಕ ಇಂಡೇನ್, ಎಚ್​ಪಿ, ಭಾರತ್ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಹೇಗೆ?

ವಾಟ್ಸಾಪ್ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡುವುದು ಹೇಗೆ ಎಂಬ ಬಗ್ಗೆ ಹಂತಹಂತವಾದ ವಿವರಣೆ ಈ ಲೇಖನದಲ್ಲಿದೆ. ಬಹಳ ಸುಲಭವಾಗಿ ಈ ಮೂಲಕ ಸಿಲಿಂಡರ್ ಬುಕ್ ಮಾಡಬಹುದು.

How to book gas cylinder: ವಾಟ್ಸಾಪ್ ಮೂಲಕ ಇಂಡೇನ್, ಎಚ್​ಪಿ, ಭಾರತ್ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಹೇಗೆ?
ಸಾಂದರ್ಭಿಕ ಚಿತ್ರ
Srinivas Mata
|

Updated on: Apr 13, 2021 | 1:29 PM

Share

ನಿಮ್ಮ ಮನೆಗೆ ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಬೇಕಾ? ಇದೀಗ ಬಹಳ ಸಲೀಸಾಗಿದೆ ಅನ್ನೋ ಸಂಗತಿ ನಿಮಗೆ ಗೊತ್ತಾ? ಎಲ್​ಪಿಜಿ ಸಿಲಿಂಡರ್​ಗಳ ಗ್ರಾಹಕರು ಈಗ ವಾಟ್ಸಾಪ್ ಮತ್ತು ಎಸ್ಸೆಮ್ಮೆಸ್ ಮೂಲಕ ಬುಕ್ ಮಾಡಬಹುದು. ಗ್ರಾಹಕರಿಗೆ ಅನುಕೂಲ ಆಗಲಿ ಅನ್ನೋ ಉದ್ದೇಶಕ್ಕಾಗಿಯೇ ಕಳೆದ ವರ್ಷ ಗ್ಯಾಸ್ ಕಂಪೆನಿಗಳು ಆನ್​ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿ ಮಾಡಿದವು. ಗ್ಯಾಸ್ ಏಜೆನ್ಸಿಗಳು ಅಥವಾ ಡೀಲರ್​ಗಳಿಗೆ ತಿಳಿಸುವ ಮೂಲಕ, ವೆಬ್​ಸೈಟ್​ಗೆ ಭೇಟಿ ನೀಡಿ, ಸಂಸ್ಥೆಯ ವಾಟ್ಸಾಪ್ ಸಂಖ್ಯೆಗೆ ಟೆಕ್ಸ್ಟ್ ಸಂದೇಶ ಕಳುಹಿಸುವ ಮೂಲಕ ಕೂಡ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬಹುದು. ಆದ್ದರಿಂದ ಇಂಡೇನ್, ಎಚ್​ಪಿ ಮತ್ತು ಭಾರತ್ ಗ್ರಾಹಕರು ವಾಟ್ಸಾಪ್ ಮೂಲಕ ಹೇಗೆ ಸಿಲಿಂಡರ್ ಬುಕ್ ಮಾಡುತ್ತಾರೆ ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇಂಡೇನ್ ಗ್ರಾಹಕರು ಇಂಡೇನ್ ಗ್ರಾಹಕರು 7718955555ಕ್ಕೆ ಕರೆ ಮಾಡುವ ಮೂಲಕ ಎಲ್​​ಪಿಜಿ ಸಿಲಿಂಡರ್ ಬುಕ್ ಮಾಡಬಹುದು. ಇದರ ಜತೆಗೆ ವಾಟ್ಸಾಪ್ ಬಳಸಿ REFILL ಅಂತ ಟೈಪ್ ಮಾಡಿ, ಅದನ್ನು ವಾಟ್ಸಾಪ್ ಸಂಖ್ಯೆ 7588888824ಕ್ಕೆ ಕಳುಹಿಸಬೇಕು. ಗ್ರಾಹಕರು ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಾತ್ರ ಸಂದೇಶವನ್ನು ಕಳುಹಿಸಬೇಕು.

ಎಚ್​ಪಿ ಗ್ರಾಹಕರು ವಾಟ್ಸಾಪ್ ಮೂಲಕ 9222201122ಕ್ಕೆ ಸಂದೇಶ ಕಳುಹಿಸುವ ಮೂಲಕ ಎಚ್​ಪಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬಹುದು. ಇನ್ನು ಗ್ರಾಹಕರ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಈ ಮೇಲ್ಕಂಡ ವಾಟ್ಸಾಪ್ ಸಂಖ್ಯೆಗೆ BOOK ಎಂದು ಟೈಪ್ ಮಾಡಿ, ಕಳುಹಿಸಿದರೂ ಸಾಕು. ಈ ಸಂಖ್ಯೆಯು ಹಲವು ಬಗೆಯ ಇತರ ಸೇವೆಗಳನ್ನು ಸಹ ಒದಗಿಸುತ್ತದೆ. ಎಲ್​ಪಿಜಿ ಕೋಟಾ, ಎಲ್​ಪಿಜಿ ಐಡಿ, ಸಬ್ಸಿಡಿ ಮತ್ತಿತರ ಮಾಹಿತಿಗಳನ್ನು ಪಡೆಯಬಹುದು.

ಭಾರತ್ ಗ್ರಾಹಕರು ಭಾರತ್ ಗ್ಯಾಸ್ ಗ್ರಾಹಕರು BOOK ಅಥವಾ 1 ಅಂತ ಟೈಪ್ ಮಾಡಿ 1800224344 ಸಂಖ್ಯೆಗೆ ತಮ್ಮ ನೋಂದಾಯಿತ ಸಂಖ್ಯೆಯಿಂದ ಸಂದೇಶ ಕಳುಹಿಸಬೇಕು. ಆ ನಂತರ ಗ್ಯಾಸ್ ಏಜೆನ್ಸಿಯಿಂದ ಬುಕ್ಕಿಂಗ್ ಮನವಿಯನ್ನು ಸ್ವೀಕರಿಸಲಾಗುತ್ತದೆ. ಮತ್ತು ವಾಟ್ಸಾಪ್ ಸಂಖ್ಯೆಗೆ ಖಾತ್ರಿ ಸಂದೇಶ ಬರುತ್ತದೆ.

ಇದನ್ನೂ ಓದಿ: ಮುಖ ದೃಢೀಕರಣದ ಮೂಲಕವೂ ಈಗ ಆಧಾರ್​ ಕಾರ್ಡ್​ ಡೌನ್​ಲೋಡ್ ಸಾಧ್ಯ; ಯುಐಡಿಎಐ ವೆಬ್​ಸೈಟ್​ಗೆ ಹೋಗಿ ಈ ಕ್ರಮಗಳನ್ನು ಅನುಸರಿಸಿ

(How to book LPG gas cylinder through WhatsApp? Here are the step-by-step details.)

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?