AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನದಲ್ಲಿ 75 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆ; ಏನಿದರ ವಿಶೇಷತೆ?

ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಒಂದೇ ಪಥದಲ್ಲಿ 75 ಕಿಮೀ ಉದ್ದದ ಕಾಂಕ್ರೀಟ್ ರಸ್ತೆಯನ್ನು 5 ದಿನದಲ್ಲಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆಯನ್ನು ನಿರ್ಮಿಸಲಾಗಿದೆ. ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವೆ ಈ NH-53 ಹಾದು ಹೋಗುತ್ತದೆ.

5 ದಿನದಲ್ಲಿ 75 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆ; ಏನಿದರ ವಿಶೇಷತೆ?
ನಿತಿನ್​ ಗಡ್ಕರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 08, 2022 | 2:09 PM

ನವದೆಹಲಿ: ಭಾರತದಲ್ಲಿ ದಾಖಲೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಮೂಲಕ ಗಿನ್ನೆಸ್ ದಾಖಲೆ (Guinness World Record) ಸೃಷ್ಟಿಸಲಾಗಿದೆ. 105 ಗಂಟೆ 33 ನಿಮಿಷದಲ್ಲೇ 75 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲಾಗಿದೆ. ಡಾಂಬರು, ಕಾಂಕ್ರೀಟ್ ಹಾಕಿ ಅಮರಾವತಿ- ಅಂಕೋಲಾ ರಾಷ್ಟ್ರೀಯ ಹೆದ್ದಾರಿ-53 ನಿರ್ಮಾಣ ಮಾಡಲಾಗಿದೆ. ರಾಜ್​ಪಥ್ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಹಾಗೂ ಜಗದೀಶ್ ಕದಂ ಕಂಪನಿಗಳಿಂದ ಈ ಅತೊ ದೊಡ್ಡ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗಿದ್ದು, ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಈ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಲಹೆಗಾರರು ಮತ್ತು ರಾಜ್‌ಪಥ್ ಇನ್‌ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಒಂದೇ ಪಥದಲ್ಲಿ 75 ಕಿಮೀ ನಿರಂತರ ಬಿಟುಮಿನಸ್ ಕಾಂಕ್ರೀಟ್ ರಸ್ತೆ ನಿರ್ಮಿಸುವ ಮೂಲಕ ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವೆ NH-53 ಹಾದು ಹೋಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Rajya Sabha elections ರಾಜ್ಯಸಭಾ ಚುನಾವಣೆ ಹೇಗೆ ನಡೆಯುತ್ತದೆ? ಮತದಾನ ಪ್ರಕ್ರಿಯೆ ಹೇಗಿರುತ್ತದೆ? ಇಲ್ಲಿದೆ ಮಾಹಿತಿ
Image
Inspirational Story: 73ರ ಇಳಿ ವಯಸ್ಸಿನಲ್ಲೂ ಸೈಕಲ್​ನಲ್ಲೇ 2,500 ಕಿ.ಮೀ. ಪ್ರಯಾಣಿಸಿದ ವೃದ್ಧ
Image
Shocking News: ಪಬ್​ಜಿ ಆಡಬೇಡ ಎಂದ ಅಮ್ಮನನ್ನು ಕೊಂದ ಬಾಲಕ; ರೂಂ ಫ್ರೆಷನರ್​​ ಹಾಕಿ 2 ದಿನ ಶವ ಮುಚ್ಚಿಟ್ಟ!

ಈ ಸಾಧನೆಗಾಗಿ ಇಡೀ ತಂಡವನ್ನು ಅಭಿನಂದಿಸಿರುವ ಸಚಿವ ನಿತಿನ್ ಗಡ್ಕರಿ, “ಇಡೀ ರಾಷ್ಟ್ರಕ್ಕೆ ಇದು ಹೆಮ್ಮೆಯ ಕ್ಷಣ! ನಿರಂತರ 75 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಿಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಸಾಧಿಸಿದ್ದಕ್ಕಾಗಿ NHAI, ಕನ್ಸಲ್ಟೆಂಟ್ಸ್ ಮತ್ತು ಕನ್ಸೆಷನೇರ್, ರಾಜ್‌ಪಥ್ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರ ತಂಡವನ್ನು ಅಭಿನಂದಿಸಲು ತುಂಬಾ ಸಂತೋಷವಾಗುತ್ತಿದೆ. ಅಮರಾವತಿ ಮತ್ತು ಅಕೋಲಾ ನಡುವಿನ NH-53 ವಿಭಾಗದಲ್ಲಿ ಒಂದೇ ಪಥದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಈ ಅಸಾಮಾನ್ಯ ಸಾಧನೆಯನ್ನು ಸಾಧಿಸಲು ಹಗಲಿರುಳು ಶ್ರಮಿಸಿದ ನಮ್ಮ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. (Source)

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗೆ ಲಗ್ಗೆ ಇಟ್ಟ ಗಜಪಡೆ, ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರು!

ಈ ತಂಡವು ಜೂನ್ 3ರಂದು ಬೆಳಿಗ್ಗೆ 7:27ಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ನಿರ್ಮಿಸಲು ಪ್ರಾರಂಭಿಸಿತು. ಜೂನ್ 7ರಂದು ಸಂಜೆ 5 ಗಂಟೆಗೆ 75 ಕಿಮೀ ರಸ್ತೆಯನ್ನು ನಿರ್ಮಿಸಿ, 105 ಗಂಟೆ 33 ನಿಮಿಷಗಳ ದಾಖಲೆಯ ಸಮಯದಲ್ಲಿ ಅದನ್ನು ಪೂರ್ಣಗೊಳಿಸಿತು. ಎನ್‌ಎಚ್‌ಎಐನ ಸುಮಾರು 800 ಉದ್ಯೋಗಿಗಳು ಮತ್ತು ರಾಜ್‌ಪಥ್ ಇನ್‌ಫ್ರಾಕಾನ್‌ನ 720 ಕಾರ್ಮಿಕರು, ಸ್ವತಂತ್ರ ಸಲಹೆಗಾರರು ಸೇರಿದಂತೆ ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. 75 ಕಿ.ಮೀ ಏಕ ಪಥದ ರಸ್ತೆಯು 35 ಕಿಮೀ ದ್ವಿಪಥದ ರಸ್ತೆಗೆ ಸಮನಾಗಿರುತ್ತದೆ.

ಹೊಸದಾಗಿ ನಿರ್ಮಿಸಲಾದ ರಸ್ತೆಯ ಮಹತ್ವದ ಕುರಿತು ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, “ಅಮರಾವತಿಯಿಂದ ಅಕೋಲಾಕ್ಕೆ ಸಂಪರ್ಕಿಸುವ ಈ ರಸ್ತೆ ರಾಷ್ಟ್ರೀಯ ಹೆದ್ದಾರಿ 53ರ ಭಾಗವಾಗಿದೆ. ಇದು ಪ್ರಮುಖ ಪೂರ್ವ-ಪಶ್ಚಿಮ ಕಾರಿಡಾರ್ ಆಗಿದೆ. ಇದು ಪ್ರಮುಖ ನಗರಗಳಾದ ಕೋಲ್ಕತ್ತಾ, ರಾಯ್‌ಪುರ, ನಾಗ್‌ಪುರ, ಅಕೋಲಾ, ಧುಲೆ, ಮತ್ತು ಸೂರತ್ ಇದು ನಮ್ಮ ದೇಶದ ಖನಿಜ ಸಮೃದ್ಧ ಪ್ರದೇಶದ ಮೂಲಕ ಹಾದುಹೋಗುತ್ತದೆ. ಅಮರಾವತಿಯಿಂದ ಅಕೋಲಾವರೆಗಿನ ಈ ಭಾಗದಲ್ಲಿ ಸುಮಾರು ಶೇ. 35ರಷ್ಟು ಮತ್ತು ಅಕೋಲಾದಿಂದ ಚಿಕ್ಲಿ ವಿಭಾಗದಲ್ಲಿ ಸುಮಾರು ಶೇ. 65ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ನನಗೆ ತಿಳಿಸಲಾಗಿದೆ. ಹೀಗಾಗಿ, ಈ ಸಾಧನೆಯಿಂದ ಪ್ರಯಾಣಿಕರಿಗೆ ಹೆಚ್ಚಿನ ಸಮಾಧಾನ ಸಿಗಲಿದೆ, ಸಂಚಾರ ಸುಗಮವಾಗಲಿದೆ, ಪ್ರಯಾಣದ ಸಮಯವೂ ಕಡಿಮೆಯಾಗಲಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Wed, 8 June 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ