AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawa Electric Bike: ಶೀಘ್ರದಲ್ಲೇ ಬರಲಿದೆ ಜಾವಾ ಎಲೆಕ್ಟ್ರಿಕ್ ಬೈಕ್

ಈ ಬೈಕ್ ತ್ವರಿತ ಚಾರ್ಜಿಂಗ್ ಸೌಲಭ್ಯದೊಂದಿಗೆ ಬರಲಿದ್ದು, ಹಾಗೆಯೇ ಹೆಚ್ಚಿನ ವೇಗವನ್ನು ಇದರಲ್ಲಿ ನೀಡಲಾಗುತ್ತೆ ಎಂದು ಹೇಳಲಾಗಿದೆ. ಇದರಿಂದ ಜಾವಾ ಎಲೆಕ್ಟ್ರಿಕ್​ ಬೈಕ್​ನಲ್ಲಿ ಆರಾಮವಾಗಿ ಹೆಚ್ಚು ದೂರ ಪ್ರಯಾಣಿಸಬಹುದು.

Jawa Electric Bike: ಶೀಘ್ರದಲ್ಲೇ ಬರಲಿದೆ ಜಾವಾ ಎಲೆಕ್ಟ್ರಿಕ್ ಬೈಕ್
ಜಾವಾ ಎಲೆಕ್ಟ್ರಿಕ್ ಬೈಕ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 29, 2021 | 5:48 PM

Share

ಒಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಮತ್ತೊಂದೆಡೆ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ, ಬಹುತೇಕ ಎಲ್ಲಾ ವಾಹನ ಕಂಪನಿಗಳು ಎಲೆಕ್ಟ್ರಿಕ್ ವಾಹನ ಉತ್ಪಾದನೆಯತ್ತ ಗಮನ ಹರಿಸುತ್ತಿವೆ. ಈ ಪಟ್ಟಿಗೆ ಇತ್ತೀಚಿನ ಸೇರ್ಪಡೆ ರೆಟ್ರೊ ಮಾಡರ್ನ್ ಬೈಕ್ ಜಾವಾ.

ಹೌದು, ಕಳೆದ ವರ್ಷ ಬಿಡುಗಡೆ ಮಾಡಿದ್ದ ಜಾವಾ ಕೂಡ ಎಲೆಕ್ಟ್ರಿಕ್ ಬೈಕ್ ಆಗಲಿದೆ. ಈಗಾಗಲೇ ಹೊಸ ಮಾಡೆಲ್ ಬೈಕ್​ನ ವಿನ್ಯಾಸಗಳು ರೆಡಿಯಾಗಿದ್ದು, ಅದರ ಫಸ್ಟ್ ಲುಕ್ ಫೋಟೋಗಳು ವೈರಲ್ ಆಗಿವೆ. ಕೆಲ ಮೂಲಗಳ ಪ್ರಕಾರ ಹೊಸ ಜಾವಾ ಇವಿ 2022 ರಲ್ಲಿ ಬಿಡುಗಡೆ ಆಗಲಿದೆ.

ಪ್ರಸ್ತುತ ಮಾಹಿತಿ ಪ್ರಕಾರ ಈಗಾಗಲೇ ಬಿಡುಗಡೆಯಾಗಿರುವ ಜಾವಾ ಮಾದರಿಯಲ್ಲೇ ಎಲೆಕ್ಟ್ರಿಕ್ ಬೈಕ್​ಗಳ ವಿನ್ಯಾಸ ಮತ್ತು ವೈಶಿಷ್ಟ್ಯಗಳಿರಲಿದೆ. ಇದರ ಹೊರತಾಗಿ ಬ್ಯಾಟರಿ ಪ್ಯಾಕ್ ಅನ್ನು ಸಾಮಾನ್ಯ ಪೆಟ್ರೋಲ್ ಟ್ಯಾಂಕ್ ಅಡಿಯಲ್ಲಿರುವ ದೊಡ್ಡ ಸುತ್ತುವರಿದ ಕವಚದಲ್ಲಿ ರಚಿಸಲಾಗುತ್ತದೆ. ಹಾಗೆಯೇ ಚಾರ್ಜಿಂಗ್ ಪೋರ್ಟ್ ಮತ್ತು ಇತರ ವಿದ್ಯುತ್ ಘಟಕಗಳು ಟ್ಯಾಂಕ್‌ನ ಮೇಲ್ಭಾಗದಲ್ಲಿರಲಿದೆ.

ಇನ್ನು ಈ ಬೈಕ್ ತ್ವರಿತ ಚಾರ್ಜಿಂಗ್ ಸೌಲಭ್ಯದೊಂದಿಗೆ ಬರಲಿದ್ದು, ಹಾಗೆಯೇ ಹೆಚ್ಚಿನ ವೇಗವನ್ನು ಇದರಲ್ಲಿ ನೀಡಲಾಗುತ್ತೆ ಎಂದು ಹೇಳಲಾಗಿದೆ. ಇದರಿಂದ ಜಾವಾ ಎಲೆಕ್ಟ್ರಿಕ್​ ಬೈಕ್​ನಲ್ಲಿ ಆರಾಮವಾಗಿ ಹೆಚ್ಚು ದೂರ ಪ್ರಯಾಣಿಸಬಹುದು.

ಮುಂದಿನ ವರ್ಷ ಮಾರುಕಟ್ಟೆಗೆ: ಸದ್ಯದ ಮಾಹಿತಿ ಪ್ರಕಾರ ಹೊಸ ಎಲೆಕ್ಟ್ರಿಕ್ ಬೈಕ್ ಮುಂದಿನ ವರ್ಷದ ಅಂತ್ಯದ ವೇಳೆಗೆ ಭಾರತೀಯ ಮಾರುಕಟ್ಟೆಗೆ ಬರಲಿದೆ. ಆದರೆ ಈ ಬಗ್ಗೆ ಜಾವಾ ಕಂಪನಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಈ ಹಿಂದೆ, ಜಾವಾ ಎಲೆಕ್ಟ್ರಿಕ್ ಮೋಟಾರ್ ವಿಭಾಗಕ್ಕೆ ಪ್ರವೇಶಿಸಲಿದೆ ಎಂದು ವರದಿಯಾಗಿತ್ತು. ಅದರಂತೆ ದಸರಾ ಮತ್ತು ದೀಪಾವಳಿ ಹಬ್ಬದ ವೇಳೆ ಜಾವಾ ಎಲೆಕ್ಟ್ರಿಕ್ ಬೈಕ್ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸಬಹುದು.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(Jawa Electric Motorcycle Launch By Mid 2022)

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ